Categories: ಲೇಖನ

ಸಮಾಜ ಬದಲಾಗಬೇಕು ನಿಜ, ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು….?

” ಈ ಸಮಾಜ ಹಾಳಾಗಲು ಕೇವಲ ಕೆಟ್ಟವರು ಮಾತ್ರ ಕಾರಣವಲ್ಲ ಒಳ್ಳೆಯವರ ಮೌನವೂ ಕಾರಣ ”

ಜಗತ್ತಿನ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದು ಕರೆಯಲಾಗುವ ಆಲ್ಬರ್ಟ್ ಐನ್ ಸ್ಟೈನ್ ಅವರ ಮಾತುಗಳಿವು. ಆ ಅನುಭವದ ಅನಿಸಿಕೆಯ ಹಿನ್ನೆಲೆಯಲ್ಲಿ……

ಸಮಾಜ ಬದಲಾಗಬೇಕು ನಿಜ,
ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು.?

ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಮಾತ್ರಕ್ಕೆ ಕ್ರಾಂತಿ ಆಗುತ್ತದೆಯೇ ?

ಬಹಳಷ್ಟು ಮಹಾನುಭಾವರೇ ವಿಫಲವಾಗಿರುವಾಗ ನಿಮ್ಮಿಂದ ನಮ್ಮಿಂದ ಸಾಧ್ಯವೇ ?

ಎಲ್ಲವೂ ಹೇಳೋಕೆ, ಕೇಳೋಕೆ ಚೆಂದ. ಆದರೆ ವಾಸ್ತವ ಅಳವಡಿಕೆ ಅಸಾಧ್ಯ. !

ಶ್ರೀಮಂತರಿಗೆ ಬದಲಾವಣೆ ಅಗತ್ಯವಿಲ್ಲ. ಬಡವರಿಗೆ ಬದಲಾಯಿಸುವ ಶಕ್ತಿ ಇಲ್ಲ. !

ನಮ್ಮ ಜನ ಬದಲಾಗದೆ ಏನೂ ಮಾಡಲು ಸಾಧ್ಯವಿಲ್ಲ. !

ಮೊದಲು ನೀವು ಬದಲಾಗಿ,
ಆಮೇಲೆ ಬೇರೆಯವರ ಬಗ್ಗೆ ಮಾತನಾಡಿ.!

ಎಲ್ಲ ಎಲ್ಲವನರಿತು ಫಲವೇನು,
ತನ್ನ ತಾ ಅರಿಯಬೇಕಲ್ಲವೇ !

ಲೋಕದಾ ಡೊಂಕ ನೀವೇಕೆ ತಿದ್ದುವಿರು,
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ,
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ !

ಎಲ್ಲರೂ ಕಳ್ಳರು, ಎಲ್ಲರೂ ಭ್ರಷ್ಟರು, ಹಾಗಾದರೆ ಬದಲಾವಣೆ ಮಾಡುವುದು ಯಾರನ್ನು.?

ಬದಲಾವಣೆ ಒಂದು ಕನಸು ಭ್ರಮೆ. ಸುಮ್ಮನೆ ಬೇರೆ ಕೆಲಸ ನೋಡಿಕೊಳ್ಳಿ. !

ಜನ ಬದಲಾದರೆ ಸಮಾಜ ತನ್ನಿಂದ ತಾನೇ ಬದಲಾಗುತ್ತದೆ. !

ಸಮಾಜ ಬದಲಾಗಬೇಕಾದರೆ ಮೊದಲು ಜನ ಬದಲಾಗಬೇಕು. !

ಒಳ್ಳೆಯ ಸರ್ಕಾರದಿಂದ ಮಾತ್ರ ಬದಲಾವಣೆ ತರಲು ಸಾಧ್ಯ. !

ಸರ್ಕಾರ ಒಳ್ಳೆಯದು ಬರಬೇಕಾದರೆ ಮೊದಲು ಜನ ಬದಲಾಗಬೇಕು. !

ಹೌದು,
ಈ ರೀತಿಯ ಚರ್ಚೆಗಳು ದಿನನಿತ್ಯ ನಿರಂತರವಾಗಿ ಆಗುತ್ತಲೇ ಇದೆ.

ಸ್ವಲ್ಪ ಮಟ್ಟಿಗೆ ಉತ್ತರಗಳೂ ಸಿಗಬಹುದು.

ಅನೇಕರು ಅನೇಕ ರೀತಿಯಲ್ಲಿ ವ್ಯಾಖ್ಯಾನಿಸಬಹುದು.

ಬದಲಾವಣೆ ಒಪ್ಪದ ಜನ ಇನ್ನೂ ಅನೇಕ ರೀತಿಯಲ್ಲಿ ವೇದಾಂತಗಳನ್ನು ಉವಾಚಿಸಿ ನಮ್ಮ ಬಾಯಿ ಮುಚ್ಚಿಸಬಹುದು !

ಹಾಗೆಂದು ಸುಮ್ಮನೆ ಇರುವುದು ಉಚಿತವೇ ?

ಯಥಾಸ್ಥಿತಿ ಒಪ್ಪಿಕೊಂಡು ಸುಮ್ಮನೆ ಕುಳಿತುಕೊಳ್ಳಬೇಕೆ ?

ವ್ಯವಸ್ಥೆಯ ಲಾಭ ಪಡೆಯುತ್ತಿರುವ ಶೋಷಕರ ಶೋಷಣೆ ಪ್ರಶ್ನಿಸಬಾರದೆ ?

ಕನಿಷ್ಠ ನಮ್ಮ ಪ್ರಯತ್ನ ಮಾಡಬಾರದೆ‌ ?

ಆದರೆ ವಾಸ್ತವ. ?

ನಮ್ಮ ಮನಗಳಲ್ಲಿ,
ನಮ್ಮ ಮನೆಗಳಲ್ಲಿ,
ನಮ್ಮ ಮತಗಳಲ್ಲಿ.
ಬದಲಾವಣೆಯಾಗಬೇಕಿದೆ.

ಆಗ ನಮ್ಮೆಲ್ಲರ ಕನಸಿನ ಸಮ ಸಮಾಜದ ಕನಸು ಸಾಧ್ಯವಾಗಬಹುದು.

ಜನರ ಜೀವನಮಟ್ಟ ಸುಧಾರಣೆಯಾಗಬಹುದು.

ಅದಕ್ಕಾಗಿ ನಾವು ಮಾಡಬೇಕಾದ ಮೊದಲನೆಯ ಕೆಲಸ ಸಂಘಟನೆ ಅಥವಾ ಒಂದು ಗೂಡುವುದು.

ನಮ್ಮ ಮನಸ್ಸುಗಳನ್ನು ಜಾಗೃತಾವಸ್ಥೆಯಲ್ಲಿ ಇರುವಂತೆ ನೋಡಿಕೊಳ್ಳುವುದು.

ನಮ್ಮ ಸಂಪರ್ಕಕ್ಕೆ ಬರುವ ಎಲ್ಲರಿಗೂ ಈ ಬಗ್ಗೆ ಯೋಚಿಸುವಂತೆ ಮಾಡುವುದು.

ಆ ಬದಲಾವಣೆಯ ನಿರೀಕ್ಷೆಯಲ್ಲಿ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

4 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

10 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

11 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

14 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

15 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago