Categories: ಲೇಖನ

ಸಮಾಜ ಬದಲಾಗಬೇಕು ನಿಜ, ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು….?

” ಈ ಸಮಾಜ ಹಾಳಾಗಲು ಕೇವಲ ಕೆಟ್ಟವರು ಮಾತ್ರ ಕಾರಣವಲ್ಲ ಒಳ್ಳೆಯವರ ಮೌನವೂ ಕಾರಣ ”

ಜಗತ್ತಿನ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದು ಕರೆಯಲಾಗುವ ಆಲ್ಬರ್ಟ್ ಐನ್ ಸ್ಟೈನ್ ಅವರ ಮಾತುಗಳಿವು. ಆ ಅನುಭವದ ಅನಿಸಿಕೆಯ ಹಿನ್ನೆಲೆಯಲ್ಲಿ……

ಸಮಾಜ ಬದಲಾಗಬೇಕು ನಿಜ,
ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು.?

ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಮಾತ್ರಕ್ಕೆ ಕ್ರಾಂತಿ ಆಗುತ್ತದೆಯೇ ?

ಬಹಳಷ್ಟು ಮಹಾನುಭಾವರೇ ವಿಫಲವಾಗಿರುವಾಗ ನಿಮ್ಮಿಂದ ನಮ್ಮಿಂದ ಸಾಧ್ಯವೇ ?

ಎಲ್ಲವೂ ಹೇಳೋಕೆ, ಕೇಳೋಕೆ ಚೆಂದ. ಆದರೆ ವಾಸ್ತವ ಅಳವಡಿಕೆ ಅಸಾಧ್ಯ. !

ಶ್ರೀಮಂತರಿಗೆ ಬದಲಾವಣೆ ಅಗತ್ಯವಿಲ್ಲ. ಬಡವರಿಗೆ ಬದಲಾಯಿಸುವ ಶಕ್ತಿ ಇಲ್ಲ. !

ನಮ್ಮ ಜನ ಬದಲಾಗದೆ ಏನೂ ಮಾಡಲು ಸಾಧ್ಯವಿಲ್ಲ. !

ಮೊದಲು ನೀವು ಬದಲಾಗಿ,
ಆಮೇಲೆ ಬೇರೆಯವರ ಬಗ್ಗೆ ಮಾತನಾಡಿ.!

ಎಲ್ಲ ಎಲ್ಲವನರಿತು ಫಲವೇನು,
ತನ್ನ ತಾ ಅರಿಯಬೇಕಲ್ಲವೇ !

ಲೋಕದಾ ಡೊಂಕ ನೀವೇಕೆ ತಿದ್ದುವಿರು,
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ,
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ !

ಎಲ್ಲರೂ ಕಳ್ಳರು, ಎಲ್ಲರೂ ಭ್ರಷ್ಟರು, ಹಾಗಾದರೆ ಬದಲಾವಣೆ ಮಾಡುವುದು ಯಾರನ್ನು.?

ಬದಲಾವಣೆ ಒಂದು ಕನಸು ಭ್ರಮೆ. ಸುಮ್ಮನೆ ಬೇರೆ ಕೆಲಸ ನೋಡಿಕೊಳ್ಳಿ. !

ಜನ ಬದಲಾದರೆ ಸಮಾಜ ತನ್ನಿಂದ ತಾನೇ ಬದಲಾಗುತ್ತದೆ. !

ಸಮಾಜ ಬದಲಾಗಬೇಕಾದರೆ ಮೊದಲು ಜನ ಬದಲಾಗಬೇಕು. !

ಒಳ್ಳೆಯ ಸರ್ಕಾರದಿಂದ ಮಾತ್ರ ಬದಲಾವಣೆ ತರಲು ಸಾಧ್ಯ. !

ಸರ್ಕಾರ ಒಳ್ಳೆಯದು ಬರಬೇಕಾದರೆ ಮೊದಲು ಜನ ಬದಲಾಗಬೇಕು. !

ಹೌದು,
ಈ ರೀತಿಯ ಚರ್ಚೆಗಳು ದಿನನಿತ್ಯ ನಿರಂತರವಾಗಿ ಆಗುತ್ತಲೇ ಇದೆ.

ಸ್ವಲ್ಪ ಮಟ್ಟಿಗೆ ಉತ್ತರಗಳೂ ಸಿಗಬಹುದು.

ಅನೇಕರು ಅನೇಕ ರೀತಿಯಲ್ಲಿ ವ್ಯಾಖ್ಯಾನಿಸಬಹುದು.

ಬದಲಾವಣೆ ಒಪ್ಪದ ಜನ ಇನ್ನೂ ಅನೇಕ ರೀತಿಯಲ್ಲಿ ವೇದಾಂತಗಳನ್ನು ಉವಾಚಿಸಿ ನಮ್ಮ ಬಾಯಿ ಮುಚ್ಚಿಸಬಹುದು !

ಹಾಗೆಂದು ಸುಮ್ಮನೆ ಇರುವುದು ಉಚಿತವೇ ?

ಯಥಾಸ್ಥಿತಿ ಒಪ್ಪಿಕೊಂಡು ಸುಮ್ಮನೆ ಕುಳಿತುಕೊಳ್ಳಬೇಕೆ ?

ವ್ಯವಸ್ಥೆಯ ಲಾಭ ಪಡೆಯುತ್ತಿರುವ ಶೋಷಕರ ಶೋಷಣೆ ಪ್ರಶ್ನಿಸಬಾರದೆ ?

ಕನಿಷ್ಠ ನಮ್ಮ ಪ್ರಯತ್ನ ಮಾಡಬಾರದೆ‌ ?

ಆದರೆ ವಾಸ್ತವ. ?

ನಮ್ಮ ಮನಗಳಲ್ಲಿ,
ನಮ್ಮ ಮನೆಗಳಲ್ಲಿ,
ನಮ್ಮ ಮತಗಳಲ್ಲಿ.
ಬದಲಾವಣೆಯಾಗಬೇಕಿದೆ.

ಆಗ ನಮ್ಮೆಲ್ಲರ ಕನಸಿನ ಸಮ ಸಮಾಜದ ಕನಸು ಸಾಧ್ಯವಾಗಬಹುದು.

ಜನರ ಜೀವನಮಟ್ಟ ಸುಧಾರಣೆಯಾಗಬಹುದು.

ಅದಕ್ಕಾಗಿ ನಾವು ಮಾಡಬೇಕಾದ ಮೊದಲನೆಯ ಕೆಲಸ ಸಂಘಟನೆ ಅಥವಾ ಒಂದು ಗೂಡುವುದು.

ನಮ್ಮ ಮನಸ್ಸುಗಳನ್ನು ಜಾಗೃತಾವಸ್ಥೆಯಲ್ಲಿ ಇರುವಂತೆ ನೋಡಿಕೊಳ್ಳುವುದು.

ನಮ್ಮ ಸಂಪರ್ಕಕ್ಕೆ ಬರುವ ಎಲ್ಲರಿಗೂ ಈ ಬಗ್ಗೆ ಯೋಚಿಸುವಂತೆ ಮಾಡುವುದು.

ಆ ಬದಲಾವಣೆಯ ನಿರೀಕ್ಷೆಯಲ್ಲಿ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

2 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

13 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

18 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago