Categories: ಲೇಖನ

ಸಮಾಜ ಬದಲಾಗಬೇಕು ನಿಜ, ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು….?

” ಈ ಸಮಾಜ ಹಾಳಾಗಲು ಕೇವಲ ಕೆಟ್ಟವರು ಮಾತ್ರ ಕಾರಣವಲ್ಲ ಒಳ್ಳೆಯವರ ಮೌನವೂ ಕಾರಣ ”

ಜಗತ್ತಿನ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದು ಕರೆಯಲಾಗುವ ಆಲ್ಬರ್ಟ್ ಐನ್ ಸ್ಟೈನ್ ಅವರ ಮಾತುಗಳಿವು. ಆ ಅನುಭವದ ಅನಿಸಿಕೆಯ ಹಿನ್ನೆಲೆಯಲ್ಲಿ……

ಸಮಾಜ ಬದಲಾಗಬೇಕು ನಿಜ,
ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು.?

ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಮಾತ್ರಕ್ಕೆ ಕ್ರಾಂತಿ ಆಗುತ್ತದೆಯೇ ?

ಬಹಳಷ್ಟು ಮಹಾನುಭಾವರೇ ವಿಫಲವಾಗಿರುವಾಗ ನಿಮ್ಮಿಂದ ನಮ್ಮಿಂದ ಸಾಧ್ಯವೇ ?

ಎಲ್ಲವೂ ಹೇಳೋಕೆ, ಕೇಳೋಕೆ ಚೆಂದ. ಆದರೆ ವಾಸ್ತವ ಅಳವಡಿಕೆ ಅಸಾಧ್ಯ. !

ಶ್ರೀಮಂತರಿಗೆ ಬದಲಾವಣೆ ಅಗತ್ಯವಿಲ್ಲ. ಬಡವರಿಗೆ ಬದಲಾಯಿಸುವ ಶಕ್ತಿ ಇಲ್ಲ. !

ನಮ್ಮ ಜನ ಬದಲಾಗದೆ ಏನೂ ಮಾಡಲು ಸಾಧ್ಯವಿಲ್ಲ. !

ಮೊದಲು ನೀವು ಬದಲಾಗಿ,
ಆಮೇಲೆ ಬೇರೆಯವರ ಬಗ್ಗೆ ಮಾತನಾಡಿ.!

ಎಲ್ಲ ಎಲ್ಲವನರಿತು ಫಲವೇನು,
ತನ್ನ ತಾ ಅರಿಯಬೇಕಲ್ಲವೇ !

ಲೋಕದಾ ಡೊಂಕ ನೀವೇಕೆ ತಿದ್ದುವಿರು,
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ,
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ !

ಎಲ್ಲರೂ ಕಳ್ಳರು, ಎಲ್ಲರೂ ಭ್ರಷ್ಟರು, ಹಾಗಾದರೆ ಬದಲಾವಣೆ ಮಾಡುವುದು ಯಾರನ್ನು.?

ಬದಲಾವಣೆ ಒಂದು ಕನಸು ಭ್ರಮೆ. ಸುಮ್ಮನೆ ಬೇರೆ ಕೆಲಸ ನೋಡಿಕೊಳ್ಳಿ. !

ಜನ ಬದಲಾದರೆ ಸಮಾಜ ತನ್ನಿಂದ ತಾನೇ ಬದಲಾಗುತ್ತದೆ. !

ಸಮಾಜ ಬದಲಾಗಬೇಕಾದರೆ ಮೊದಲು ಜನ ಬದಲಾಗಬೇಕು. !

ಒಳ್ಳೆಯ ಸರ್ಕಾರದಿಂದ ಮಾತ್ರ ಬದಲಾವಣೆ ತರಲು ಸಾಧ್ಯ. !

ಸರ್ಕಾರ ಒಳ್ಳೆಯದು ಬರಬೇಕಾದರೆ ಮೊದಲು ಜನ ಬದಲಾಗಬೇಕು. !

ಹೌದು,
ಈ ರೀತಿಯ ಚರ್ಚೆಗಳು ದಿನನಿತ್ಯ ನಿರಂತರವಾಗಿ ಆಗುತ್ತಲೇ ಇದೆ.

ಸ್ವಲ್ಪ ಮಟ್ಟಿಗೆ ಉತ್ತರಗಳೂ ಸಿಗಬಹುದು.

ಅನೇಕರು ಅನೇಕ ರೀತಿಯಲ್ಲಿ ವ್ಯಾಖ್ಯಾನಿಸಬಹುದು.

ಬದಲಾವಣೆ ಒಪ್ಪದ ಜನ ಇನ್ನೂ ಅನೇಕ ರೀತಿಯಲ್ಲಿ ವೇದಾಂತಗಳನ್ನು ಉವಾಚಿಸಿ ನಮ್ಮ ಬಾಯಿ ಮುಚ್ಚಿಸಬಹುದು !

ಹಾಗೆಂದು ಸುಮ್ಮನೆ ಇರುವುದು ಉಚಿತವೇ ?

ಯಥಾಸ್ಥಿತಿ ಒಪ್ಪಿಕೊಂಡು ಸುಮ್ಮನೆ ಕುಳಿತುಕೊಳ್ಳಬೇಕೆ ?

ವ್ಯವಸ್ಥೆಯ ಲಾಭ ಪಡೆಯುತ್ತಿರುವ ಶೋಷಕರ ಶೋಷಣೆ ಪ್ರಶ್ನಿಸಬಾರದೆ ?

ಕನಿಷ್ಠ ನಮ್ಮ ಪ್ರಯತ್ನ ಮಾಡಬಾರದೆ‌ ?

ಆದರೆ ವಾಸ್ತವ. ?

ನಮ್ಮ ಮನಗಳಲ್ಲಿ,
ನಮ್ಮ ಮನೆಗಳಲ್ಲಿ,
ನಮ್ಮ ಮತಗಳಲ್ಲಿ.
ಬದಲಾವಣೆಯಾಗಬೇಕಿದೆ.

ಆಗ ನಮ್ಮೆಲ್ಲರ ಕನಸಿನ ಸಮ ಸಮಾಜದ ಕನಸು ಸಾಧ್ಯವಾಗಬಹುದು.

ಜನರ ಜೀವನಮಟ್ಟ ಸುಧಾರಣೆಯಾಗಬಹುದು.

ಅದಕ್ಕಾಗಿ ನಾವು ಮಾಡಬೇಕಾದ ಮೊದಲನೆಯ ಕೆಲಸ ಸಂಘಟನೆ ಅಥವಾ ಒಂದು ಗೂಡುವುದು.

ನಮ್ಮ ಮನಸ್ಸುಗಳನ್ನು ಜಾಗೃತಾವಸ್ಥೆಯಲ್ಲಿ ಇರುವಂತೆ ನೋಡಿಕೊಳ್ಳುವುದು.

ನಮ್ಮ ಸಂಪರ್ಕಕ್ಕೆ ಬರುವ ಎಲ್ಲರಿಗೂ ಈ ಬಗ್ಗೆ ಯೋಚಿಸುವಂತೆ ಮಾಡುವುದು.

ಆ ಬದಲಾವಣೆಯ ನಿರೀಕ್ಷೆಯಲ್ಲಿ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

4 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

4 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

4 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

6 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

10 hours ago