Categories: ಲೇಖನ

ಸಮಾಜ ಬದಲಾಗಬೇಕು ನಿಜ, ಆದರೆ, ಬೆಕ್ಕಿಗೆ ಗಂಟೆ ಕಟ್ಟುವವರು ಯಾರು….?

” ಈ ಸಮಾಜ ಹಾಳಾಗಲು ಕೇವಲ ಕೆಟ್ಟವರು ಮಾತ್ರ ಕಾರಣವಲ್ಲ ಒಳ್ಳೆಯವರ ಮೌನವೂ ಕಾರಣ ”

ಜಗತ್ತಿನ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದು ಕರೆಯಲಾಗುವ ಆಲ್ಬರ್ಟ್ ಐನ್ ಸ್ಟೈನ್ ಅವರ ಮಾತುಗಳಿವು. ಆ ಅನುಭವದ ಅನಿಸಿಕೆಯ ಹಿನ್ನೆಲೆಯಲ್ಲಿ……

ಸಮಾಜ ಬದಲಾಗಬೇಕು ನಿಜ,
ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು.?

ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಮಾತ್ರಕ್ಕೆ ಕ್ರಾಂತಿ ಆಗುತ್ತದೆಯೇ ?

ಬಹಳಷ್ಟು ಮಹಾನುಭಾವರೇ ವಿಫಲವಾಗಿರುವಾಗ ನಿಮ್ಮಿಂದ ನಮ್ಮಿಂದ ಸಾಧ್ಯವೇ ?

ಎಲ್ಲವೂ ಹೇಳೋಕೆ, ಕೇಳೋಕೆ ಚೆಂದ. ಆದರೆ ವಾಸ್ತವ ಅಳವಡಿಕೆ ಅಸಾಧ್ಯ. !

ಶ್ರೀಮಂತರಿಗೆ ಬದಲಾವಣೆ ಅಗತ್ಯವಿಲ್ಲ. ಬಡವರಿಗೆ ಬದಲಾಯಿಸುವ ಶಕ್ತಿ ಇಲ್ಲ. !

ನಮ್ಮ ಜನ ಬದಲಾಗದೆ ಏನೂ ಮಾಡಲು ಸಾಧ್ಯವಿಲ್ಲ. !

ಮೊದಲು ನೀವು ಬದಲಾಗಿ,
ಆಮೇಲೆ ಬೇರೆಯವರ ಬಗ್ಗೆ ಮಾತನಾಡಿ.!

ಎಲ್ಲ ಎಲ್ಲವನರಿತು ಫಲವೇನು,
ತನ್ನ ತಾ ಅರಿಯಬೇಕಲ್ಲವೇ !

ಲೋಕದಾ ಡೊಂಕ ನೀವೇಕೆ ತಿದ್ದುವಿರು,
ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ,
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ !

ಎಲ್ಲರೂ ಕಳ್ಳರು, ಎಲ್ಲರೂ ಭ್ರಷ್ಟರು, ಹಾಗಾದರೆ ಬದಲಾವಣೆ ಮಾಡುವುದು ಯಾರನ್ನು.?

ಬದಲಾವಣೆ ಒಂದು ಕನಸು ಭ್ರಮೆ. ಸುಮ್ಮನೆ ಬೇರೆ ಕೆಲಸ ನೋಡಿಕೊಳ್ಳಿ. !

ಜನ ಬದಲಾದರೆ ಸಮಾಜ ತನ್ನಿಂದ ತಾನೇ ಬದಲಾಗುತ್ತದೆ. !

ಸಮಾಜ ಬದಲಾಗಬೇಕಾದರೆ ಮೊದಲು ಜನ ಬದಲಾಗಬೇಕು. !

ಒಳ್ಳೆಯ ಸರ್ಕಾರದಿಂದ ಮಾತ್ರ ಬದಲಾವಣೆ ತರಲು ಸಾಧ್ಯ. !

ಸರ್ಕಾರ ಒಳ್ಳೆಯದು ಬರಬೇಕಾದರೆ ಮೊದಲು ಜನ ಬದಲಾಗಬೇಕು. !

ಹೌದು,
ಈ ರೀತಿಯ ಚರ್ಚೆಗಳು ದಿನನಿತ್ಯ ನಿರಂತರವಾಗಿ ಆಗುತ್ತಲೇ ಇದೆ.

ಸ್ವಲ್ಪ ಮಟ್ಟಿಗೆ ಉತ್ತರಗಳೂ ಸಿಗಬಹುದು.

ಅನೇಕರು ಅನೇಕ ರೀತಿಯಲ್ಲಿ ವ್ಯಾಖ್ಯಾನಿಸಬಹುದು.

ಬದಲಾವಣೆ ಒಪ್ಪದ ಜನ ಇನ್ನೂ ಅನೇಕ ರೀತಿಯಲ್ಲಿ ವೇದಾಂತಗಳನ್ನು ಉವಾಚಿಸಿ ನಮ್ಮ ಬಾಯಿ ಮುಚ್ಚಿಸಬಹುದು !

ಹಾಗೆಂದು ಸುಮ್ಮನೆ ಇರುವುದು ಉಚಿತವೇ ?

ಯಥಾಸ್ಥಿತಿ ಒಪ್ಪಿಕೊಂಡು ಸುಮ್ಮನೆ ಕುಳಿತುಕೊಳ್ಳಬೇಕೆ ?

ವ್ಯವಸ್ಥೆಯ ಲಾಭ ಪಡೆಯುತ್ತಿರುವ ಶೋಷಕರ ಶೋಷಣೆ ಪ್ರಶ್ನಿಸಬಾರದೆ ?

ಕನಿಷ್ಠ ನಮ್ಮ ಪ್ರಯತ್ನ ಮಾಡಬಾರದೆ‌ ?

ಆದರೆ ವಾಸ್ತವ. ?

ನಮ್ಮ ಮನಗಳಲ್ಲಿ,
ನಮ್ಮ ಮನೆಗಳಲ್ಲಿ,
ನಮ್ಮ ಮತಗಳಲ್ಲಿ.
ಬದಲಾವಣೆಯಾಗಬೇಕಿದೆ.

ಆಗ ನಮ್ಮೆಲ್ಲರ ಕನಸಿನ ಸಮ ಸಮಾಜದ ಕನಸು ಸಾಧ್ಯವಾಗಬಹುದು.

ಜನರ ಜೀವನಮಟ್ಟ ಸುಧಾರಣೆಯಾಗಬಹುದು.

ಅದಕ್ಕಾಗಿ ನಾವು ಮಾಡಬೇಕಾದ ಮೊದಲನೆಯ ಕೆಲಸ ಸಂಘಟನೆ ಅಥವಾ ಒಂದು ಗೂಡುವುದು.

ನಮ್ಮ ಮನಸ್ಸುಗಳನ್ನು ಜಾಗೃತಾವಸ್ಥೆಯಲ್ಲಿ ಇರುವಂತೆ ನೋಡಿಕೊಳ್ಳುವುದು.

ನಮ್ಮ ಸಂಪರ್ಕಕ್ಕೆ ಬರುವ ಎಲ್ಲರಿಗೂ ಈ ಬಗ್ಗೆ ಯೋಚಿಸುವಂತೆ ಮಾಡುವುದು.

ಆ ಬದಲಾವಣೆಯ ನಿರೀಕ್ಷೆಯಲ್ಲಿ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

7 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago