Categories: ಕೋಲಾರ

ಸಮಾನತೆಯಿಂದ ಜೀವಿಸುವ ಹಕ್ಕು ಸಂವಿಧಾನ ನೀಡಿದ ಕೊಡುಗೆ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ ಪ್ರತಿಯೊಂದು ಧರ್ಮಕ್ಕೂ ಒಂದೊಂದು ಗ್ರಂಥ ಇದೆ ಆದರೆ ಎಲ್ಲಾ ಧರ್ಮಗಳಿಗೂ ಸಂವಿಧಾನವೇ ಪವಿತ್ರ ಗ್ರಂಥ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಸೋಮವಾರ ಡಾ.ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಜ್ಜೆಗುರುತುಗಳನ್ನು ಅರಿತುಕೊಂಡು ಅವರ ಮಾರ್ಗದರ್ಶನದಲ್ಲಿ ನಾವು ಎಲ್ಲರೂ ನಡೆಯಬೇಕಾಗಿದೆ ವಿಶ್ವದ ಅತೀ ದೊಡ್ಡ ಪ್ರಜ್ಞಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸಿದ್ದಾರೆ ಇವತ್ತು ಶಾಂತಿ ಸುಗುಮವಾಗಿ ಭಾರತವು ಮುನ್ನೆಡೆಯುತ್ತಿದೆ ಎಂದರೆ ಅದಕ್ಕೆ ಭದ್ರ ತಳಪಾಯ ಹಾಕಿಕೊಟ್ಟಿರುವ ಸಂವಿಧಾನವೇ ಶ್ರೇಷ್ಠವಾಗಿದೆ ಅಭಿವೃದ್ಧಿಗೆ ಒಗ್ಗಟ್ಟು ಮತ್ತು ಸಾಮರಸ್ಯದಿಂದ ಹೋಗಬೇಕು ಎಂದರು.

ಭಾರತ ದೇಶದಲ್ಲಿ ಸಂವಿಧಾನ ಮೀಸಲಾತಿಯು ಇಲ್ಲದ ಸಂದರ್ಭದಲ್ಲಿ ಯಾರು ಓದದೇ ಇರುವಷ್ಟು ಪದವಿಗಳನ್ನು ಅಂಬೇಡ್ಕರ್ ಪಡೆದಿದ್ದಾರೆ. ಆದರೆ ಇವತ್ತು ಮೀಸಲಾತಿಯಲ್ಲಿ ಎಲ್ಲಾ ಅವಕಾಶಗಳು ಇದ್ದರೂ ಶಿಕ್ಷಣಕ್ಕೆ ಅಧ್ಯತೆ ನೀಡುತ್ತಿಲ್ಲ ಮೀಸಲಾತಿ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಸಮಾಜದಲ್ಲಿನ ಬಡವರಿಗೆ ಮೀಸಲಾತಿ ನೀಡಲಾಗುತ್ತಿದ್ದು ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಂಡು ಸಮಾಜಕ್ಕೆ ಒಳ್ಳೆಯ ರೀತಿಯಲ್ಲಿ ತಾವುಗಳು ಕಾಣಿಕೆ ನೀಡಬೇಕಾಗಿದೆ ಎಂದರು

ಈ ಸಂದರ್ಭದಲ್ಲಿ ಸಾಹಿತಿ ಡಾ.ಕುಪ್ಪಹಳ್ಳಿ ಬೈರಪ್ಪ ಮಾತನಾಡಿ, ದೇಶದಲ್ಲಿ ಅಷ್ಟೇ ಅಲ್ಲದೇ ವಿದೇಶದಲ್ಲೂ ಸಹ ವರ್ಷದ 365 ದಿನವು ನೆನಪು ಮಾಡಿಕೊಳ್ಳುವ ಮಹಾನ್ ಚೇತನ ಅಂಬೇಡ್ಕರ್ ಎಲ್ಲಿ ಭ್ರಷ್ಟಾಚಾರ, ಸಮಾನತೆ, ಅನ್ಯಾಯ ಕೂಡಿದೆ ಅಲ್ಲಿ ಸಂವಿಧಾನ ಪ್ರಸ್ತುತವೆನಿಸುತ್ತದೆ ಅಂಬೇಡ್ಕರ್ ಆಶಯಗಳನ್ನು ಬಲಪಡಿಸಲು ಇಂತಹ ಪುತ್ಥಳಿಗಳ ಅವಶ್ಯಕತೆ ಹೆಚ್ಚಾಗಬೇಕು ದೇಶದಲ್ಲಿ ಭಾಷಾವಾರು ಪ್ರಾಂತ್ಯಗಳ ವಿಂಗಡನೆಗೆ ಸಹ ಮಾರ್ಗದರ್ಶನ ನೀಡಿದ್ದಾರೆ ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆಯನ್ನು ನೀಡಬೇಕು ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೊನ್ನೇನಹಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷ ಮಂಜುನಾಥ್, ಪಿಡಿಒ ಹರೀಶ್ ಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಪಂ ಸಿಎ ಗಂಗಾಧರಯ್ಯ, ಮಾಜಿ ಗ್ರಾಪಂ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ವೆಂಕಟೇಶಪ್ಪ, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಖಾದ್ರಿಪುರ ಬಾಬು, ಹೊನ್ನೇನಹಳ್ಳಿ ಗ್ರಾಪಂ ಸದಸ್ಯರಾದ ಶ್ರೀನಾಥ್, ಗಣೇಶ್, ಜಯರಾಮ್, ಯಲ್ಲಮ್ಮ, ರೇಣುಕಮ್ಮ, ಶಿಲ್ಪಾ, ಸೌಂದರ್ಯ, ಅರುಣಾ, ಗೋವಿಂದರಾಜು, ಮುಂತಾದವರು ಇದ್ದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

7 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

9 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

10 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

11 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

12 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

18 hours ago