Categories: ಕೋಲಾರ

ಸಮಾನತೆಯಿಂದ ಜೀವಿಸುವ ಹಕ್ಕು ಸಂವಿಧಾನ ನೀಡಿದ ಕೊಡುಗೆ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ ಪ್ರತಿಯೊಂದು ಧರ್ಮಕ್ಕೂ ಒಂದೊಂದು ಗ್ರಂಥ ಇದೆ ಆದರೆ ಎಲ್ಲಾ ಧರ್ಮಗಳಿಗೂ ಸಂವಿಧಾನವೇ ಪವಿತ್ರ ಗ್ರಂಥ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಸೋಮವಾರ ಡಾ.ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಜ್ಜೆಗುರುತುಗಳನ್ನು ಅರಿತುಕೊಂಡು ಅವರ ಮಾರ್ಗದರ್ಶನದಲ್ಲಿ ನಾವು ಎಲ್ಲರೂ ನಡೆಯಬೇಕಾಗಿದೆ ವಿಶ್ವದ ಅತೀ ದೊಡ್ಡ ಪ್ರಜ್ಞಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸಿದ್ದಾರೆ ಇವತ್ತು ಶಾಂತಿ ಸುಗುಮವಾಗಿ ಭಾರತವು ಮುನ್ನೆಡೆಯುತ್ತಿದೆ ಎಂದರೆ ಅದಕ್ಕೆ ಭದ್ರ ತಳಪಾಯ ಹಾಕಿಕೊಟ್ಟಿರುವ ಸಂವಿಧಾನವೇ ಶ್ರೇಷ್ಠವಾಗಿದೆ ಅಭಿವೃದ್ಧಿಗೆ ಒಗ್ಗಟ್ಟು ಮತ್ತು ಸಾಮರಸ್ಯದಿಂದ ಹೋಗಬೇಕು ಎಂದರು.

ಭಾರತ ದೇಶದಲ್ಲಿ ಸಂವಿಧಾನ ಮೀಸಲಾತಿಯು ಇಲ್ಲದ ಸಂದರ್ಭದಲ್ಲಿ ಯಾರು ಓದದೇ ಇರುವಷ್ಟು ಪದವಿಗಳನ್ನು ಅಂಬೇಡ್ಕರ್ ಪಡೆದಿದ್ದಾರೆ. ಆದರೆ ಇವತ್ತು ಮೀಸಲಾತಿಯಲ್ಲಿ ಎಲ್ಲಾ ಅವಕಾಶಗಳು ಇದ್ದರೂ ಶಿಕ್ಷಣಕ್ಕೆ ಅಧ್ಯತೆ ನೀಡುತ್ತಿಲ್ಲ ಮೀಸಲಾತಿ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಸಮಾಜದಲ್ಲಿನ ಬಡವರಿಗೆ ಮೀಸಲಾತಿ ನೀಡಲಾಗುತ್ತಿದ್ದು ಅಂಬೇಡ್ಕರ್ ಅವರನ್ನು ಅರ್ಥ ಮಾಡಿಕೊಂಡು ಸಮಾಜಕ್ಕೆ ಒಳ್ಳೆಯ ರೀತಿಯಲ್ಲಿ ತಾವುಗಳು ಕಾಣಿಕೆ ನೀಡಬೇಕಾಗಿದೆ ಎಂದರು

ಈ ಸಂದರ್ಭದಲ್ಲಿ ಸಾಹಿತಿ ಡಾ.ಕುಪ್ಪಹಳ್ಳಿ ಬೈರಪ್ಪ ಮಾತನಾಡಿ, ದೇಶದಲ್ಲಿ ಅಷ್ಟೇ ಅಲ್ಲದೇ ವಿದೇಶದಲ್ಲೂ ಸಹ ವರ್ಷದ 365 ದಿನವು ನೆನಪು ಮಾಡಿಕೊಳ್ಳುವ ಮಹಾನ್ ಚೇತನ ಅಂಬೇಡ್ಕರ್ ಎಲ್ಲಿ ಭ್ರಷ್ಟಾಚಾರ, ಸಮಾನತೆ, ಅನ್ಯಾಯ ಕೂಡಿದೆ ಅಲ್ಲಿ ಸಂವಿಧಾನ ಪ್ರಸ್ತುತವೆನಿಸುತ್ತದೆ ಅಂಬೇಡ್ಕರ್ ಆಶಯಗಳನ್ನು ಬಲಪಡಿಸಲು ಇಂತಹ ಪುತ್ಥಳಿಗಳ ಅವಶ್ಯಕತೆ ಹೆಚ್ಚಾಗಬೇಕು ದೇಶದಲ್ಲಿ ಭಾಷಾವಾರು ಪ್ರಾಂತ್ಯಗಳ ವಿಂಗಡನೆಗೆ ಸಹ ಮಾರ್ಗದರ್ಶನ ನೀಡಿದ್ದಾರೆ ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆಯನ್ನು ನೀಡಬೇಕು ಎಂದರು

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೊನ್ನೇನಹಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷ ಮಂಜುನಾಥ್, ಪಿಡಿಒ ಹರೀಶ್ ಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಪಂ ಸಿಎ ಗಂಗಾಧರಯ್ಯ, ಮಾಜಿ ಗ್ರಾಪಂ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ವೆಂಕಟೇಶಪ್ಪ, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಖಾದ್ರಿಪುರ ಬಾಬು, ಹೊನ್ನೇನಹಳ್ಳಿ ಗ್ರಾಪಂ ಸದಸ್ಯರಾದ ಶ್ರೀನಾಥ್, ಗಣೇಶ್, ಜಯರಾಮ್, ಯಲ್ಲಮ್ಮ, ರೇಣುಕಮ್ಮ, ಶಿಲ್ಪಾ, ಸೌಂದರ್ಯ, ಅರುಣಾ, ಗೋವಿಂದರಾಜು, ಮುಂತಾದವರು ಇದ್ದರು.

Ramesh Babu

Journalist

Recent Posts

ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದ ಶಾಸಕ ಸಿ.ಬಿ.ಸುರೇಶ್ ಬಾಬು

  *ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

43 minutes ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

21 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

21 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

1 day ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago