ಸಮಾನತೆ ಕಾಪಾಡುವಲ್ಲಿ ನಾಗರಿಕ ಹಕ್ಕುಗಳ ಅರಿವು ಮುಖ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಒಂದು ನ್ಯಾಯಸಮ್ಮತ ಸಮಾಜವನ್ನು ಸ್ಥಾಪಿಸಲು ಭಾರತದ ಸಂವಿಧಾನದಲ್ಲಿ ಹಲವಾರು ವಿಧಿ ನಿಯಮಗಳನ್ನು ಜಾರಿಗೊಳಿಸಿದೆ ಅವುಗಳನ್ನು ಸಮಾಜದ ಬೆಳವಣಿಗೆಯಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜವನ್ನು ಕಾಣಬಹುದು ಹಾಗಾಗಿ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸುವ ಪ್ರಯತ್ನಗಳು ನಡೆಯಬೇಕು, ಸಾಮಾಜಿಕ ನ್ಯಾಯದ ಅರಿವು ಅವಶ್ಯಕ ಎಂದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ಆಡಳಿತ ತರಬೇತಿ ಸಂಸ್ಥೆ ಮೈಸೂರು ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯದ ಕುರಿತು ಒಂದು ದಿನದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾನತೆಯ ಅರಿವು ತಿಳಿದುಕೊಳ್ಳುವುದರಲ್ಲಿ ನಾವೆಲ್ಲ ಹಿಂದೆಯೇ ಉಳಿದಿದ್ದೇವೆ. ಅಂಬೇಡ್ಕರ್ ಅವರು ಹಲವಾರು ದೇಶಗಳನ್ನು ಸುತ್ತಿ ಅಲ್ಲಿನ ಭಾಷೆ, ಕಾನೂನು ವ್ಯವಸ್ಥೆ ಎಲ್ಲಾವನ್ನು ತಿಳಿದುಕೊಂಡು ನಮ್ಮ ದೇಶದ ಸಂಸ್ಕೃತಿ, ವ್ಯವಸ್ಥೆ ಎಲ್ಲಾವನ್ನು ಪರಿಗಣಿಸಿ ಸಧೃಡ ಸಂವಿಧಾನವನ್ನು ನೀಡಿದ್ದಾರೆ, ಹಿಂದಿನ ಕಾಲದಿಂದಲೂ ಈ ಅಸಮಾನತೆ ಎನ್ನುವುದು ಬೆಳೆಯುತ್ತಲೇ ಬಂದಿದೆ ಹಾಗಾಗಿ ನಾವೆಲ್ಲರು ಸಾಮಾಜಿಕ ನ್ಯಾಯದ ಬಗ್ಗೆ ತಿಳಿದುಕೊಳ್ಳಬೇಕು ಆಗ ಮಾತ್ರ ಸರ್ವರಿಗೂ ಎಲ್ಲಾದರಲು ಸಮಾನತೆ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಸಮಾನತೆಯ ಕನಸು ನನಸಾಗುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ಅವರು ಮಾತನಾಡಿ ಎಲ್ಲಾ ರೀತಿಯ ಕಾನೂನು ಕ್ರಮ ಇದ್ದರೂ ಈಗಲೂ ಜಾತಿ ಅಸಮಾನತೆ, ಜಾತಿನಿಂದನೆ ಹಾಗೂ ಸಾಮಾಜಿಕ ಅಸಮಾನತೆ ಸಮಾಜದಲ್ಲಿ ನಡೆಯುತ್ತಿರುವುದು ಇದೊಂದು ಕೆಟ್ಟ ಸಂಗತಿ. ಯಾವುದೇ ವ್ಯಕ್ತಿಗೆ ಹುಟ್ಟಿನಿಂದ ಸಾವಿನಿವರೆಗೂ ಜಾತಿ,ವರ್ಣ, ಲಿಂಗ, ಧರ್ಮದ ಆಧಾರದ ಮೇಲೆ ಬೇಧ ಭಾವ ಮಾಡಬಾರದು. ಸಮಾಜದಲ್ಲಿ ಸಮಾನತೆಯನ್ನು ಕಾಪಾಡುವುದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು. ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ಸಾಮಾಜಿಕ ನ್ಯಾಯದ ಮುಖ್ಯ ಉದ್ದೇಶವಾಗಿರುತ್ತದೆ ಹಾಗಾಗಿ ದೌರ್ಜನ್ಯವಾದರೆ ಅಥವಾ ದೌರ್ಜನ್ಯ ಕಂಡು ಬಂದರೆ ಯಾವುದೇ ರೀತಿಯ ಭಯ ಪಡದೇ ದೂರು ನೀಡುವಂತೆ ತಿಳಿಸಿದರು.

ಡಿ.ವೈ.ಎಸ್ಪಿ ರವಿ ಅವರು ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಮಾತನಾಡಿ ವಿಧಿ 14-18 ರವರೆಗು ಜಾತಿನಿಂದನೆ ಮತ್ತು ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಸಂವಿಧಾನದಲ್ಲಿ ತಿಳಿಸಲಾಗಿದೆ.ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ತಾರತಮ್ಯವನ್ನು ತಡೆಯುವ ಕಾನೂನು ಇದಾಗಿದೆ.1989 ರ ದೌರ್ಜನ್ಯ ತಡೆ ಕಾಯ್ದೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸದಸ್ಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು, ಅಂತಹ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸಲು ಜಾರಿಗೆ ತರಲಾಗಿದೆ. ಈ ಕಾಯ್ದೆಯಲ್ಲಿ ಯಾವುದೇ ಅನುಸೂಚಿತ ಜಾತಿ ಮತ್ತು ಪಂಗಡದವರಿಗೆ ಬಾಯಿಗೆ ವಸ್ತುವನ್ನು ತುರುಕಿದರೆ, ಮನೆಮುಂದೆ ಸತ್ತ ಪ್ರಾಣಿ ಹಾಕಿದರೆ, ಎಲ್ಲರ ಮುಂದೆ ತಲೆ ಮತ್ತು ಮೀಸೆ ಬೋಡಿಸಿದರೆ ಅಥವಾ ತೆಗೆದರೆ, ಜೀತಕ್ಕೆ ಬಳಸಿಕೊಂಡರೆ, ದೇವದಾಸಿ ಪದ್ಧತಿ, ಅಡ್ಡಿ ಪಡಿಸುವುದು, ಭಯ ಹುಟ್ಟಿಸುವುದು, ಮತ ಹಾಕುವುದನ್ನು ತಡೆಯುವುದು ಅಥವಾ ನೀನು ನಮ್ಮ ಪಕ್ಷಕ್ಕೆ ಮತ ಹಾಕಬೇಕು ಎನ್ನುವುದು, ಈ ರೀತಿ ಅವರ ಭಾವನೆಗೆ ದಕ್ಕೆ ತರುವಂತಹ ಯಾವುದೇ ರೀತಿಯ ಅಡಚಣೆಯನ್ನು ಮಾಡಬಾರದು ಮಾಡಿದರೆ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಬಹುದು.ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾಡಿದ್ದಲ್ಲಿ 6 ತಿಂಗಳು ಅಥವಾ ಜೀವಿತವಧಿವರೆಗೂ ಶಿಕ್ಷೆಯಾಗುವ ಅವಕಾಶವಿರುತ್ತದೆ ಎಂದರು.

ಅರಿವು ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಪರಿಕಲ್ಪನೆ ಹಾಗೂ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ಅಧಿನಿಯಮ ಮತ್ತು ನಿಯಮಗಳ ಬಗ್ಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ವಿಷಯವನ್ನು ಕುರಿತು ಕಾರ್ಯಗಾರ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಡಾ.ಬಿ.ಆರ್ ಅಂಬೇಡ್ಕರ್ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ಆಡಳಿತ ತರಬೇತಿ ಸಂಸ್ಥೆಯ ತರಬೇತಿ ಸಂಯೋಜಕರಾದ ಡಾ. ಸಚಿನ್ ಬಿ.ಎಸ್ ಹಾಗೂ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 minutes ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

50 minutes ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

2 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

10 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago