ಸಮಾನತೆ ಕಾಪಾಡುವಲ್ಲಿ ನಾಗರಿಕ ಹಕ್ಕುಗಳ ಅರಿವು ಮುಖ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಒಂದು ನ್ಯಾಯಸಮ್ಮತ ಸಮಾಜವನ್ನು ಸ್ಥಾಪಿಸಲು ಭಾರತದ ಸಂವಿಧಾನದಲ್ಲಿ ಹಲವಾರು ವಿಧಿ ನಿಯಮಗಳನ್ನು ಜಾರಿಗೊಳಿಸಿದೆ ಅವುಗಳನ್ನು ಸಮಾಜದ ಬೆಳವಣಿಗೆಯಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜವನ್ನು ಕಾಣಬಹುದು ಹಾಗಾಗಿ ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸುವ ಪ್ರಯತ್ನಗಳು ನಡೆಯಬೇಕು, ಸಾಮಾಜಿಕ ನ್ಯಾಯದ ಅರಿವು ಅವಶ್ಯಕ ಎಂದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ಆಡಳಿತ ತರಬೇತಿ ಸಂಸ್ಥೆ ಮೈಸೂರು ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಮಾಜಿಕ ನ್ಯಾಯದ ಕುರಿತು ಒಂದು ದಿನದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾನತೆಯ ಅರಿವು ತಿಳಿದುಕೊಳ್ಳುವುದರಲ್ಲಿ ನಾವೆಲ್ಲ ಹಿಂದೆಯೇ ಉಳಿದಿದ್ದೇವೆ. ಅಂಬೇಡ್ಕರ್ ಅವರು ಹಲವಾರು ದೇಶಗಳನ್ನು ಸುತ್ತಿ ಅಲ್ಲಿನ ಭಾಷೆ, ಕಾನೂನು ವ್ಯವಸ್ಥೆ ಎಲ್ಲಾವನ್ನು ತಿಳಿದುಕೊಂಡು ನಮ್ಮ ದೇಶದ ಸಂಸ್ಕೃತಿ, ವ್ಯವಸ್ಥೆ ಎಲ್ಲಾವನ್ನು ಪರಿಗಣಿಸಿ ಸಧೃಡ ಸಂವಿಧಾನವನ್ನು ನೀಡಿದ್ದಾರೆ, ಹಿಂದಿನ ಕಾಲದಿಂದಲೂ ಈ ಅಸಮಾನತೆ ಎನ್ನುವುದು ಬೆಳೆಯುತ್ತಲೇ ಬಂದಿದೆ ಹಾಗಾಗಿ ನಾವೆಲ್ಲರು ಸಾಮಾಜಿಕ ನ್ಯಾಯದ ಬಗ್ಗೆ ತಿಳಿದುಕೊಳ್ಳಬೇಕು ಆಗ ಮಾತ್ರ ಸರ್ವರಿಗೂ ಎಲ್ಲಾದರಲು ಸಮಾನತೆ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಸಮಾನತೆಯ ಕನಸು ನನಸಾಗುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ಅವರು ಮಾತನಾಡಿ ಎಲ್ಲಾ ರೀತಿಯ ಕಾನೂನು ಕ್ರಮ ಇದ್ದರೂ ಈಗಲೂ ಜಾತಿ ಅಸಮಾನತೆ, ಜಾತಿನಿಂದನೆ ಹಾಗೂ ಸಾಮಾಜಿಕ ಅಸಮಾನತೆ ಸಮಾಜದಲ್ಲಿ ನಡೆಯುತ್ತಿರುವುದು ಇದೊಂದು ಕೆಟ್ಟ ಸಂಗತಿ. ಯಾವುದೇ ವ್ಯಕ್ತಿಗೆ ಹುಟ್ಟಿನಿಂದ ಸಾವಿನಿವರೆಗೂ ಜಾತಿ,ವರ್ಣ, ಲಿಂಗ, ಧರ್ಮದ ಆಧಾರದ ಮೇಲೆ ಬೇಧ ಭಾವ ಮಾಡಬಾರದು. ಸಮಾಜದಲ್ಲಿ ಸಮಾನತೆಯನ್ನು ಕಾಪಾಡುವುದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು. ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ಸಾಮಾಜಿಕ ನ್ಯಾಯದ ಮುಖ್ಯ ಉದ್ದೇಶವಾಗಿರುತ್ತದೆ ಹಾಗಾಗಿ ದೌರ್ಜನ್ಯವಾದರೆ ಅಥವಾ ದೌರ್ಜನ್ಯ ಕಂಡು ಬಂದರೆ ಯಾವುದೇ ರೀತಿಯ ಭಯ ಪಡದೇ ದೂರು ನೀಡುವಂತೆ ತಿಳಿಸಿದರು.

ಡಿ.ವೈ.ಎಸ್ಪಿ ರವಿ ಅವರು ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಮಾತನಾಡಿ ವಿಧಿ 14-18 ರವರೆಗು ಜಾತಿನಿಂದನೆ ಮತ್ತು ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಸಂವಿಧಾನದಲ್ಲಿ ತಿಳಿಸಲಾಗಿದೆ.ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಮತ್ತು ತಾರತಮ್ಯವನ್ನು ತಡೆಯುವ ಕಾನೂನು ಇದಾಗಿದೆ.1989 ರ ದೌರ್ಜನ್ಯ ತಡೆ ಕಾಯ್ದೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸದಸ್ಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು, ಅಂತಹ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸಲು ಜಾರಿಗೆ ತರಲಾಗಿದೆ. ಈ ಕಾಯ್ದೆಯಲ್ಲಿ ಯಾವುದೇ ಅನುಸೂಚಿತ ಜಾತಿ ಮತ್ತು ಪಂಗಡದವರಿಗೆ ಬಾಯಿಗೆ ವಸ್ತುವನ್ನು ತುರುಕಿದರೆ, ಮನೆಮುಂದೆ ಸತ್ತ ಪ್ರಾಣಿ ಹಾಕಿದರೆ, ಎಲ್ಲರ ಮುಂದೆ ತಲೆ ಮತ್ತು ಮೀಸೆ ಬೋಡಿಸಿದರೆ ಅಥವಾ ತೆಗೆದರೆ, ಜೀತಕ್ಕೆ ಬಳಸಿಕೊಂಡರೆ, ದೇವದಾಸಿ ಪದ್ಧತಿ, ಅಡ್ಡಿ ಪಡಿಸುವುದು, ಭಯ ಹುಟ್ಟಿಸುವುದು, ಮತ ಹಾಕುವುದನ್ನು ತಡೆಯುವುದು ಅಥವಾ ನೀನು ನಮ್ಮ ಪಕ್ಷಕ್ಕೆ ಮತ ಹಾಕಬೇಕು ಎನ್ನುವುದು, ಈ ರೀತಿ ಅವರ ಭಾವನೆಗೆ ದಕ್ಕೆ ತರುವಂತಹ ಯಾವುದೇ ರೀತಿಯ ಅಡಚಣೆಯನ್ನು ಮಾಡಬಾರದು ಮಾಡಿದರೆ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಬಹುದು.ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಾಡಿದ್ದಲ್ಲಿ 6 ತಿಂಗಳು ಅಥವಾ ಜೀವಿತವಧಿವರೆಗೂ ಶಿಕ್ಷೆಯಾಗುವ ಅವಕಾಶವಿರುತ್ತದೆ ಎಂದರು.

ಅರಿವು ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಪರಿಕಲ್ಪನೆ ಹಾಗೂ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ಅಧಿನಿಯಮ ಮತ್ತು ನಿಯಮಗಳ ಬಗ್ಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ವಿಷಯವನ್ನು ಕುರಿತು ಕಾರ್ಯಗಾರ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಡಾ.ಬಿ.ಆರ್ ಅಂಬೇಡ್ಕರ್ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕೇಂದ್ರ ಆಡಳಿತ ತರಬೇತಿ ಸಂಸ್ಥೆಯ ತರಬೇತಿ ಸಂಯೋಜಕರಾದ ಡಾ. ಸಚಿನ್ ಬಿ.ಎಸ್ ಹಾಗೂ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 hour ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

5 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

7 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

9 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago