Categories: ಕೋಲಾರ

ಸಮುದಾಯ ಸಂಘಟನೆಯಿಂದ ಸೌಹಾರ್ದ ಸಂಕ್ರಾಂತಿ ಆಚರಣೆ

ಕೋಲಾರ: ನಗರದ ಗಾಂಧಿವನದಲ್ಲಿ ಸೋಮವಾರ ಸಮುದಾಯ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಎಳ್ಳು ಬೆಲ್ಲವನ್ನು ಪರಸ್ಪರ ಹಂಚಿ ತಿನ್ನುವ ಮೂಲಕ ಸೌಹಾರ್ದ ಸಂಕ್ರಾಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ದೇಶದಲ್ಲಿ ಸೌಹಾರ್ದ, ಸಮೃದ್ದಿ, ಸಾಮರಸ್ಯಕ್ಕೆ ಕೋಮುವಾದವು ಅಡ್ಡಿಯಾಗಿದೆ ಕೋಮುವಾದದಿಂದ ಜಾತ್ಯಾತೀತವಾದಕ್ಕೆ ದೇಶವನ್ನು ತರಬೇಕಾಗಿದೆ ಸೌಹಾರ್ದತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲಬೇಕು ಈ ಆಚರಣೆ ಬರಿ ಹಬ್ಬಕ್ಕೆ ಮಾತ್ರವೇ ಸೀಮಿತಗೊಳಿಸದೇ ಪ್ರತಿಯೊಂದು ವಿಚಾರದಲ್ಲೂ ಸೌಹಾರ್ದತೆಯನ್ನು ಸಾರುವ ಆಚರಣೆಗಳ ಮೂಲಕ ನಿಜವಾದ ಭಾರತವನ್ನು ಸೌಹಾರ್ದ ಕಾರ್ಯಕ್ರಮಗಳಿಂದ ಹೊಸತನವನ್ನು ಕಟ್ಟಬೇಕಿದೆ ಎಂದರು.

ಈ ಸಂದರ್ಭದಲ್ಲಿ ಜೆಎಂಎಸ್ ಮುಖಂಡರಾದ ವಿ.ಗೀತಾ ಮಾತನಾಡಿ ಭಾರತ ದೇಶವು ವಿವಿಧತೆಯನ್ನು ಹೊಂದಿದ್ದು ವಿಭಿನ್ನ ನಡೆ.ಭಾಷೆ, ಧರ್ಮ, ಜಾತಿಗಳ ಮೂಲಕ ಹೋಗುತ್ತಾ ಇದ್ದರು ಇತ್ತೀಚೆಗೆ ಕೆಲವರು ಒಂದು ಧರ್ಮಕ್ಕೆ ಸೀಮಿತಗೊಳಿಸಲು ಹೊರಟಿದ್ದಾರೆ ಸೌಹಾರ್ದ ನಾಡಿನಲ್ಲಿ ಮೂಲಭೂತವಾದವನ್ನು ಹಿಮ್ಮೆಟ್ಟಿಸಬೇಕು ಹಳೆ ಮತದ ಕೊಳೆಯನ್ನು ತೊಡೆಯಬೇಕು. ಸ್ವಾರ್ಥ, ದ್ವೇಷದಿಂದ ದೇಶ ಕಟ್ಟಲು ಸಾಧ್ಯವಿಲ್ಲ. ಜಾತಿ, ಧರ್ಮ, ಲಿಂಗ ಎಲ್ಲಾ ರೀತಿಯ ಭೇದವನ್ನು ಮೀರಿ ನಾವು ಮನುಜ ಮತ ವಿಶ್ವಪಥದತ್ತ ಹೋಗಲು ಇಂತಹ ಸೌಹಾರ್ದತೆಯ ಸಣ್ಣ ಸಣ್ಣ ಕಾರ್ಯಕ್ರಮವೇ ಸೌಹಾರ್ದ ಭಾರತ ಕಟ್ಟಲು ದಾರಿ ಎಂದರು.

ದೇಶದಲ್ಲಿ ಅಯೋಧ್ಯೆಯ ರಾಮಮಂದಿರವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಾ ಇದ್ದು ನಮ್ಮನ್ನು ಆಳುವ ಸರಕಾರ ಮಂದಿರಕ್ಕಿಂತ ಉದ್ಯೋಗ ಶಿಕ್ಷದ ಬಗ್ಗೆ ಅಲೋಚಿಸಬೇಕಾಗಿದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಆಶಯಗಳನ್ನು ಜಾರಿ ಮಾಡಬೇಕು ಹೊರತು ಒಂದು ಧರ್ಮ ಜಾತಿಗೆ ದೇಶವನ್ನು ಸೀಮಿತಗೊಳಿಸಬಾರದು ಸೌಹಾರ್ದತೆಗಾಗಿ ಜ.30 ರಂದು ದೇಶಾದ್ಯಂತ ಮಾನವ ಸರಪಳಿ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿತ್ತು ಹೆಚ್ಚಿನ ಸಂಖ್ಯೆಯಲ್ಲಿ ಪ್ರಗತಿಪರು ಭಾಗವಹಿಸುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಅಬ್ಬಣಿ ಶಿವಪ್ಪ, ವಿಜಯಕೃಷ್ಣ, ಗಾಂಧಿನಗರ ಸುಬ್ರಮಣಿ, ಕೆ.ವಿ ಮಂಜುನಾಥ್, ಭೀಮರಾಜ್, ಸಲ್ಲಾವುದ್ದೀನ್ ಬಾಬು, ಅಪ್ರೋಜ್ ಪಾಷ, ಎಂ.ವಿ ನಾರಾಯಣಸ್ವಾಮಿ, ಕೊಂಡರಾಜನಹಳ್ಳಿ ಮಂಜುಳ, ಮಹಮ್ಮದ್ ಮುಸ್ತಫಾ, ಆನಂದ್ ಕುಮಾರ್, ಸತೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

7 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

8 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

20 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

21 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

21 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

22 hours ago