Categories: ಕೋಲಾರ

ಸಮುದಾಯ ಸಂಘಟನೆಯಿಂದ ಸೌಹಾರ್ದ ಸಂಕ್ರಾಂತಿ ಆಚರಣೆ

ಕೋಲಾರ: ನಗರದ ಗಾಂಧಿವನದಲ್ಲಿ ಸೋಮವಾರ ಸಮುದಾಯ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಎಳ್ಳು ಬೆಲ್ಲವನ್ನು ಪರಸ್ಪರ ಹಂಚಿ ತಿನ್ನುವ ಮೂಲಕ ಸೌಹಾರ್ದ ಸಂಕ್ರಾಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ದೇಶದಲ್ಲಿ ಸೌಹಾರ್ದ, ಸಮೃದ್ದಿ, ಸಾಮರಸ್ಯಕ್ಕೆ ಕೋಮುವಾದವು ಅಡ್ಡಿಯಾಗಿದೆ ಕೋಮುವಾದದಿಂದ ಜಾತ್ಯಾತೀತವಾದಕ್ಕೆ ದೇಶವನ್ನು ತರಬೇಕಾಗಿದೆ ಸೌಹಾರ್ದತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲಬೇಕು ಈ ಆಚರಣೆ ಬರಿ ಹಬ್ಬಕ್ಕೆ ಮಾತ್ರವೇ ಸೀಮಿತಗೊಳಿಸದೇ ಪ್ರತಿಯೊಂದು ವಿಚಾರದಲ್ಲೂ ಸೌಹಾರ್ದತೆಯನ್ನು ಸಾರುವ ಆಚರಣೆಗಳ ಮೂಲಕ ನಿಜವಾದ ಭಾರತವನ್ನು ಸೌಹಾರ್ದ ಕಾರ್ಯಕ್ರಮಗಳಿಂದ ಹೊಸತನವನ್ನು ಕಟ್ಟಬೇಕಿದೆ ಎಂದರು.

ಈ ಸಂದರ್ಭದಲ್ಲಿ ಜೆಎಂಎಸ್ ಮುಖಂಡರಾದ ವಿ.ಗೀತಾ ಮಾತನಾಡಿ ಭಾರತ ದೇಶವು ವಿವಿಧತೆಯನ್ನು ಹೊಂದಿದ್ದು ವಿಭಿನ್ನ ನಡೆ.ಭಾಷೆ, ಧರ್ಮ, ಜಾತಿಗಳ ಮೂಲಕ ಹೋಗುತ್ತಾ ಇದ್ದರು ಇತ್ತೀಚೆಗೆ ಕೆಲವರು ಒಂದು ಧರ್ಮಕ್ಕೆ ಸೀಮಿತಗೊಳಿಸಲು ಹೊರಟಿದ್ದಾರೆ ಸೌಹಾರ್ದ ನಾಡಿನಲ್ಲಿ ಮೂಲಭೂತವಾದವನ್ನು ಹಿಮ್ಮೆಟ್ಟಿಸಬೇಕು ಹಳೆ ಮತದ ಕೊಳೆಯನ್ನು ತೊಡೆಯಬೇಕು. ಸ್ವಾರ್ಥ, ದ್ವೇಷದಿಂದ ದೇಶ ಕಟ್ಟಲು ಸಾಧ್ಯವಿಲ್ಲ. ಜಾತಿ, ಧರ್ಮ, ಲಿಂಗ ಎಲ್ಲಾ ರೀತಿಯ ಭೇದವನ್ನು ಮೀರಿ ನಾವು ಮನುಜ ಮತ ವಿಶ್ವಪಥದತ್ತ ಹೋಗಲು ಇಂತಹ ಸೌಹಾರ್ದತೆಯ ಸಣ್ಣ ಸಣ್ಣ ಕಾರ್ಯಕ್ರಮವೇ ಸೌಹಾರ್ದ ಭಾರತ ಕಟ್ಟಲು ದಾರಿ ಎಂದರು.

ದೇಶದಲ್ಲಿ ಅಯೋಧ್ಯೆಯ ರಾಮಮಂದಿರವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಾ ಇದ್ದು ನಮ್ಮನ್ನು ಆಳುವ ಸರಕಾರ ಮಂದಿರಕ್ಕಿಂತ ಉದ್ಯೋಗ ಶಿಕ್ಷದ ಬಗ್ಗೆ ಅಲೋಚಿಸಬೇಕಾಗಿದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಆಶಯಗಳನ್ನು ಜಾರಿ ಮಾಡಬೇಕು ಹೊರತು ಒಂದು ಧರ್ಮ ಜಾತಿಗೆ ದೇಶವನ್ನು ಸೀಮಿತಗೊಳಿಸಬಾರದು ಸೌಹಾರ್ದತೆಗಾಗಿ ಜ.30 ರಂದು ದೇಶಾದ್ಯಂತ ಮಾನವ ಸರಪಳಿ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿತ್ತು ಹೆಚ್ಚಿನ ಸಂಖ್ಯೆಯಲ್ಲಿ ಪ್ರಗತಿಪರು ಭಾಗವಹಿಸುವಂತೆ ಮನವಿ ಮಾಡಿದರು

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಅಬ್ಬಣಿ ಶಿವಪ್ಪ, ವಿಜಯಕೃಷ್ಣ, ಗಾಂಧಿನಗರ ಸುಬ್ರಮಣಿ, ಕೆ.ವಿ ಮಂಜುನಾಥ್, ಭೀಮರಾಜ್, ಸಲ್ಲಾವುದ್ದೀನ್ ಬಾಬು, ಅಪ್ರೋಜ್ ಪಾಷ, ಎಂ.ವಿ ನಾರಾಯಣಸ್ವಾಮಿ, ಕೊಂಡರಾಜನಹಳ್ಳಿ ಮಂಜುಳ, ಮಹಮ್ಮದ್ ಮುಸ್ತಫಾ, ಆನಂದ್ ಕುಮಾರ್, ಸತೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

33 minutes ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

10 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

16 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

17 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago