ಸರಕಾರಿ ಆಸ್ಪತ್ರೆಯಲ್ಲಿಲ್ಲ ಕುಡಿಯುವ ನೀರಿನ ವ್ಯವಸ್ಥೆ; ಪ್ರತಿನಿತ್ಯ ನೀರಿಲ್ಲದೆ ರೋಗಿಗಳ ಪರದಾಟ; ಸಾರ್ವಜನಿಕ ಆಸ್ಪತ್ರೆಗೆ ಬೇಕಿದೆ ಶುದ್ಧ ಕುಡಿಯುವ ನೀರಿನ ಘಟಕ

ತಾಲೂಕಿನ ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಬರುವ ಒಳ ಮತ್ತು ಹೊರ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲೂಕಿನ ಬೃಹತ್ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿಯುವ ಬಾಟೆಲ್ ನೀರಿಗಾಗಿ ಹೊರಗಿನ ಹೋಟೆಲ್‌ಗಳನ್ನು ಅವಲಂಬಿಸಬೇಕಾಗಿದೆ. ಇನ್ನೂ ಸರಕಾರಿ ಆಸ್ಪತ್ರೆಗೆ ತಡರಾತ್ರಿ ಬರುವ ರೋಗಿಗಳಿಗೆ ಕುಡಿಯುವ ನೀರು ಸಿಗುವುದೇ ಕಷ್ಟಕರವಾಗಿದೆ.

100 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆಯನ್ನು ಮೇಲ್ದಜೆಗೇರಿಸಲಾಗಿದೆ. ನಿತ್ಯವೂ ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ರೋಗಿಗಳು ಮಾತ್ರೆ ನುಂಗಲು ಸಹ ಆಸ್ಪತ್ರೆಯಲ್ಲಿ ನೀರು ದೊರೆಯುತ್ತಿಲ್ಲ. ಆಸ್ಪತ್ರೆಯ ಆಡಳಿತ ಮಂಡಳಿ ಇದರತ್ತ ಗಮನ ಹರಿಸದೆ ರೋಗಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಸಹ ಮಾಡದಿರುವುದು ಆಸ್ಪತ್ರೆಗೆ ಬರುವ ರೋಗಿಗಳ ಕಣ್ಣು ಕೆಂಪಗಾಗಿಸಿದೆ.

ಪ್ರತಿನಿತ್ಯ ಆಸ್ಪತ್ರೆಗೆ ಸುಮಾರು 1500 ಜನ ಬಂದು ಹೋಗುತ್ತಾರೆ. ಒಳ ಮತ್ತು ಹೊರ ರೋಗಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ. ಇದಕ್ಕಾಗಿ ಒಂದು ಶುದ್ಧ ನೀರಿನ ಘಟಕ ನಿರ್ಮಾಣ ಅತ್ಯಂತ ಜರೂರು ಅವಶ್ಯಕವಾಗಿದೆ. ಸರಕಾರಿ ಆಸ್ಪತ್ರೆಗೆ ಬಡವರೇ ಬರುವುದರಿಂದ ನೀರಿನ ಬಾಟೆಲ್‌ಗಳಿಗಾಗಿ ವೃಥ ಹಣ ವ್ಯಯಿಸಬೇಕಾಗಿದೆ.

ಹೆರಿಗೆಗಾಗಿ ಬರುವ ಮಹಿಳೆಯರಿಗೆ ಡಿಲಿವರಿ ಆದ ಬಳಿಕ ಕುಡಿಯಲು ಮತ್ತು ಬಳಸಲು ಬಿಸಿ ನೀರಿನ ಅಗತ್ಯತೆ ಇದೆ. ಬಾಣಂತಿಯರಿಗೆ ಬಿಸಿ ನೀರಿಗಾಗಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಬಿಸಿ ನೀರಿಗೂ ಹೋಟೆಲ್‌ಗಳನ್ನು ಆಶ್ರಯಿಸಬೇಕಾಗಿದೆ. ಹೋಟೆಲ್‌ಗಳಲ್ಲಿ ಬಿಸಿ ನೀರಿಗಾಗಿ ಒಂದು ಲೀಟರ್‌ನ ದುಪಟ್ಟು ಹಣ ತೆತ್ತಬೇಕಾಗಿದೆ.

ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ರೋಗಿಗಳು ಬಂದು ಹೋಗುತ್ತಾರೆ. ಖಾಸಗಿ ಕಂಪನಿಯವರು ಕುಡಿಯವ ನೀರಿನ ಪ್ಲಾಂಟ್ ಆಸ್ಪತ್ರೆಗೆ ಕೊಡುಗೆ ನೀಡಿದ್ದರು. ಪದೇ ಪದೇ ಕೆಟ್ಟು ನಿಂತಿರುವುದರಿAದ ರೋಗಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಯಾರಾದರೂ ದಾನಿಗಳು ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಟ್ಟರೆ ತುಂಬಾ ಅನುಕೂಲವಾಗುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ರಮೇಶ್ ಅವರು ತಿಳಿಸಿದರು.

ಅಪಘಾತ ಅಥವಾ ಹೆರಿಗೆಯಂತಹ ತುರ್ತು ಸಂದರ್ಭದಲ್ಲಿ ರಾತ್ರಿ ವೇಳೆ ಆಸ್ಪತ್ರೆಗೆ ಬಂದರೆ ಇಡೀ ಆಸ್ಪತ್ರೆ ಆವರಣದಲ್ಲಿ ಕುಡಿಯುವ ನೀರು ಸಿಗುವುದಿಲ್ಲ. ಇನ್ನೂ ರಾತ್ರಿ ವೇಳೆ ಹೋಟೆಲ್‌ಗಳು ತೆರೆದಿರುವುದಿಲ್ಲ. ಇಂತಹ ಸಮಯದಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ಶೀಘ್ರವಾಗಿ ನೀರನ ಘಟಕ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿ ರೋಗಿಯ ಸಂಬಂಧಿ ಮಂಜುನಾಥ ಎಂಬುವವರು ಒತ್ತಾಯಿಸಿದರು.

Ramesh Babu

Journalist

Recent Posts

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

3 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

3 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

12 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

13 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

1 day ago