ಸರಕಾರಿ ಆಸ್ಪತ್ರೆಯಲ್ಲಿಲ್ಲ ಕುಡಿಯುವ ನೀರಿನ ವ್ಯವಸ್ಥೆ; ಪ್ರತಿನಿತ್ಯ ನೀರಿಲ್ಲದೆ ರೋಗಿಗಳ ಪರದಾಟ; ಸಾರ್ವಜನಿಕ ಆಸ್ಪತ್ರೆಗೆ ಬೇಕಿದೆ ಶುದ್ಧ ಕುಡಿಯುವ ನೀರಿನ ಘಟಕ

ತಾಲೂಕಿನ ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಬರುವ ಒಳ ಮತ್ತು ಹೊರ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲೂಕಿನ ಬೃಹತ್ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿಯುವ ಬಾಟೆಲ್ ನೀರಿಗಾಗಿ ಹೊರಗಿನ ಹೋಟೆಲ್‌ಗಳನ್ನು ಅವಲಂಬಿಸಬೇಕಾಗಿದೆ. ಇನ್ನೂ ಸರಕಾರಿ ಆಸ್ಪತ್ರೆಗೆ ತಡರಾತ್ರಿ ಬರುವ ರೋಗಿಗಳಿಗೆ ಕುಡಿಯುವ ನೀರು ಸಿಗುವುದೇ ಕಷ್ಟಕರವಾಗಿದೆ.

100 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆಯನ್ನು ಮೇಲ್ದಜೆಗೇರಿಸಲಾಗಿದೆ. ನಿತ್ಯವೂ ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ರೋಗಿಗಳು ಮಾತ್ರೆ ನುಂಗಲು ಸಹ ಆಸ್ಪತ್ರೆಯಲ್ಲಿ ನೀರು ದೊರೆಯುತ್ತಿಲ್ಲ. ಆಸ್ಪತ್ರೆಯ ಆಡಳಿತ ಮಂಡಳಿ ಇದರತ್ತ ಗಮನ ಹರಿಸದೆ ರೋಗಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಸಹ ಮಾಡದಿರುವುದು ಆಸ್ಪತ್ರೆಗೆ ಬರುವ ರೋಗಿಗಳ ಕಣ್ಣು ಕೆಂಪಗಾಗಿಸಿದೆ.

ಪ್ರತಿನಿತ್ಯ ಆಸ್ಪತ್ರೆಗೆ ಸುಮಾರು 1500 ಜನ ಬಂದು ಹೋಗುತ್ತಾರೆ. ಒಳ ಮತ್ತು ಹೊರ ರೋಗಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ. ಇದಕ್ಕಾಗಿ ಒಂದು ಶುದ್ಧ ನೀರಿನ ಘಟಕ ನಿರ್ಮಾಣ ಅತ್ಯಂತ ಜರೂರು ಅವಶ್ಯಕವಾಗಿದೆ. ಸರಕಾರಿ ಆಸ್ಪತ್ರೆಗೆ ಬಡವರೇ ಬರುವುದರಿಂದ ನೀರಿನ ಬಾಟೆಲ್‌ಗಳಿಗಾಗಿ ವೃಥ ಹಣ ವ್ಯಯಿಸಬೇಕಾಗಿದೆ.

ಹೆರಿಗೆಗಾಗಿ ಬರುವ ಮಹಿಳೆಯರಿಗೆ ಡಿಲಿವರಿ ಆದ ಬಳಿಕ ಕುಡಿಯಲು ಮತ್ತು ಬಳಸಲು ಬಿಸಿ ನೀರಿನ ಅಗತ್ಯತೆ ಇದೆ. ಬಾಣಂತಿಯರಿಗೆ ಬಿಸಿ ನೀರಿಗಾಗಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಬಿಸಿ ನೀರಿಗೂ ಹೋಟೆಲ್‌ಗಳನ್ನು ಆಶ್ರಯಿಸಬೇಕಾಗಿದೆ. ಹೋಟೆಲ್‌ಗಳಲ್ಲಿ ಬಿಸಿ ನೀರಿಗಾಗಿ ಒಂದು ಲೀಟರ್‌ನ ದುಪಟ್ಟು ಹಣ ತೆತ್ತಬೇಕಾಗಿದೆ.

ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ರೋಗಿಗಳು ಬಂದು ಹೋಗುತ್ತಾರೆ. ಖಾಸಗಿ ಕಂಪನಿಯವರು ಕುಡಿಯವ ನೀರಿನ ಪ್ಲಾಂಟ್ ಆಸ್ಪತ್ರೆಗೆ ಕೊಡುಗೆ ನೀಡಿದ್ದರು. ಪದೇ ಪದೇ ಕೆಟ್ಟು ನಿಂತಿರುವುದರಿAದ ರೋಗಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಯಾರಾದರೂ ದಾನಿಗಳು ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಟ್ಟರೆ ತುಂಬಾ ಅನುಕೂಲವಾಗುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ರಮೇಶ್ ಅವರು ತಿಳಿಸಿದರು.

ಅಪಘಾತ ಅಥವಾ ಹೆರಿಗೆಯಂತಹ ತುರ್ತು ಸಂದರ್ಭದಲ್ಲಿ ರಾತ್ರಿ ವೇಳೆ ಆಸ್ಪತ್ರೆಗೆ ಬಂದರೆ ಇಡೀ ಆಸ್ಪತ್ರೆ ಆವರಣದಲ್ಲಿ ಕುಡಿಯುವ ನೀರು ಸಿಗುವುದಿಲ್ಲ. ಇನ್ನೂ ರಾತ್ರಿ ವೇಳೆ ಹೋಟೆಲ್‌ಗಳು ತೆರೆದಿರುವುದಿಲ್ಲ. ಇಂತಹ ಸಮಯದಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ಶೀಘ್ರವಾಗಿ ನೀರನ ಘಟಕ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿ ರೋಗಿಯ ಸಂಬಂಧಿ ಮಂಜುನಾಥ ಎಂಬುವವರು ಒತ್ತಾಯಿಸಿದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

7 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

8 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

20 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

22 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago