ಸರಕಾರಿ ಆಸ್ಪತ್ರೆಯಲ್ಲಿಲ್ಲ ಕುಡಿಯುವ ನೀರಿನ ವ್ಯವಸ್ಥೆ; ಪ್ರತಿನಿತ್ಯ ನೀರಿಲ್ಲದೆ ರೋಗಿಗಳ ಪರದಾಟ; ಸಾರ್ವಜನಿಕ ಆಸ್ಪತ್ರೆಗೆ ಬೇಕಿದೆ ಶುದ್ಧ ಕುಡಿಯುವ ನೀರಿನ ಘಟಕ

ತಾಲೂಕಿನ ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಬರುವ ಒಳ ಮತ್ತು ಹೊರ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲೂಕಿನ ಬೃಹತ್ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿಯುವ ಬಾಟೆಲ್ ನೀರಿಗಾಗಿ ಹೊರಗಿನ ಹೋಟೆಲ್‌ಗಳನ್ನು ಅವಲಂಬಿಸಬೇಕಾಗಿದೆ. ಇನ್ನೂ ಸರಕಾರಿ ಆಸ್ಪತ್ರೆಗೆ ತಡರಾತ್ರಿ ಬರುವ ರೋಗಿಗಳಿಗೆ ಕುಡಿಯುವ ನೀರು ಸಿಗುವುದೇ ಕಷ್ಟಕರವಾಗಿದೆ.

100 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆಯನ್ನು ಮೇಲ್ದಜೆಗೇರಿಸಲಾಗಿದೆ. ನಿತ್ಯವೂ ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ರೋಗಿಗಳು ಮಾತ್ರೆ ನುಂಗಲು ಸಹ ಆಸ್ಪತ್ರೆಯಲ್ಲಿ ನೀರು ದೊರೆಯುತ್ತಿಲ್ಲ. ಆಸ್ಪತ್ರೆಯ ಆಡಳಿತ ಮಂಡಳಿ ಇದರತ್ತ ಗಮನ ಹರಿಸದೆ ರೋಗಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಸಹ ಮಾಡದಿರುವುದು ಆಸ್ಪತ್ರೆಗೆ ಬರುವ ರೋಗಿಗಳ ಕಣ್ಣು ಕೆಂಪಗಾಗಿಸಿದೆ.

ಪ್ರತಿನಿತ್ಯ ಆಸ್ಪತ್ರೆಗೆ ಸುಮಾರು 1500 ಜನ ಬಂದು ಹೋಗುತ್ತಾರೆ. ಒಳ ಮತ್ತು ಹೊರ ರೋಗಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ. ಇದಕ್ಕಾಗಿ ಒಂದು ಶುದ್ಧ ನೀರಿನ ಘಟಕ ನಿರ್ಮಾಣ ಅತ್ಯಂತ ಜರೂರು ಅವಶ್ಯಕವಾಗಿದೆ. ಸರಕಾರಿ ಆಸ್ಪತ್ರೆಗೆ ಬಡವರೇ ಬರುವುದರಿಂದ ನೀರಿನ ಬಾಟೆಲ್‌ಗಳಿಗಾಗಿ ವೃಥ ಹಣ ವ್ಯಯಿಸಬೇಕಾಗಿದೆ.

ಹೆರಿಗೆಗಾಗಿ ಬರುವ ಮಹಿಳೆಯರಿಗೆ ಡಿಲಿವರಿ ಆದ ಬಳಿಕ ಕುಡಿಯಲು ಮತ್ತು ಬಳಸಲು ಬಿಸಿ ನೀರಿನ ಅಗತ್ಯತೆ ಇದೆ. ಬಾಣಂತಿಯರಿಗೆ ಬಿಸಿ ನೀರಿಗಾಗಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಬಿಸಿ ನೀರಿಗೂ ಹೋಟೆಲ್‌ಗಳನ್ನು ಆಶ್ರಯಿಸಬೇಕಾಗಿದೆ. ಹೋಟೆಲ್‌ಗಳಲ್ಲಿ ಬಿಸಿ ನೀರಿಗಾಗಿ ಒಂದು ಲೀಟರ್‌ನ ದುಪಟ್ಟು ಹಣ ತೆತ್ತಬೇಕಾಗಿದೆ.

ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ರೋಗಿಗಳು ಬಂದು ಹೋಗುತ್ತಾರೆ. ಖಾಸಗಿ ಕಂಪನಿಯವರು ಕುಡಿಯವ ನೀರಿನ ಪ್ಲಾಂಟ್ ಆಸ್ಪತ್ರೆಗೆ ಕೊಡುಗೆ ನೀಡಿದ್ದರು. ಪದೇ ಪದೇ ಕೆಟ್ಟು ನಿಂತಿರುವುದರಿAದ ರೋಗಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಯಾರಾದರೂ ದಾನಿಗಳು ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಟ್ಟರೆ ತುಂಬಾ ಅನುಕೂಲವಾಗುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ರಮೇಶ್ ಅವರು ತಿಳಿಸಿದರು.

ಅಪಘಾತ ಅಥವಾ ಹೆರಿಗೆಯಂತಹ ತುರ್ತು ಸಂದರ್ಭದಲ್ಲಿ ರಾತ್ರಿ ವೇಳೆ ಆಸ್ಪತ್ರೆಗೆ ಬಂದರೆ ಇಡೀ ಆಸ್ಪತ್ರೆ ಆವರಣದಲ್ಲಿ ಕುಡಿಯುವ ನೀರು ಸಿಗುವುದಿಲ್ಲ. ಇನ್ನೂ ರಾತ್ರಿ ವೇಳೆ ಹೋಟೆಲ್‌ಗಳು ತೆರೆದಿರುವುದಿಲ್ಲ. ಇಂತಹ ಸಮಯದಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ಶೀಘ್ರವಾಗಿ ನೀರನ ಘಟಕ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿ ರೋಗಿಯ ಸಂಬಂಧಿ ಮಂಜುನಾಥ ಎಂಬುವವರು ಒತ್ತಾಯಿಸಿದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

12 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago