ತಾಲೂಕಿನ ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಬರುವ ಒಳ ಮತ್ತು ಹೊರ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲೂಕಿನ ಬೃಹತ್ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿಯುವ ಬಾಟೆಲ್ ನೀರಿಗಾಗಿ ಹೊರಗಿನ ಹೋಟೆಲ್ಗಳನ್ನು ಅವಲಂಬಿಸಬೇಕಾಗಿದೆ. ಇನ್ನೂ ಸರಕಾರಿ ಆಸ್ಪತ್ರೆಗೆ ತಡರಾತ್ರಿ ಬರುವ ರೋಗಿಗಳಿಗೆ ಕುಡಿಯುವ ನೀರು ಸಿಗುವುದೇ ಕಷ್ಟಕರವಾಗಿದೆ.
100 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆಯನ್ನು ಮೇಲ್ದಜೆಗೇರಿಸಲಾಗಿದೆ. ನಿತ್ಯವೂ ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ರೋಗಿಗಳು ಮಾತ್ರೆ ನುಂಗಲು ಸಹ ಆಸ್ಪತ್ರೆಯಲ್ಲಿ ನೀರು ದೊರೆಯುತ್ತಿಲ್ಲ. ಆಸ್ಪತ್ರೆಯ ಆಡಳಿತ ಮಂಡಳಿ ಇದರತ್ತ ಗಮನ ಹರಿಸದೆ ರೋಗಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಸಹ ಮಾಡದಿರುವುದು ಆಸ್ಪತ್ರೆಗೆ ಬರುವ ರೋಗಿಗಳ ಕಣ್ಣು ಕೆಂಪಗಾಗಿಸಿದೆ.
ಪ್ರತಿನಿತ್ಯ ಆಸ್ಪತ್ರೆಗೆ ಸುಮಾರು 1500 ಜನ ಬಂದು ಹೋಗುತ್ತಾರೆ. ಒಳ ಮತ್ತು ಹೊರ ರೋಗಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ. ಇದಕ್ಕಾಗಿ ಒಂದು ಶುದ್ಧ ನೀರಿನ ಘಟಕ ನಿರ್ಮಾಣ ಅತ್ಯಂತ ಜರೂರು ಅವಶ್ಯಕವಾಗಿದೆ. ಸರಕಾರಿ ಆಸ್ಪತ್ರೆಗೆ ಬಡವರೇ ಬರುವುದರಿಂದ ನೀರಿನ ಬಾಟೆಲ್ಗಳಿಗಾಗಿ ವೃಥ ಹಣ ವ್ಯಯಿಸಬೇಕಾಗಿದೆ.
ಹೆರಿಗೆಗಾಗಿ ಬರುವ ಮಹಿಳೆಯರಿಗೆ ಡಿಲಿವರಿ ಆದ ಬಳಿಕ ಕುಡಿಯಲು ಮತ್ತು ಬಳಸಲು ಬಿಸಿ ನೀರಿನ ಅಗತ್ಯತೆ ಇದೆ. ಬಾಣಂತಿಯರಿಗೆ ಬಿಸಿ ನೀರಿಗಾಗಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಬಿಸಿ ನೀರಿಗೂ ಹೋಟೆಲ್ಗಳನ್ನು ಆಶ್ರಯಿಸಬೇಕಾಗಿದೆ. ಹೋಟೆಲ್ಗಳಲ್ಲಿ ಬಿಸಿ ನೀರಿಗಾಗಿ ಒಂದು ಲೀಟರ್ನ ದುಪಟ್ಟು ಹಣ ತೆತ್ತಬೇಕಾಗಿದೆ.
ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ರೋಗಿಗಳು ಬಂದು ಹೋಗುತ್ತಾರೆ. ಖಾಸಗಿ ಕಂಪನಿಯವರು ಕುಡಿಯವ ನೀರಿನ ಪ್ಲಾಂಟ್ ಆಸ್ಪತ್ರೆಗೆ ಕೊಡುಗೆ ನೀಡಿದ್ದರು. ಪದೇ ಪದೇ ಕೆಟ್ಟು ನಿಂತಿರುವುದರಿAದ ರೋಗಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಯಾರಾದರೂ ದಾನಿಗಳು ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಟ್ಟರೆ ತುಂಬಾ ಅನುಕೂಲವಾಗುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ರಮೇಶ್ ಅವರು ತಿಳಿಸಿದರು.
ಅಪಘಾತ ಅಥವಾ ಹೆರಿಗೆಯಂತಹ ತುರ್ತು ಸಂದರ್ಭದಲ್ಲಿ ರಾತ್ರಿ ವೇಳೆ ಆಸ್ಪತ್ರೆಗೆ ಬಂದರೆ ಇಡೀ ಆಸ್ಪತ್ರೆ ಆವರಣದಲ್ಲಿ ಕುಡಿಯುವ ನೀರು ಸಿಗುವುದಿಲ್ಲ. ಇನ್ನೂ ರಾತ್ರಿ ವೇಳೆ ಹೋಟೆಲ್ಗಳು ತೆರೆದಿರುವುದಿಲ್ಲ. ಇಂತಹ ಸಮಯದಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ಶೀಘ್ರವಾಗಿ ನೀರನ ಘಟಕ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿ ರೋಗಿಯ ಸಂಬಂಧಿ ಮಂಜುನಾಥ ಎಂಬುವವರು ಒತ್ತಾಯಿಸಿದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…