ತಾಲೂಕಿನ ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಬರುವ ಒಳ ಮತ್ತು ಹೊರ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲೂಕಿನ ಬೃಹತ್ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿಯುವ ಬಾಟೆಲ್ ನೀರಿಗಾಗಿ ಹೊರಗಿನ ಹೋಟೆಲ್ಗಳನ್ನು ಅವಲಂಬಿಸಬೇಕಾಗಿದೆ. ಇನ್ನೂ ಸರಕಾರಿ ಆಸ್ಪತ್ರೆಗೆ ತಡರಾತ್ರಿ ಬರುವ ರೋಗಿಗಳಿಗೆ ಕುಡಿಯುವ ನೀರು ಸಿಗುವುದೇ ಕಷ್ಟಕರವಾಗಿದೆ.
100 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆಯನ್ನು ಮೇಲ್ದಜೆಗೇರಿಸಲಾಗಿದೆ. ನಿತ್ಯವೂ ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ರೋಗಿಗಳು ಮಾತ್ರೆ ನುಂಗಲು ಸಹ ಆಸ್ಪತ್ರೆಯಲ್ಲಿ ನೀರು ದೊರೆಯುತ್ತಿಲ್ಲ. ಆಸ್ಪತ್ರೆಯ ಆಡಳಿತ ಮಂಡಳಿ ಇದರತ್ತ ಗಮನ ಹರಿಸದೆ ರೋಗಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಸಹ ಮಾಡದಿರುವುದು ಆಸ್ಪತ್ರೆಗೆ ಬರುವ ರೋಗಿಗಳ ಕಣ್ಣು ಕೆಂಪಗಾಗಿಸಿದೆ.
ಪ್ರತಿನಿತ್ಯ ಆಸ್ಪತ್ರೆಗೆ ಸುಮಾರು 1500 ಜನ ಬಂದು ಹೋಗುತ್ತಾರೆ. ಒಳ ಮತ್ತು ಹೊರ ರೋಗಿಗಳಿಗೆ ಕುಡಿಯಲು ಶುದ್ಧ ನೀರಿಲ್ಲ. ಇದಕ್ಕಾಗಿ ಒಂದು ಶುದ್ಧ ನೀರಿನ ಘಟಕ ನಿರ್ಮಾಣ ಅತ್ಯಂತ ಜರೂರು ಅವಶ್ಯಕವಾಗಿದೆ. ಸರಕಾರಿ ಆಸ್ಪತ್ರೆಗೆ ಬಡವರೇ ಬರುವುದರಿಂದ ನೀರಿನ ಬಾಟೆಲ್ಗಳಿಗಾಗಿ ವೃಥ ಹಣ ವ್ಯಯಿಸಬೇಕಾಗಿದೆ.
ಹೆರಿಗೆಗಾಗಿ ಬರುವ ಮಹಿಳೆಯರಿಗೆ ಡಿಲಿವರಿ ಆದ ಬಳಿಕ ಕುಡಿಯಲು ಮತ್ತು ಬಳಸಲು ಬಿಸಿ ನೀರಿನ ಅಗತ್ಯತೆ ಇದೆ. ಬಾಣಂತಿಯರಿಗೆ ಬಿಸಿ ನೀರಿಗಾಗಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಬಿಸಿ ನೀರಿಗೂ ಹೋಟೆಲ್ಗಳನ್ನು ಆಶ್ರಯಿಸಬೇಕಾಗಿದೆ. ಹೋಟೆಲ್ಗಳಲ್ಲಿ ಬಿಸಿ ನೀರಿಗಾಗಿ ಒಂದು ಲೀಟರ್ನ ದುಪಟ್ಟು ಹಣ ತೆತ್ತಬೇಕಾಗಿದೆ.
ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ಮಂದಿ ರೋಗಿಗಳು ಬಂದು ಹೋಗುತ್ತಾರೆ. ಖಾಸಗಿ ಕಂಪನಿಯವರು ಕುಡಿಯವ ನೀರಿನ ಪ್ಲಾಂಟ್ ಆಸ್ಪತ್ರೆಗೆ ಕೊಡುಗೆ ನೀಡಿದ್ದರು. ಪದೇ ಪದೇ ಕೆಟ್ಟು ನಿಂತಿರುವುದರಿAದ ರೋಗಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳ ಅನುಕೂಲಕ್ಕಾಗಿ ಯಾರಾದರೂ ದಾನಿಗಳು ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಟ್ಟರೆ ತುಂಬಾ ಅನುಕೂಲವಾಗುತ್ತದೆ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ.ರಮೇಶ್ ಅವರು ತಿಳಿಸಿದರು.
ಅಪಘಾತ ಅಥವಾ ಹೆರಿಗೆಯಂತಹ ತುರ್ತು ಸಂದರ್ಭದಲ್ಲಿ ರಾತ್ರಿ ವೇಳೆ ಆಸ್ಪತ್ರೆಗೆ ಬಂದರೆ ಇಡೀ ಆಸ್ಪತ್ರೆ ಆವರಣದಲ್ಲಿ ಕುಡಿಯುವ ನೀರು ಸಿಗುವುದಿಲ್ಲ. ಇನ್ನೂ ರಾತ್ರಿ ವೇಳೆ ಹೋಟೆಲ್ಗಳು ತೆರೆದಿರುವುದಿಲ್ಲ. ಇಂತಹ ಸಮಯದಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ಶೀಘ್ರವಾಗಿ ನೀರನ ಘಟಕ ಅಳವಡಿಸಿ ನೀರಿನ ವ್ಯವಸ್ಥೆ ಮಾಡಿ ರೋಗಿಯ ಸಂಬಂಧಿ ಮಂಜುನಾಥ ಎಂಬುವವರು ಒತ್ತಾಯಿಸಿದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…