ಹೆದ್ದಾರಿಯ ನಡು ರಸ್ತೆಯಲ್ಲೇ ಸರಕು ಸಾಗಾಣಿಕೆ ಕಂಟೇನರ್ ಹೊತ್ತಿ ಉರಿದಿರುವ ಘಟನೆ ಕ್ಯಾತ್ಸಂದ್ರದ ಪವಿತ್ರ ಹೋಟೆಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ.
ಲಾರಿ ಚಾಲಕ ಬೆಂಕಿ ಕಾಣಿಸಿಕೊಂಡ ಕೂಡಲೇ ಲಾರಿಯಿಂದ ಹೊರಗೆ ನೆಗೆದು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಲಾರಿಯಲ್ಲಿ ಯಾವುದೇ ಸರಕುಗಳಿರಲಿಲ್ಲವಾದ್ದರಿಂದ ಆಸ್ತಿ ನಷ್ಟ, ಯಾವುದೇ ಗಾಯ ಸಂಭವಿಸಿಲ್ಲ. ಆದರೆ ಲಾರಿಗೆ ಸಂಬಂಧಿಸಿದ ಕಾಗದ ಪತ್ರ ಸೇರಿದಂತೆ ಸುಮಾರು 10 ಲಕ್ಷ ರೂ. ನಷ್ಟವಾಗಿರುವುದಾಗಿ ಚಾಲಕ ಅವಲತ್ತುಕೊಂಡಿದ್ದಾನೆ. ಶಿರಾ ಕಡೆಯಿಂದ ವಾಹನವು ಬೆಂಗಳೂರಿಗೆ ತೆರಳುತ್ತಿತ್ತು.
ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದು, ಕೂಡಲೇ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ಯಾತ್ಯಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…