ಹೆದ್ದಾರಿಯ ನಡು ರಸ್ತೆಯಲ್ಲೇ ಸರಕು ಸಾಗಾಣಿಕೆ ಕಂಟೇನರ್ ಹೊತ್ತಿ ಉರಿದಿರುವ ಘಟನೆ ಕ್ಯಾತ್ಸಂದ್ರದ ಪವಿತ್ರ ಹೋಟೆಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ.
ಲಾರಿ ಚಾಲಕ ಬೆಂಕಿ ಕಾಣಿಸಿಕೊಂಡ ಕೂಡಲೇ ಲಾರಿಯಿಂದ ಹೊರಗೆ ನೆಗೆದು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಲಾರಿಯಲ್ಲಿ ಯಾವುದೇ ಸರಕುಗಳಿರಲಿಲ್ಲವಾದ್ದರಿಂದ ಆಸ್ತಿ ನಷ್ಟ, ಯಾವುದೇ ಗಾಯ ಸಂಭವಿಸಿಲ್ಲ. ಆದರೆ ಲಾರಿಗೆ ಸಂಬಂಧಿಸಿದ ಕಾಗದ ಪತ್ರ ಸೇರಿದಂತೆ ಸುಮಾರು 10 ಲಕ್ಷ ರೂ. ನಷ್ಟವಾಗಿರುವುದಾಗಿ ಚಾಲಕ ಅವಲತ್ತುಕೊಂಡಿದ್ದಾನೆ. ಶಿರಾ ಕಡೆಯಿಂದ ವಾಹನವು ಬೆಂಗಳೂರಿಗೆ ತೆರಳುತ್ತಿತ್ತು.
ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದು, ಕೂಡಲೇ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ಯಾತ್ಯಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…