ಲಕ್ನೊ : ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದ ಭಾರತ ಹಾಗೂ ಪಂದ್ಯ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳವ ತವಕದಲ್ಲಿದ್ದ ನ್ಯೂಜಿಲೆಂಡ್ ಎರಡೂ ತಂಡಗಳು ಬೌಲಿಂಗ್ ಸ್ನೇಹಿ ಪಿಚ್ ನಲ್ಲಿ ತೀವ್ರ ಹೋರಾಟ ನಡೆಸಿದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿತು.
ಲಕ್ನೊ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಎದುರಾಳಿ ತಂಡಕ್ಕೆ ಬೌಲಿಂಗ್ ಗೆ ಆಹ್ವಾನಿಸಿತು, ಬೌಲಿಂಗ್ ಸ್ನೇಹಿ ಪಿಚ್ ಲಾಭ ಪಡೆದ ಭಾರತ ಎದುರಾಳಿಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
ಆರಂಭಿಕ ಆಟಗಾರರಾದ ಫಿನ್ ಅಲೆನ್ (11), ಕಾನ್ವೆ (11) ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲರಾದರು, ನಂತರ ಬಂದ ಚಾಂಪೆನ್, ಫಿಲಿಪ್ಸ್, ಬ್ರೆಸ್ವೆಲ್ ಹಾಗೂ ಮಿಚೆಲ್ ಪ್ರತಿರೋಧ ತೋರಲಿಲ್ಲ, ನಾಯಕ ಸ್ಯಾಂಟ್ನರ್ (19) ತಂಡದ ಪರವಾಗಿ ಅತಿ ಹೆಚ್ಚು ರನ್ ಗಳಿಸಿ ತಂಡದ ಮೊತ್ತವನ್ನು 99 ಕ್ಕೆ ತಲುಪಿಸುವ ಮೂಲಕ ಎದುರಾಳಿಗಳಿಗೆ ಸವಾಲೆಸೆದರು.
ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೂ ಸ್ಪಿನ್ನರ್ ಗಳು ಕಾಟ ಕೊಟ್ಟರು, ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್ (11), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (19) ರನ್ ಗಳಿಸಿದರೆ ನಂತರ ಬಂದ ತ್ರಿಪಾಠಿ (13) ರನ್ ಗಳಿಸಿದರೆ, ವಾಶಿಂಗ್ಟನ್ ಸುಂದರ್ (10) ರನ್ ಗಳಿಸಿ ನಿರಾಸೆ ಮೂಡಿಸಿದರು.
ನಂತರ ಜೊತೆಯಾದ ಹಾರ್ದಿಕ್ ಪಾಂಡ್ಯ (15) ಹಾಗೂ ಸೂರ್ಯ ಕುಮಾರ್ ಯಾದವ್ (26)ರನ್ ಉತ್ತಮ ಜೊತೆಯಾಟದಿಂದಾಗಿ ತಂಡವನ್ನು ಗೆಲುವಿನ ದಡ ಸೇರಿಸಿದರು, ನ್ಯೂಜಿಲೆಂಡ್ ಪರವಾಗಿ ಮಿಚೆಲ್ ಬ್ರೆಸ್ವೆಲ್ ಹಾಗೂ ಈಶ್ ಸೌಧಿ ತಲಾ ಒಂದು ವಿಕೆಟ್ ಪಡೆದುಕೊಂಡರು.
ಎರಡು ರನೌಟ್ ಮಾಡಿ ಭಾರತದ ಮೇಲೆ ಒತ್ತಡ ಹೇರಿ ಪಂದ್ಯವನ್ನು ಕೊನೆಯವರೆಗೂ ಕೊಂಡೊಯ್ದು ಉತ್ತಮ ಪೈಪೋಟಿ ನೀಡಿದರು. ತಂಡವನ್ನು ಗೆಲುವಿನ ದಡ ಸೇರಿಸಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…