ಲಕ್ನೊ : ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದ ಭಾರತ ಹಾಗೂ ಪಂದ್ಯ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳವ ತವಕದಲ್ಲಿದ್ದ ನ್ಯೂಜಿಲೆಂಡ್ ಎರಡೂ ತಂಡಗಳು ಬೌಲಿಂಗ್ ಸ್ನೇಹಿ ಪಿಚ್ ನಲ್ಲಿ ತೀವ್ರ ಹೋರಾಟ ನಡೆಸಿದರೂ ಸಹ ಕೊನೆಗೆ ವಿಜಯಲಕ್ಷ್ಮಿ ಭಾರತಕ್ಕೆ ಒಲಿಯುವ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸಿತು.
ಲಕ್ನೊ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಎದುರಾಳಿ ತಂಡಕ್ಕೆ ಬೌಲಿಂಗ್ ಗೆ ಆಹ್ವಾನಿಸಿತು, ಬೌಲಿಂಗ್ ಸ್ನೇಹಿ ಪಿಚ್ ಲಾಭ ಪಡೆದ ಭಾರತ ಎದುರಾಳಿಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.
ಆರಂಭಿಕ ಆಟಗಾರರಾದ ಫಿನ್ ಅಲೆನ್ (11), ಕಾನ್ವೆ (11) ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲರಾದರು, ನಂತರ ಬಂದ ಚಾಂಪೆನ್, ಫಿಲಿಪ್ಸ್, ಬ್ರೆಸ್ವೆಲ್ ಹಾಗೂ ಮಿಚೆಲ್ ಪ್ರತಿರೋಧ ತೋರಲಿಲ್ಲ, ನಾಯಕ ಸ್ಯಾಂಟ್ನರ್ (19) ತಂಡದ ಪರವಾಗಿ ಅತಿ ಹೆಚ್ಚು ರನ್ ಗಳಿಸಿ ತಂಡದ ಮೊತ್ತವನ್ನು 99 ಕ್ಕೆ ತಲುಪಿಸುವ ಮೂಲಕ ಎದುರಾಳಿಗಳಿಗೆ ಸವಾಲೆಸೆದರು.
ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೂ ಸ್ಪಿನ್ನರ್ ಗಳು ಕಾಟ ಕೊಟ್ಟರು, ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್ (11), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (19) ರನ್ ಗಳಿಸಿದರೆ ನಂತರ ಬಂದ ತ್ರಿಪಾಠಿ (13) ರನ್ ಗಳಿಸಿದರೆ, ವಾಶಿಂಗ್ಟನ್ ಸುಂದರ್ (10) ರನ್ ಗಳಿಸಿ ನಿರಾಸೆ ಮೂಡಿಸಿದರು.
ನಂತರ ಜೊತೆಯಾದ ಹಾರ್ದಿಕ್ ಪಾಂಡ್ಯ (15) ಹಾಗೂ ಸೂರ್ಯ ಕುಮಾರ್ ಯಾದವ್ (26)ರನ್ ಉತ್ತಮ ಜೊತೆಯಾಟದಿಂದಾಗಿ ತಂಡವನ್ನು ಗೆಲುವಿನ ದಡ ಸೇರಿಸಿದರು, ನ್ಯೂಜಿಲೆಂಡ್ ಪರವಾಗಿ ಮಿಚೆಲ್ ಬ್ರೆಸ್ವೆಲ್ ಹಾಗೂ ಈಶ್ ಸೌಧಿ ತಲಾ ಒಂದು ವಿಕೆಟ್ ಪಡೆದುಕೊಂಡರು.
ಎರಡು ರನೌಟ್ ಮಾಡಿ ಭಾರತದ ಮೇಲೆ ಒತ್ತಡ ಹೇರಿ ಪಂದ್ಯವನ್ನು ಕೊನೆಯವರೆಗೂ ಕೊಂಡೊಯ್ದು ಉತ್ತಮ ಪೈಪೋಟಿ ನೀಡಿದರು. ತಂಡವನ್ನು ಗೆಲುವಿನ ದಡ ಸೇರಿಸಿದ ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…