Categories: ಕೋಲಾರ

ಸರಳವಾಗಿ ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಆಚರಣೆ

ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಚುನಾವಣೆ ಇರುವುದರಿಂದ ಸರಳವಾಗಿ
ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಗುತ್ತಾ ಇದೆ ದಲಿತ ಸಮುದಾಯದಲ್ಲಿ ಹುಟ್ಟಿ, ಅತ್ಯಂತ ಉನ್ನತ ಮಟ್ಟಕ್ಕೆ ಬೆಳೆದರು ಅವರು ದೇಶದ ಉಪ ಪ್ರಧಾನಿಯಾಗಿ ಸೇವೆಯನ್ನು ಸಲ್ಲಿಸಿದರು. ಅವರು ತುರ್ತು ಪರಿಸ್ಥಿತಿಯಲ್ಲಿ ನಮ್ಮ ದೇಶವನ್ನು ರಕ್ಷಣೆ ಮಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದರು ದೇಶಕ್ಕೆ ಹಸಿರು ಕ್ರಾಂತಿ ಹರಕಾರವೆಂದೇ ಹೆಸರುವಾಸಿಯಾದವರು. ಇಂದಿನ ಪೀಳಿಗೆಯು ಅವರ ತತ್ವ, ಆದರ್ಶ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್, ಎಸಿ ವೆಂಕಟಲಕ್ಷ್ಮೀ, ಜಿಪಂ ಯೋಜನಾ ನಿರ್ದೇಶಕ ರವಿಚಂದ್ರರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲೂಕು ಅಧಿಕಾರಿ ಚನ್ನಬಸಪ್ಪ, ದಲಿತ ಮುಖಂಡರಾದ ನಾಗನಾಳ ಮುನಿಯಪ್ಪ, ಚಂದ್ರಶೇಖರ್, ವಕ್ಕಲೇರಿ ರಾಜಪ್ಪ, ರಾಮಯ್ಯ, ಪಂಡಿತ್ ಮುನಿವೆಂಕಟಪ್ಪ, ಜಯದೇವ್, ನಾಗೇಶ್, ಚಲಪತಿ, ಆನಂದ್ ಕುಮಾರ್, ವೆಂಕಟೇಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago