Categories: ಕೋಲಾರ

ಸರಳವಾಗಿ ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಆಚರಣೆ

ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಚುನಾವಣೆ ಇರುವುದರಿಂದ ಸರಳವಾಗಿ
ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಗುತ್ತಾ ಇದೆ ದಲಿತ ಸಮುದಾಯದಲ್ಲಿ ಹುಟ್ಟಿ, ಅತ್ಯಂತ ಉನ್ನತ ಮಟ್ಟಕ್ಕೆ ಬೆಳೆದರು ಅವರು ದೇಶದ ಉಪ ಪ್ರಧಾನಿಯಾಗಿ ಸೇವೆಯನ್ನು ಸಲ್ಲಿಸಿದರು. ಅವರು ತುರ್ತು ಪರಿಸ್ಥಿತಿಯಲ್ಲಿ ನಮ್ಮ ದೇಶವನ್ನು ರಕ್ಷಣೆ ಮಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದರು ದೇಶಕ್ಕೆ ಹಸಿರು ಕ್ರಾಂತಿ ಹರಕಾರವೆಂದೇ ಹೆಸರುವಾಸಿಯಾದವರು. ಇಂದಿನ ಪೀಳಿಗೆಯು ಅವರ ತತ್ವ, ಆದರ್ಶ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್, ಎಸಿ ವೆಂಕಟಲಕ್ಷ್ಮೀ, ಜಿಪಂ ಯೋಜನಾ ನಿರ್ದೇಶಕ ರವಿಚಂದ್ರರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲೂಕು ಅಧಿಕಾರಿ ಚನ್ನಬಸಪ್ಪ, ದಲಿತ ಮುಖಂಡರಾದ ನಾಗನಾಳ ಮುನಿಯಪ್ಪ, ಚಂದ್ರಶೇಖರ್, ವಕ್ಕಲೇರಿ ರಾಜಪ್ಪ, ರಾಮಯ್ಯ, ಪಂಡಿತ್ ಮುನಿವೆಂಕಟಪ್ಪ, ಜಯದೇವ್, ನಾಗೇಶ್, ಚಲಪತಿ, ಆನಂದ್ ಕುಮಾರ್, ವೆಂಕಟೇಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

11 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago