ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಚುನಾವಣೆ ಇರುವುದರಿಂದ ಸರಳವಾಗಿ
ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಗುತ್ತಾ ಇದೆ ದಲಿತ ಸಮುದಾಯದಲ್ಲಿ ಹುಟ್ಟಿ, ಅತ್ಯಂತ ಉನ್ನತ ಮಟ್ಟಕ್ಕೆ ಬೆಳೆದರು ಅವರು ದೇಶದ ಉಪ ಪ್ರಧಾನಿಯಾಗಿ ಸೇವೆಯನ್ನು ಸಲ್ಲಿಸಿದರು. ಅವರು ತುರ್ತು ಪರಿಸ್ಥಿತಿಯಲ್ಲಿ ನಮ್ಮ ದೇಶವನ್ನು ರಕ್ಷಣೆ ಮಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದರು ದೇಶಕ್ಕೆ ಹಸಿರು ಕ್ರಾಂತಿ ಹರಕಾರವೆಂದೇ ಹೆಸರುವಾಸಿಯಾದವರು. ಇಂದಿನ ಪೀಳಿಗೆಯು ಅವರ ತತ್ವ, ಆದರ್ಶ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್, ಎಸಿ ವೆಂಕಟಲಕ್ಷ್ಮೀ, ಜಿಪಂ ಯೋಜನಾ ನಿರ್ದೇಶಕ ರವಿಚಂದ್ರರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲೂಕು ಅಧಿಕಾರಿ ಚನ್ನಬಸಪ್ಪ, ದಲಿತ ಮುಖಂಡರಾದ ನಾಗನಾಳ ಮುನಿಯಪ್ಪ, ಚಂದ್ರಶೇಖರ್, ವಕ್ಕಲೇರಿ ರಾಜಪ್ಪ, ರಾಮಯ್ಯ, ಪಂಡಿತ್ ಮುನಿವೆಂಕಟಪ್ಪ, ಜಯದೇವ್, ನಾಗೇಶ್, ಚಲಪತಿ, ಆನಂದ್ ಕುಮಾರ್, ವೆಂಕಟೇಶ್ ಮುಂತಾದವರು ಇದ್ದರು.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…