ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಚುನಾವಣೆ ಇರುವುದರಿಂದ ಸರಳವಾಗಿ
ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಗುತ್ತಾ ಇದೆ ದಲಿತ ಸಮುದಾಯದಲ್ಲಿ ಹುಟ್ಟಿ, ಅತ್ಯಂತ ಉನ್ನತ ಮಟ್ಟಕ್ಕೆ ಬೆಳೆದರು ಅವರು ದೇಶದ ಉಪ ಪ್ರಧಾನಿಯಾಗಿ ಸೇವೆಯನ್ನು ಸಲ್ಲಿಸಿದರು. ಅವರು ತುರ್ತು ಪರಿಸ್ಥಿತಿಯಲ್ಲಿ ನಮ್ಮ ದೇಶವನ್ನು ರಕ್ಷಣೆ ಮಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದರು ದೇಶಕ್ಕೆ ಹಸಿರು ಕ್ರಾಂತಿ ಹರಕಾರವೆಂದೇ ಹೆಸರುವಾಸಿಯಾದವರು. ಇಂದಿನ ಪೀಳಿಗೆಯು ಅವರ ತತ್ವ, ಆದರ್ಶ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್, ಎಸಿ ವೆಂಕಟಲಕ್ಷ್ಮೀ, ಜಿಪಂ ಯೋಜನಾ ನಿರ್ದೇಶಕ ರವಿಚಂದ್ರರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲೂಕು ಅಧಿಕಾರಿ ಚನ್ನಬಸಪ್ಪ, ದಲಿತ ಮುಖಂಡರಾದ ನಾಗನಾಳ ಮುನಿಯಪ್ಪ, ಚಂದ್ರಶೇಖರ್, ವಕ್ಕಲೇರಿ ರಾಜಪ್ಪ, ರಾಮಯ್ಯ, ಪಂಡಿತ್ ಮುನಿವೆಂಕಟಪ್ಪ, ಜಯದೇವ್, ನಾಗೇಶ್, ಚಲಪತಿ, ಆನಂದ್ ಕುಮಾರ್, ವೆಂಕಟೇಶ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…