Categories: ಕೋಲಾರ

ಸರಳವಾಗಿ ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಆಚರಣೆ

ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ದಲಿತ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಚುನಾವಣೆ ಇರುವುದರಿಂದ ಸರಳವಾಗಿ
ಡಾ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಿಸಲಾಗುತ್ತಾ ಇದೆ ದಲಿತ ಸಮುದಾಯದಲ್ಲಿ ಹುಟ್ಟಿ, ಅತ್ಯಂತ ಉನ್ನತ ಮಟ್ಟಕ್ಕೆ ಬೆಳೆದರು ಅವರು ದೇಶದ ಉಪ ಪ್ರಧಾನಿಯಾಗಿ ಸೇವೆಯನ್ನು ಸಲ್ಲಿಸಿದರು. ಅವರು ತುರ್ತು ಪರಿಸ್ಥಿತಿಯಲ್ಲಿ ನಮ್ಮ ದೇಶವನ್ನು ರಕ್ಷಣೆ ಮಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದರು ದೇಶಕ್ಕೆ ಹಸಿರು ಕ್ರಾಂತಿ ಹರಕಾರವೆಂದೇ ಹೆಸರುವಾಸಿಯಾದವರು. ಇಂದಿನ ಪೀಳಿಗೆಯು ಅವರ ತತ್ವ, ಆದರ್ಶ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್, ಎಸಿ ವೆಂಕಟಲಕ್ಷ್ಮೀ, ಜಿಪಂ ಯೋಜನಾ ನಿರ್ದೇಶಕ ರವಿಚಂದ್ರರೆಡ್ಡಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತಾಲೂಕು ಅಧಿಕಾರಿ ಚನ್ನಬಸಪ್ಪ, ದಲಿತ ಮುಖಂಡರಾದ ನಾಗನಾಳ ಮುನಿಯಪ್ಪ, ಚಂದ್ರಶೇಖರ್, ವಕ್ಕಲೇರಿ ರಾಜಪ್ಪ, ರಾಮಯ್ಯ, ಪಂಡಿತ್ ಮುನಿವೆಂಕಟಪ್ಪ, ಜಯದೇವ್, ನಾಗೇಶ್, ಚಲಪತಿ, ಆನಂದ್ ಕುಮಾರ್, ವೆಂಕಟೇಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

5 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

5 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

9 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

21 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago