Categories: ಕೋಲಾರ

ಸರಳವಾಗಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಗೆ ನಿರ್ಧಾರ

ಕೋಲಾರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದಾಗಿ ಈ ಬಾರಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಮಾ.15ರ ಸೋಮವಾರಂದು ಸರಳವಾಗಿ ಆಚರಿಸಲಾಗುವುದೆಂದು ಬಲಿಜ ಸಮುದಾಯದ ಮುಖಂಡ ಹಾಗೂ ಯೋಗಿ ನಾರಾಯಣ ಬಲಿಜ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಪ್ರಸಾದ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾಡಳಿತವು ಜಯಂತಯನ್ನು ಸರಳವಾಗಿ ಆಚರಿಸಲು ಅನುಮತಿ ನೀಡಿರುವುದರಿಂದ ಯಾವುದೇ ಮೆರವಣಿಗೆ ವೇದಿಕೆ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಣೆ ಮಾಡದೆ ಸರಳ ಹಾಗೂ ಸಾಂಕೇತಿಕವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಮಾ.25ರ ಸೋಮವಾರ ಬೆಳಗ್ಗೆ 9 ಗಂಟೆಗೆ ನಗರದ ಟೇಕಲ್ ರಸ್ತೆಯಲ್ಲಿರುವ ಯೋಗಿನಾರೇಯಣ ಯತೀಂದ್ರರ ಪುತ್ಥಳಿಗೆ ಪೂಜೆ ಸಲ್ಲಿಸಿ ತದ ನಂತರ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ
ಜಿಲ್ಲಾ ಆಡಳಿತ ಸಾಂಕೇತಿಕವಾಗಿ ನಡೆಸುವ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಸಮುದಾಯದ ಎಲ್ಲಾ ಜನತೆ ಭಾಗವಹಿಸಲಿದ್ದಾರೆಂದು ತಿಳಿಸಿದರು.

ಜುಲೈ ತಿಂಗಳಿನಲ್ಲಿ ಬರುವ ಗುರುಪೂರ್ಣಿಮೆಯಂದು ಪ್ರತಿಭಾ ಪುರಸ್ಕಾರ ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಸಭೆ ನಡೆಸಿ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುವುದಾಗಿಯೂ ಹೇಳಿದರು.

ಸಮುದಾಯದ ಮುಖಂಡ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ವೆಂಕಟಸ್ವಾಮಿ ಮಾತನಾಡಿ ಸರಳವಾಗಿ ಹಾಗೂ ಭಕ್ತಿ ಪೂರಕವಾಗಿ ನಡೆಯಲಿರುವ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ನಗರಸಭೆ ಮಾಜಿ ಸದಸ್ಯ ರಘು ಚಿಟ್ಟಿ, ಸಮುದಾಯದ ಮುಖಂಡರಾದ ರಂಗನಾಥ್, ಎಸ್.ಎಸ್.ಶ್ರೀಧರ್, ಗಾಂಧಿನಗರ ರಾಜೇಶ್, ಮಹೇಶ್, ಎಂ.ಜಿ.ಮಂಜುನಾಥ್, ಗೋವರ್ಧನ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

9 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago