ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50 ಸಾವಿರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಸಮುದಾಯಗಳಿಗೆ ಸೇರಿದವರಾಗಿರಬೇಕು. ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು.
ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ.2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ.5.00 ಲಕ್ಷಗಳನ್ನು ಮೀರತಕ್ಕದ್ದಲ್ಲ.
ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.
ಜಿಲ್ಲಾ ನೋಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ ಗಳು, ದೇವಸ್ಥಾನದ ಟ್ರಸ್ಟ್ ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೋ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (GPS)(ಸ್ಥಿರ ಚಿತ್ರಗಳನ್ನು) ಸಲ್ಲಿಸುವುದು.
ವಿಧವೆ ತಾಯಿಯ ಕುಟುಂಬ/ವಿಕಲಚೇತನ ಕುಟುಂಬದವರಿಗೆ ಮೊದಲ ಆದ್ಯತೆ ಮೇರೆಗೆ ಸಹಾಯಧನ ಮಂಜೂರಾತಿಗೆ ಪರಿಗಣಿಸತಕ್ಕದ್ದು.
ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.5000/-ಗಳನ್ನು ನೀಡುವುದು.
ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ತಿಂಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ನಂ 216, 2ನೇ ಮಹಡಿ ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…