ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50 ಸಾವಿರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಸಮುದಾಯಗಳಿಗೆ ಸೇರಿದವರಾಗಿರಬೇಕು. ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು.
ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ.2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ.5.00 ಲಕ್ಷಗಳನ್ನು ಮೀರತಕ್ಕದ್ದಲ್ಲ.
ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.

ಜಿಲ್ಲಾ ನೋಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ ಗಳು, ದೇವಸ್ಥಾನದ ಟ್ರಸ್ಟ್ ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೋ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (GPS)(ಸ್ಥಿರ ಚಿತ್ರಗಳನ್ನು) ಸಲ್ಲಿಸುವುದು.

ವಿಧವೆ ತಾಯಿಯ ಕುಟುಂಬ/ವಿಕಲಚೇತನ ಕುಟುಂಬದವರಿಗೆ ಮೊದಲ ಆದ್ಯತೆ ಮೇರೆಗೆ ಸಹಾಯಧನ ಮಂಜೂರಾತಿಗೆ ಪರಿಗಣಿಸತಕ್ಕದ್ದು.

ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.5000/-ಗಳನ್ನು ನೀಡುವುದು.

ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ತಿಂಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ನಂ 216, 2ನೇ ಮಹಡಿ ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

1 hour ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

2 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

4 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

6 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

8 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

8 hours ago