ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ಧನ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50 ಸಾವಿರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಸಮುದಾಯಗಳಿಗೆ ಸೇರಿದವರಾಗಿರಬೇಕು. ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು.
ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ರೂ.2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ ರೂ.5.00 ಲಕ್ಷಗಳನ್ನು ಮೀರತಕ್ಕದ್ದಲ್ಲ.
ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.
ಜಿಲ್ಲಾ ನೋಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ ಗಳು, ದೇವಸ್ಥಾನದ ಟ್ರಸ್ಟ್ ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಸಾಮೂಹಿಕ ವಿವಾಹ ಕಾರ್ಯಕ್ರಮದ ಫೋಟೋ ಹಾಗೂ ವಧು-ವರನ ಜಂಟಿ ಭಾವಚಿತ್ರಗಳನ್ನು (GPS)(ಸ್ಥಿರ ಚಿತ್ರಗಳನ್ನು) ಸಲ್ಲಿಸುವುದು.
ವಿಧವೆ ತಾಯಿಯ ಕುಟುಂಬ/ವಿಕಲಚೇತನ ಕುಟುಂಬದವರಿಗೆ ಮೊದಲ ಆದ್ಯತೆ ಮೇರೆಗೆ ಸಹಾಯಧನ ಮಂಜೂರಾತಿಗೆ ಪರಿಗಣಿಸತಕ್ಕದ್ದು.
ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಪ್ರೋತ್ಸಾಹ ಹಾಗೂ ವಿವಾಹದ ಖರ್ಚು ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.5000/-ಗಳನ್ನು ನೀಡುವುದು.
ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿಂದ 3 ತಿಂಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ನಂ 216, 2ನೇ ಮಹಡಿ ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…