ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಪ್ರತಿಭಟನೆ: ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಶೇ.100ರಷ್ಟು ಕನ್ನಡಿಗರಿಗೇ ಮೀಸಲಿರಿಸಬೇಕು-ರೈತ ಮುಖಂಡ ಅಂಬರೀಶ್

ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕನ್ನಡ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಏಕಕಾಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ‌ ನಡೆಸಲಾಗುತ್ತಿದೆ.

ಈ ಹೋರಾಟಕ್ಕೆ ನಾನು ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಹಳ್ಳಿ ರೈತ ಅಂಬರೀಶ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹಳ್ಳಿ ರೈತ ಅಂಬರೀಶ್ ಅವರು, ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕನ್ನಡ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಾಳೆ ನಡೆಸಲಾಗುತ್ತಿದೆ. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಖಾಸಗಿ ವಲಯದಲ್ಲೂ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ.‌‌ ಇದರಿಂದ ಕನ್ನಡಿಗರಿಗೆ ಕರ್ನಾಟಕದಲ್ಲಿ ಆಗುತ್ತಿರುವಂತ ಅನ್ಯಾಯ ತಪ್ಪಬೇಕು. ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಶೇ.100ರಷ್ಟು ಕನ್ನಡಿಗರಿಗೇ ಮೀಸಲಿರಿಸಬೇಕು ಎಂದು ತಿಳಿಸಿದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

4 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

4 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

9 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

9 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

15 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

17 hours ago