Categories: ಕೋಲಾರ

ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ

ಕೋಲಾರ: ನಮ್ಮನ್ನು ಆಳುವ ಸರ್ಕಾರಗಳು ರೈತರು, ಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುವ ಶ್ರಮಜೀವಿಗಳ ಬದುಕಿನ ಜೊತೆ ಚಲ್ಲಾಟದ ಜೊತೆಗೆ ಜನಸಂಖ್ಯೆಯ 2% ಇರುವ ಬಂಡವಾಳಗಾರರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದ್ದಾರೆ ಕಾರ್ಮಿಕರು, ರೈತರು ಒಗ್ಗಟ್ಟ ಪ್ರದರ್ಶನದ ಮೂಲಕ ತಮ್ಮ ಹಕ್ಕನ್ನು ಪಡೆಯಬೇಕಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹೆಚ್.ಎನ್ ಗೋಪಾಲಗೌಡ ತಿಳಿಸಿದರು

ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶನಿವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸಂಘಟನೆಯ ಏಳನೇ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಯನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಗಳು ಮಾಲೀಕನಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಿ ಕಾರ್ಮಿಕರನ್ನು ಬೀದಿಗೆ ತಳ್ಳಿದ್ದಾರೆ ರಾಜಕೀಯ ವ್ಯವಸ್ಥೆ ಯಾವತ್ತೂ ಕಾರ್ಮಿಕರ ಪರ ನಿಲ್ಲುವುದಿಲ್ಲ ಶೋಷಣೆ ಇಲ್ಲದ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಒಂದಾಗುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ ಎಂದರು.

ಬಂಡವಾಳಶಾಹಿಗಳು ಕಾರ್ಮಿಕರ ಅವಶ್ಯಕತೆ ಇ್ಲಲವೆಂದು ನಿರಾಕರಿಸುತ್ತಿದ್ದು, ಸ್ವಯಂಘೋಷಿತ ಪ್ರಭುಗಳಾಗಲು ಹೊರಟಿದ್ದಾರೆ. ಸರ್ಕಾರಗಳು ತಮ್ಮ ಕಾರ್ಯ ಯಶಸ್ವಿಗೊಳಿಸಲು ಖಾಯಂ ಹೊರಗುತ್ತಿಗೆ ನೌಕರರನ್ನು ಬಳಸಿಕೊಳ್ಳುತ್ತಿದ್ದು, ಅವರ ಬದುಕಿನ ಸೇವಾ ಭದ್ರತೆಗೆ ಗಮನ ಹರಿಸದೆ ದುಡಿಸಿಕೊಳ್ಳುತ್ತಿದ್ದಾರೆ ಕಾರ್ಮಿಕರ ಹೋರಾಟದ ಫಲವಾಗಿ ಗಳಿಸಿದ್ದ 29 ಕಾರ್ಮಿಕರ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ ಇದನ್ನು ವಿರೋಧಿಸಬೇಕಾಗಿದೆ ಕಾರ್ಮಿಕರ ಕನಿಷ್ಠ ವೇತನ 36 ಸಾವಿರ ಜಾರಿಗೆ ದೇಶಾದ್ಯಂತ ಇರುವ ಕಾರ್ಮಿಕರು ಒತ್ತಾಯ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ಕಾರ್ಮಿಕರ ಹೋರಾಟಗಳನ್ನು ಸರ್ಕಾರಗಳು ಸಹಿಸಿಕೊಳ್ಳುತ್ತಿಲ್ಲ ಕಾರ್ಮಿಕರ ಕಾಯ್ದೆಗಳು ಅಪಾಯಕಾರಿಯಾಗಿದ್ದು ಬಂಡವಾಳಗಾರರಿಗೆ ಸರ್ಕಾರಗಳೇ ಮುಕ್ತ ಅವಕಾಶ ನೀಡಿವೆ ಕಾರ್ಮಿಕರು ಆಧುನಿಕ ಜೀತದಾಳುಗಳಾಗಿ ದುಡಿಯಬೇಕಾಗಿವೆ ಯುವ ಪೀಳಿಗೆಯ ಭವಿಷ್ಯವನ್ನು ಕಂಪನಿಗಳು ಆಳು ಮಾಡಲು ಹೊರಟಿದ್ದಾರೆ ಶಾಸಕರು ಸಂಸದರು ಸೇರಿದಂತೆ ಜನಪ್ರತಿನಿಧಿಗಳಿಗೆ ಕಾರ್ಮಿಕರ ಪರ ಧ್ವನಿಯಿಲ್ಲ ಒಗ್ಗಟ್ಟು ಒಂದೇ ದಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರು ಬೆಳೆದ ವಸ್ತುಗಳಿಗೆ ಸರಿಯಾದ ಬೆಂಬಲ ಬೆಲೆ, ಮಾರುಕಟ್ಟೆ ವ್ಯವಸ್ಥೆ ಇಲ್ಲ, ಕೈಗಾರಿಕೆಗಳು ಇಲ್ಲದೇ ಹಣ್ಣು ತರಕಾರಿಗಳು ಕೊಳೆಯುವ ಸ್ಥಿತಿಗೆ ಬಂದಿದೆ ಸರ್ಕಾರಗಳು ನಮ್ಮ ಬೇಡಿಕೆ ಕೇಳಿಸಿಕೊಳ್ಳಲ್ಲ ಕಿವುಡತನ ತೋರುತ್ತಿವೆ. ಇದಕ್ಕಾಗಿ ಒಗ್ಗಟ್ಟು ಮತ್ತು ಐಕ್ಯತೆ ಬೇಕು ದೆಹಲಿ ಮತ್ತು ದೇವನಹಳ್ಳಿಯ ರೈತ ಹೋರಾಟಗಳು ನಮಗೆಲ್ಲ ಮಾದರಿಯಾಗಬೇಕು ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಪ್ರಸ್ತಾವಿಕವಾಗಿ ಮಾತನಾಡಿ, ದುಡಿಯುವ ಜನರಿಗೆ ಬದುಕಲು ಯೋಗ್ಯ ಕೂಲಿ, ವಸತಿ, ಪಿಂಚಣಿ ನೀಡಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರ ಕಾಯಂ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಮಗ್ರ ಸಾಮಾಜಿಕ ಭದ್ರತೆ, ಬರಪೀಡಿತ-ಒಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಮಧುಗಿರಿ ಉಪ ವಿಭಾಗಕ್ಕೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಈ ಪ್ರದೇಶಗಳಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕಿಸುವಂತೆ ಈ ಸಮ್ಮೇಳನದಲ್ಲಿ ಚರ್ಚೆಯಾಗಬೇಕು ಎಂದರು.

ಇದಕ್ಕೂ ಮುಂಚೆ ನಗರದ ಪ್ರವಾಸಿ ಮಂದಿರದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಸಿಐಟಿಯು ಕಾರ್ಯಕರ್ತರು ಸರ್ಕಾರಗಳ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ಮೆರವಣಿಗೆ ಮೂಲಕ ರಂಗಮಂದಿರಕ್ಕೆ ಆಗಮಿಸಿದರು.

ಬಹಿರಂಗ ಸಭೆಯ ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಸಲ್ಲಾವುದ್ದೀನ್ ಬಾಬು, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ,‌ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಆಂಜಲಮ್ಮ, ಮುಖಂಡರಾದ ಪಿ.ಶ್ರೀನಿವಾಸ್, ಪಿ.ಆರ್ ಸೂರ್ಯನಾರಾಯಣ, ಎ.ಆರ್ ಬಾಬು, ಪಾತಕೋಟ ನವೀನ್ ಕುಮಾರ್, ತಂಗರಾಜ್, ಜಯಲಕ್ಷ್ಮಿ, ಭೀಮರಾಜ್, ಶಿವಾನಂದ್, ವೀರಭದ್ರ, ತಿರುಪತಿ, ಆನಂದ್, ಕೇಶವರಾವ್ ಮುಂತಾದವರು ಇದ್ದರು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

6 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

19 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

20 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

21 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

22 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago