Categories: ಕೋಲಾರ

ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ

ಕೋಲಾರ: ನಮ್ಮನ್ನು ಆಳುವ ಸರ್ಕಾರಗಳು ರೈತರು, ಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುವ ಶ್ರಮಜೀವಿಗಳ ಬದುಕಿನ ಜೊತೆ ಚಲ್ಲಾಟದ ಜೊತೆಗೆ ಜನಸಂಖ್ಯೆಯ 2% ಇರುವ ಬಂಡವಾಳಗಾರರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದ್ದಾರೆ ಕಾರ್ಮಿಕರು, ರೈತರು ಒಗ್ಗಟ್ಟ ಪ್ರದರ್ಶನದ ಮೂಲಕ ತಮ್ಮ ಹಕ್ಕನ್ನು ಪಡೆಯಬೇಕಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹೆಚ್.ಎನ್ ಗೋಪಾಲಗೌಡ ತಿಳಿಸಿದರು

ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶನಿವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸಂಘಟನೆಯ ಏಳನೇ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಯನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಗಳು ಮಾಲೀಕನಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಿ ಕಾರ್ಮಿಕರನ್ನು ಬೀದಿಗೆ ತಳ್ಳಿದ್ದಾರೆ ರಾಜಕೀಯ ವ್ಯವಸ್ಥೆ ಯಾವತ್ತೂ ಕಾರ್ಮಿಕರ ಪರ ನಿಲ್ಲುವುದಿಲ್ಲ ಶೋಷಣೆ ಇಲ್ಲದ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಒಂದಾಗುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ ಎಂದರು.

ಬಂಡವಾಳಶಾಹಿಗಳು ಕಾರ್ಮಿಕರ ಅವಶ್ಯಕತೆ ಇ್ಲಲವೆಂದು ನಿರಾಕರಿಸುತ್ತಿದ್ದು, ಸ್ವಯಂಘೋಷಿತ ಪ್ರಭುಗಳಾಗಲು ಹೊರಟಿದ್ದಾರೆ. ಸರ್ಕಾರಗಳು ತಮ್ಮ ಕಾರ್ಯ ಯಶಸ್ವಿಗೊಳಿಸಲು ಖಾಯಂ ಹೊರಗುತ್ತಿಗೆ ನೌಕರರನ್ನು ಬಳಸಿಕೊಳ್ಳುತ್ತಿದ್ದು, ಅವರ ಬದುಕಿನ ಸೇವಾ ಭದ್ರತೆಗೆ ಗಮನ ಹರಿಸದೆ ದುಡಿಸಿಕೊಳ್ಳುತ್ತಿದ್ದಾರೆ ಕಾರ್ಮಿಕರ ಹೋರಾಟದ ಫಲವಾಗಿ ಗಳಿಸಿದ್ದ 29 ಕಾರ್ಮಿಕರ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ ಇದನ್ನು ವಿರೋಧಿಸಬೇಕಾಗಿದೆ ಕಾರ್ಮಿಕರ ಕನಿಷ್ಠ ವೇತನ 36 ಸಾವಿರ ಜಾರಿಗೆ ದೇಶಾದ್ಯಂತ ಇರುವ ಕಾರ್ಮಿಕರು ಒತ್ತಾಯ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ಕಾರ್ಮಿಕರ ಹೋರಾಟಗಳನ್ನು ಸರ್ಕಾರಗಳು ಸಹಿಸಿಕೊಳ್ಳುತ್ತಿಲ್ಲ ಕಾರ್ಮಿಕರ ಕಾಯ್ದೆಗಳು ಅಪಾಯಕಾರಿಯಾಗಿದ್ದು ಬಂಡವಾಳಗಾರರಿಗೆ ಸರ್ಕಾರಗಳೇ ಮುಕ್ತ ಅವಕಾಶ ನೀಡಿವೆ ಕಾರ್ಮಿಕರು ಆಧುನಿಕ ಜೀತದಾಳುಗಳಾಗಿ ದುಡಿಯಬೇಕಾಗಿವೆ ಯುವ ಪೀಳಿಗೆಯ ಭವಿಷ್ಯವನ್ನು ಕಂಪನಿಗಳು ಆಳು ಮಾಡಲು ಹೊರಟಿದ್ದಾರೆ ಶಾಸಕರು ಸಂಸದರು ಸೇರಿದಂತೆ ಜನಪ್ರತಿನಿಧಿಗಳಿಗೆ ಕಾರ್ಮಿಕರ ಪರ ಧ್ವನಿಯಿಲ್ಲ ಒಗ್ಗಟ್ಟು ಒಂದೇ ದಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರು ಬೆಳೆದ ವಸ್ತುಗಳಿಗೆ ಸರಿಯಾದ ಬೆಂಬಲ ಬೆಲೆ, ಮಾರುಕಟ್ಟೆ ವ್ಯವಸ್ಥೆ ಇಲ್ಲ, ಕೈಗಾರಿಕೆಗಳು ಇಲ್ಲದೇ ಹಣ್ಣು ತರಕಾರಿಗಳು ಕೊಳೆಯುವ ಸ್ಥಿತಿಗೆ ಬಂದಿದೆ ಸರ್ಕಾರಗಳು ನಮ್ಮ ಬೇಡಿಕೆ ಕೇಳಿಸಿಕೊಳ್ಳಲ್ಲ ಕಿವುಡತನ ತೋರುತ್ತಿವೆ. ಇದಕ್ಕಾಗಿ ಒಗ್ಗಟ್ಟು ಮತ್ತು ಐಕ್ಯತೆ ಬೇಕು ದೆಹಲಿ ಮತ್ತು ದೇವನಹಳ್ಳಿಯ ರೈತ ಹೋರಾಟಗಳು ನಮಗೆಲ್ಲ ಮಾದರಿಯಾಗಬೇಕು ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಪ್ರಸ್ತಾವಿಕವಾಗಿ ಮಾತನಾಡಿ, ದುಡಿಯುವ ಜನರಿಗೆ ಬದುಕಲು ಯೋಗ್ಯ ಕೂಲಿ, ವಸತಿ, ಪಿಂಚಣಿ ನೀಡಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರ ಕಾಯಂ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಮಗ್ರ ಸಾಮಾಜಿಕ ಭದ್ರತೆ, ಬರಪೀಡಿತ-ಒಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಮಧುಗಿರಿ ಉಪ ವಿಭಾಗಕ್ಕೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಈ ಪ್ರದೇಶಗಳಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕಿಸುವಂತೆ ಈ ಸಮ್ಮೇಳನದಲ್ಲಿ ಚರ್ಚೆಯಾಗಬೇಕು ಎಂದರು.

ಇದಕ್ಕೂ ಮುಂಚೆ ನಗರದ ಪ್ರವಾಸಿ ಮಂದಿರದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಸಿಐಟಿಯು ಕಾರ್ಯಕರ್ತರು ಸರ್ಕಾರಗಳ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ಮೆರವಣಿಗೆ ಮೂಲಕ ರಂಗಮಂದಿರಕ್ಕೆ ಆಗಮಿಸಿದರು.

ಬಹಿರಂಗ ಸಭೆಯ ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಸಲ್ಲಾವುದ್ದೀನ್ ಬಾಬು, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ,‌ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಆಂಜಲಮ್ಮ, ಮುಖಂಡರಾದ ಪಿ.ಶ್ರೀನಿವಾಸ್, ಪಿ.ಆರ್ ಸೂರ್ಯನಾರಾಯಣ, ಎ.ಆರ್ ಬಾಬು, ಪಾತಕೋಟ ನವೀನ್ ಕುಮಾರ್, ತಂಗರಾಜ್, ಜಯಲಕ್ಷ್ಮಿ, ಭೀಮರಾಜ್, ಶಿವಾನಂದ್, ವೀರಭದ್ರ, ತಿರುಪತಿ, ಆನಂದ್, ಕೇಶವರಾವ್ ಮುಂತಾದವರು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

21 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago