Categories: ಕೋಲಾರ

ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ

ಕೋಲಾರ: ನಮ್ಮನ್ನು ಆಳುವ ಸರ್ಕಾರಗಳು ರೈತರು, ಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುವ ಶ್ರಮಜೀವಿಗಳ ಬದುಕಿನ ಜೊತೆ ಚಲ್ಲಾಟದ ಜೊತೆಗೆ ಜನಸಂಖ್ಯೆಯ 2% ಇರುವ ಬಂಡವಾಳಗಾರರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದ್ದಾರೆ ಕಾರ್ಮಿಕರು, ರೈತರು ಒಗ್ಗಟ್ಟ ಪ್ರದರ್ಶನದ ಮೂಲಕ ತಮ್ಮ ಹಕ್ಕನ್ನು ಪಡೆಯಬೇಕಾಗಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹೆಚ್.ಎನ್ ಗೋಪಾಲಗೌಡ ತಿಳಿಸಿದರು

ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶನಿವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸಂಘಟನೆಯ ಏಳನೇ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಯನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಗಳು ಮಾಲೀಕನಿಗೆ ಅನುಕೂಲವಾಗುವಂತೆ ಕಾನೂನು ರೂಪಿಸಿ ಕಾರ್ಮಿಕರನ್ನು ಬೀದಿಗೆ ತಳ್ಳಿದ್ದಾರೆ ರಾಜಕೀಯ ವ್ಯವಸ್ಥೆ ಯಾವತ್ತೂ ಕಾರ್ಮಿಕರ ಪರ ನಿಲ್ಲುವುದಿಲ್ಲ ಶೋಷಣೆ ಇಲ್ಲದ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಒಂದಾಗುವ ಮೂಲಕ ಸರ್ಕಾರಗಳಿಗೆ ಎಚ್ಚರಿಕೆ ಕೊಡಬೇಕಾಗಿದೆ ಎಂದರು.

ಬಂಡವಾಳಶಾಹಿಗಳು ಕಾರ್ಮಿಕರ ಅವಶ್ಯಕತೆ ಇ್ಲಲವೆಂದು ನಿರಾಕರಿಸುತ್ತಿದ್ದು, ಸ್ವಯಂಘೋಷಿತ ಪ್ರಭುಗಳಾಗಲು ಹೊರಟಿದ್ದಾರೆ. ಸರ್ಕಾರಗಳು ತಮ್ಮ ಕಾರ್ಯ ಯಶಸ್ವಿಗೊಳಿಸಲು ಖಾಯಂ ಹೊರಗುತ್ತಿಗೆ ನೌಕರರನ್ನು ಬಳಸಿಕೊಳ್ಳುತ್ತಿದ್ದು, ಅವರ ಬದುಕಿನ ಸೇವಾ ಭದ್ರತೆಗೆ ಗಮನ ಹರಿಸದೆ ದುಡಿಸಿಕೊಳ್ಳುತ್ತಿದ್ದಾರೆ ಕಾರ್ಮಿಕರ ಹೋರಾಟದ ಫಲವಾಗಿ ಗಳಿಸಿದ್ದ 29 ಕಾರ್ಮಿಕರ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ ಇದನ್ನು ವಿರೋಧಿಸಬೇಕಾಗಿದೆ ಕಾರ್ಮಿಕರ ಕನಿಷ್ಠ ವೇತನ 36 ಸಾವಿರ ಜಾರಿಗೆ ದೇಶಾದ್ಯಂತ ಇರುವ ಕಾರ್ಮಿಕರು ಒತ್ತಾಯ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ಗಣೇಶ್ ಮಾತನಾಡಿ ಕಾರ್ಮಿಕರ ಹೋರಾಟಗಳನ್ನು ಸರ್ಕಾರಗಳು ಸಹಿಸಿಕೊಳ್ಳುತ್ತಿಲ್ಲ ಕಾರ್ಮಿಕರ ಕಾಯ್ದೆಗಳು ಅಪಾಯಕಾರಿಯಾಗಿದ್ದು ಬಂಡವಾಳಗಾರರಿಗೆ ಸರ್ಕಾರಗಳೇ ಮುಕ್ತ ಅವಕಾಶ ನೀಡಿವೆ ಕಾರ್ಮಿಕರು ಆಧುನಿಕ ಜೀತದಾಳುಗಳಾಗಿ ದುಡಿಯಬೇಕಾಗಿವೆ ಯುವ ಪೀಳಿಗೆಯ ಭವಿಷ್ಯವನ್ನು ಕಂಪನಿಗಳು ಆಳು ಮಾಡಲು ಹೊರಟಿದ್ದಾರೆ ಶಾಸಕರು ಸಂಸದರು ಸೇರಿದಂತೆ ಜನಪ್ರತಿನಿಧಿಗಳಿಗೆ ಕಾರ್ಮಿಕರ ಪರ ಧ್ವನಿಯಿಲ್ಲ ಒಗ್ಗಟ್ಟು ಒಂದೇ ದಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ರೈತರು ಬೆಳೆದ ವಸ್ತುಗಳಿಗೆ ಸರಿಯಾದ ಬೆಂಬಲ ಬೆಲೆ, ಮಾರುಕಟ್ಟೆ ವ್ಯವಸ್ಥೆ ಇಲ್ಲ, ಕೈಗಾರಿಕೆಗಳು ಇಲ್ಲದೇ ಹಣ್ಣು ತರಕಾರಿಗಳು ಕೊಳೆಯುವ ಸ್ಥಿತಿಗೆ ಬಂದಿದೆ ಸರ್ಕಾರಗಳು ನಮ್ಮ ಬೇಡಿಕೆ ಕೇಳಿಸಿಕೊಳ್ಳಲ್ಲ ಕಿವುಡತನ ತೋರುತ್ತಿವೆ. ಇದಕ್ಕಾಗಿ ಒಗ್ಗಟ್ಟು ಮತ್ತು ಐಕ್ಯತೆ ಬೇಕು ದೆಹಲಿ ಮತ್ತು ದೇವನಹಳ್ಳಿಯ ರೈತ ಹೋರಾಟಗಳು ನಮಗೆಲ್ಲ ಮಾದರಿಯಾಗಬೇಕು ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಪ್ರಸ್ತಾವಿಕವಾಗಿ ಮಾತನಾಡಿ, ದುಡಿಯುವ ಜನರಿಗೆ ಬದುಕಲು ಯೋಗ್ಯ ಕೂಲಿ, ವಸತಿ, ಪಿಂಚಣಿ ನೀಡಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರ ಕಾಯಂ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಮಗ್ರ ಸಾಮಾಜಿಕ ಭದ್ರತೆ, ಬರಪೀಡಿತ-ಒಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಮಧುಗಿರಿ ಉಪ ವಿಭಾಗಕ್ಕೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಈ ಪ್ರದೇಶಗಳಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕಿಸುವಂತೆ ಈ ಸಮ್ಮೇಳನದಲ್ಲಿ ಚರ್ಚೆಯಾಗಬೇಕು ಎಂದರು.

ಇದಕ್ಕೂ ಮುಂಚೆ ನಗರದ ಪ್ರವಾಸಿ ಮಂದಿರದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಸಿಐಟಿಯು ಕಾರ್ಯಕರ್ತರು ಸರ್ಕಾರಗಳ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ಮೆರವಣಿಗೆ ಮೂಲಕ ರಂಗಮಂದಿರಕ್ಕೆ ಆಗಮಿಸಿದರು.

ಬಹಿರಂಗ ಸಭೆಯ ವೇದಿಕೆಯಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಅಮರನಾರಾಯಣ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಸಲ್ಲಾವುದ್ದೀನ್ ಬಾಬು, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ,‌ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಆಂಜಲಮ್ಮ, ಮುಖಂಡರಾದ ಪಿ.ಶ್ರೀನಿವಾಸ್, ಪಿ.ಆರ್ ಸೂರ್ಯನಾರಾಯಣ, ಎ.ಆರ್ ಬಾಬು, ಪಾತಕೋಟ ನವೀನ್ ಕುಮಾರ್, ತಂಗರಾಜ್, ಜಯಲಕ್ಷ್ಮಿ, ಭೀಮರಾಜ್, ಶಿವಾನಂದ್, ವೀರಭದ್ರ, ತಿರುಪತಿ, ಆನಂದ್, ಕೇಶವರಾವ್ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

9 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

14 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago