Categories: ಕೋಲಾರ

ಸರ್ಕಾರಗಳು ಕಾರ್ಮಿಕರ ನಿರ್ಲಕ್ಷ್ಯ: ಸಂಘಟಿತ ಹೋರಾಟದ ಮೂಲಕವೇ ಸೌಲಭ್ಯ ಪಡೆಯಲು ಸಾಧ್ಯ: ಹೊನ್ನೇನಹಳ್ಳಿ ಯಲ್ಲಪ್ಪ

ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.

ನಗರದ ಕೋರ್ಟ್ ವೃತ್ತದಲ್ಲಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ138 ನೇ ಮೇ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೃಷಿ, ಕೈಗಾರಿಕೆ, ಉದ್ಯಮ ಹೀಗೆ ಎಲ್ಲಾ ರಂಗಗಳಲ್ಲಿಯೂ ಕಾರ್ಮಿಕರು ಒಂದಲ್ಲ ಒಂದು ರೀತಿಯಲ್ಲಿ ದುಡಿಯುತ್ತಿದ್ದಾರೆ. ದಿನದ 24 ಗಂಟೆಯೂ ಕಾರ್ಮಿಕರಿಂದ ಮಾಲೀಕರು ದುಡಿಸಿಕೊಳ್ಳುತ್ತಿದ್ದುದನ್ನು ವಿರೋಧಿಸಿ ಅಮೇರಿಕಾದ ಚಿಕಾಗೋ ನಗರದಲ್ಲಿ ಕಾರ್ಮಿಕರು ಚಳುವಳಿ ಆರಂಭಿಸಿ ದಿನಕ್ಕೆ ಎಂಟು ಗಂಟೆಯಷ್ಟೆ ದುಡಿಯುತ್ತೇವೆಂಬ ಬೇಡಿಕೆಯನ್ನು ಮುಂದಿಟ್ಟರು. ಅಂದಿನಿಂದ ಇಲ್ಲಿಯವರೆಗೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಲೆ ಇದ್ದಾರೆಂದರು.

ಸಂವಿಧಾನ ಜಾರಿಯಾದ ಮೇಲೆ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಕಾರ್ಮಿಕರ ಕುಟುಂಬಕ್ಕೆ ತಲುಪುತ್ತಿವೆ. ಮಾಲೀಕರು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ರೈತರು ಹೇಗೆ ದೇಶದ ಬೆನ್ನೆಲುಬೋ ಅದೇ ರೀತಿ ಕಾರ್ಮಿಕರು ಕೂಡ ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದಾರೆ. ದೇಶ ಕಟ್ಟುವಲ್ಲಿ ಕಾರ್ಮಿಕರ ಶ್ರಮವಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಸೌಲಭ್ಯಗಳನ್ನು ಕಸಿದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಪರವಾಗಿದ್ದು ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಕಾರ್ಮಿಕ ದಿನಾಚರಣೆಯನ್ನು ಪ್ರತಿ ವರ್ಷ ಮೇ.1 ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿ ರಚಿಸಿ ಅದರ ಮೂಲಕ ನಾನಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರಿಗೆ ಮತ್ತು ಮಕ್ಕಳ ಶಿಕ್ಷಣ, ವಿವಾಹಕ್ಕೆ ಹಣದ ನೆರವು ಕೊಡುತ್ತಿದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈಗಲೂ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಯುತ ಬೇಡಿಕೆಗಳು ಇನ್ನು ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಫಲಾನಿಭವಿಗಳಿಗಳಿಗೆ ಗುರುತಿನ ಚೀಟಿ ವಿತರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮುರಳಿ, ತಾಲೂಕು ಕಾರ್ಯದರ್ಶಿ ನಾಗರಾಜ್, ಗ್ರಾಮಾಂತರ ಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಗಂಗಾಧರ್, ಶಿವಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

7 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

7 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

19 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

22 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

23 hours ago