ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.
ನಗರದ ಕೋರ್ಟ್ ವೃತ್ತದಲ್ಲಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ138 ನೇ ಮೇ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೃಷಿ, ಕೈಗಾರಿಕೆ, ಉದ್ಯಮ ಹೀಗೆ ಎಲ್ಲಾ ರಂಗಗಳಲ್ಲಿಯೂ ಕಾರ್ಮಿಕರು ಒಂದಲ್ಲ ಒಂದು ರೀತಿಯಲ್ಲಿ ದುಡಿಯುತ್ತಿದ್ದಾರೆ. ದಿನದ 24 ಗಂಟೆಯೂ ಕಾರ್ಮಿಕರಿಂದ ಮಾಲೀಕರು ದುಡಿಸಿಕೊಳ್ಳುತ್ತಿದ್ದುದನ್ನು ವಿರೋಧಿಸಿ ಅಮೇರಿಕಾದ ಚಿಕಾಗೋ ನಗರದಲ್ಲಿ ಕಾರ್ಮಿಕರು ಚಳುವಳಿ ಆರಂಭಿಸಿ ದಿನಕ್ಕೆ ಎಂಟು ಗಂಟೆಯಷ್ಟೆ ದುಡಿಯುತ್ತೇವೆಂಬ ಬೇಡಿಕೆಯನ್ನು ಮುಂದಿಟ್ಟರು. ಅಂದಿನಿಂದ ಇಲ್ಲಿಯವರೆಗೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಲೆ ಇದ್ದಾರೆಂದರು.
ಸಂವಿಧಾನ ಜಾರಿಯಾದ ಮೇಲೆ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಕಾರ್ಮಿಕರ ಕುಟುಂಬಕ್ಕೆ ತಲುಪುತ್ತಿವೆ. ಮಾಲೀಕರು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ರೈತರು ಹೇಗೆ ದೇಶದ ಬೆನ್ನೆಲುಬೋ ಅದೇ ರೀತಿ ಕಾರ್ಮಿಕರು ಕೂಡ ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದಾರೆ. ದೇಶ ಕಟ್ಟುವಲ್ಲಿ ಕಾರ್ಮಿಕರ ಶ್ರಮವಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಸೌಲಭ್ಯಗಳನ್ನು ಕಸಿದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಪರವಾಗಿದ್ದು ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಎಂದರು.
ಪ್ರಜಾಪ್ರಭುತ್ವದಲ್ಲಿ ಕಾರ್ಮಿಕ ದಿನಾಚರಣೆಯನ್ನು ಪ್ರತಿ ವರ್ಷ ಮೇ.1 ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿ ರಚಿಸಿ ಅದರ ಮೂಲಕ ನಾನಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರಿಗೆ ಮತ್ತು ಮಕ್ಕಳ ಶಿಕ್ಷಣ, ವಿವಾಹಕ್ಕೆ ಹಣದ ನೆರವು ಕೊಡುತ್ತಿದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈಗಲೂ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಯುತ ಬೇಡಿಕೆಗಳು ಇನ್ನು ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಫಲಾನಿಭವಿಗಳಿಗಳಿಗೆ ಗುರುತಿನ ಚೀಟಿ ವಿತರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮುರಳಿ, ತಾಲೂಕು ಕಾರ್ಯದರ್ಶಿ ನಾಗರಾಜ್, ಗ್ರಾಮಾಂತರ ಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಗಂಗಾಧರ್, ಶಿವಣ್ಣ ಮುಂತಾದವರು ಇದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…