Categories: ಕೋಲಾರ

ಸರ್ಕಾರಗಳು ಕಾರ್ಮಿಕರ ನಿರ್ಲಕ್ಷ್ಯ: ಸಂಘಟಿತ ಹೋರಾಟದ ಮೂಲಕವೇ ಸೌಲಭ್ಯ ಪಡೆಯಲು ಸಾಧ್ಯ: ಹೊನ್ನೇನಹಳ್ಳಿ ಯಲ್ಲಪ್ಪ

ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.

ನಗರದ ಕೋರ್ಟ್ ವೃತ್ತದಲ್ಲಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ138 ನೇ ಮೇ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೃಷಿ, ಕೈಗಾರಿಕೆ, ಉದ್ಯಮ ಹೀಗೆ ಎಲ್ಲಾ ರಂಗಗಳಲ್ಲಿಯೂ ಕಾರ್ಮಿಕರು ಒಂದಲ್ಲ ಒಂದು ರೀತಿಯಲ್ಲಿ ದುಡಿಯುತ್ತಿದ್ದಾರೆ. ದಿನದ 24 ಗಂಟೆಯೂ ಕಾರ್ಮಿಕರಿಂದ ಮಾಲೀಕರು ದುಡಿಸಿಕೊಳ್ಳುತ್ತಿದ್ದುದನ್ನು ವಿರೋಧಿಸಿ ಅಮೇರಿಕಾದ ಚಿಕಾಗೋ ನಗರದಲ್ಲಿ ಕಾರ್ಮಿಕರು ಚಳುವಳಿ ಆರಂಭಿಸಿ ದಿನಕ್ಕೆ ಎಂಟು ಗಂಟೆಯಷ್ಟೆ ದುಡಿಯುತ್ತೇವೆಂಬ ಬೇಡಿಕೆಯನ್ನು ಮುಂದಿಟ್ಟರು. ಅಂದಿನಿಂದ ಇಲ್ಲಿಯವರೆಗೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಲೆ ಇದ್ದಾರೆಂದರು.

ಸಂವಿಧಾನ ಜಾರಿಯಾದ ಮೇಲೆ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಕಾರ್ಮಿಕರ ಕುಟುಂಬಕ್ಕೆ ತಲುಪುತ್ತಿವೆ. ಮಾಲೀಕರು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ರೈತರು ಹೇಗೆ ದೇಶದ ಬೆನ್ನೆಲುಬೋ ಅದೇ ರೀತಿ ಕಾರ್ಮಿಕರು ಕೂಡ ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದಾರೆ. ದೇಶ ಕಟ್ಟುವಲ್ಲಿ ಕಾರ್ಮಿಕರ ಶ್ರಮವಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಸೌಲಭ್ಯಗಳನ್ನು ಕಸಿದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಪರವಾಗಿದ್ದು ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಕಾರ್ಮಿಕ ದಿನಾಚರಣೆಯನ್ನು ಪ್ರತಿ ವರ್ಷ ಮೇ.1 ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿ ರಚಿಸಿ ಅದರ ಮೂಲಕ ನಾನಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರಿಗೆ ಮತ್ತು ಮಕ್ಕಳ ಶಿಕ್ಷಣ, ವಿವಾಹಕ್ಕೆ ಹಣದ ನೆರವು ಕೊಡುತ್ತಿದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈಗಲೂ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಯುತ ಬೇಡಿಕೆಗಳು ಇನ್ನು ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಫಲಾನಿಭವಿಗಳಿಗಳಿಗೆ ಗುರುತಿನ ಚೀಟಿ ವಿತರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮುರಳಿ, ತಾಲೂಕು ಕಾರ್ಯದರ್ಶಿ ನಾಗರಾಜ್, ಗ್ರಾಮಾಂತರ ಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಗಂಗಾಧರ್, ಶಿವಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

1 hour ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

3 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

3 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

4 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

8 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

9 hours ago