Categories: ಕೋಲಾರ

ಸರ್ಕಾರಗಳು ಕಾರ್ಮಿಕರ ನಿರ್ಲಕ್ಷ್ಯ: ಸಂಘಟಿತ ಹೋರಾಟದ ಮೂಲಕವೇ ಸೌಲಭ್ಯ ಪಡೆಯಲು ಸಾಧ್ಯ: ಹೊನ್ನೇನಹಳ್ಳಿ ಯಲ್ಲಪ್ಪ

ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.

ನಗರದ ಕೋರ್ಟ್ ವೃತ್ತದಲ್ಲಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ138 ನೇ ಮೇ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೃಷಿ, ಕೈಗಾರಿಕೆ, ಉದ್ಯಮ ಹೀಗೆ ಎಲ್ಲಾ ರಂಗಗಳಲ್ಲಿಯೂ ಕಾರ್ಮಿಕರು ಒಂದಲ್ಲ ಒಂದು ರೀತಿಯಲ್ಲಿ ದುಡಿಯುತ್ತಿದ್ದಾರೆ. ದಿನದ 24 ಗಂಟೆಯೂ ಕಾರ್ಮಿಕರಿಂದ ಮಾಲೀಕರು ದುಡಿಸಿಕೊಳ್ಳುತ್ತಿದ್ದುದನ್ನು ವಿರೋಧಿಸಿ ಅಮೇರಿಕಾದ ಚಿಕಾಗೋ ನಗರದಲ್ಲಿ ಕಾರ್ಮಿಕರು ಚಳುವಳಿ ಆರಂಭಿಸಿ ದಿನಕ್ಕೆ ಎಂಟು ಗಂಟೆಯಷ್ಟೆ ದುಡಿಯುತ್ತೇವೆಂಬ ಬೇಡಿಕೆಯನ್ನು ಮುಂದಿಟ್ಟರು. ಅಂದಿನಿಂದ ಇಲ್ಲಿಯವರೆಗೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಲೆ ಇದ್ದಾರೆಂದರು.

ಸಂವಿಧಾನ ಜಾರಿಯಾದ ಮೇಲೆ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಕಾರ್ಮಿಕರ ಕುಟುಂಬಕ್ಕೆ ತಲುಪುತ್ತಿವೆ. ಮಾಲೀಕರು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ರೈತರು ಹೇಗೆ ದೇಶದ ಬೆನ್ನೆಲುಬೋ ಅದೇ ರೀತಿ ಕಾರ್ಮಿಕರು ಕೂಡ ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದಾರೆ. ದೇಶ ಕಟ್ಟುವಲ್ಲಿ ಕಾರ್ಮಿಕರ ಶ್ರಮವಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಸೌಲಭ್ಯಗಳನ್ನು ಕಸಿದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಪರವಾಗಿದ್ದು ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಕಾರ್ಮಿಕ ದಿನಾಚರಣೆಯನ್ನು ಪ್ರತಿ ವರ್ಷ ಮೇ.1 ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿ ರಚಿಸಿ ಅದರ ಮೂಲಕ ನಾನಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರಿಗೆ ಮತ್ತು ಮಕ್ಕಳ ಶಿಕ್ಷಣ, ವಿವಾಹಕ್ಕೆ ಹಣದ ನೆರವು ಕೊಡುತ್ತಿದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈಗಲೂ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಯುತ ಬೇಡಿಕೆಗಳು ಇನ್ನು ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಫಲಾನಿಭವಿಗಳಿಗಳಿಗೆ ಗುರುತಿನ ಚೀಟಿ ವಿತರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮುರಳಿ, ತಾಲೂಕು ಕಾರ್ಯದರ್ಶಿ ನಾಗರಾಜ್, ಗ್ರಾಮಾಂತರ ಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಗಂಗಾಧರ್, ಶಿವಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

45 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

22 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago