Categories: ಕೋಲಾರ

ಸರ್ಕಾರಗಳು ಕಾರ್ಮಿಕರ ನಿರ್ಲಕ್ಷ್ಯ: ಸಂಘಟಿತ ಹೋರಾಟದ ಮೂಲಕವೇ ಸೌಲಭ್ಯ ಪಡೆಯಲು ಸಾಧ್ಯ: ಹೊನ್ನೇನಹಳ್ಳಿ ಯಲ್ಲಪ್ಪ

ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.

ನಗರದ ಕೋರ್ಟ್ ವೃತ್ತದಲ್ಲಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ138 ನೇ ಮೇ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೃಷಿ, ಕೈಗಾರಿಕೆ, ಉದ್ಯಮ ಹೀಗೆ ಎಲ್ಲಾ ರಂಗಗಳಲ್ಲಿಯೂ ಕಾರ್ಮಿಕರು ಒಂದಲ್ಲ ಒಂದು ರೀತಿಯಲ್ಲಿ ದುಡಿಯುತ್ತಿದ್ದಾರೆ. ದಿನದ 24 ಗಂಟೆಯೂ ಕಾರ್ಮಿಕರಿಂದ ಮಾಲೀಕರು ದುಡಿಸಿಕೊಳ್ಳುತ್ತಿದ್ದುದನ್ನು ವಿರೋಧಿಸಿ ಅಮೇರಿಕಾದ ಚಿಕಾಗೋ ನಗರದಲ್ಲಿ ಕಾರ್ಮಿಕರು ಚಳುವಳಿ ಆರಂಭಿಸಿ ದಿನಕ್ಕೆ ಎಂಟು ಗಂಟೆಯಷ್ಟೆ ದುಡಿಯುತ್ತೇವೆಂಬ ಬೇಡಿಕೆಯನ್ನು ಮುಂದಿಟ್ಟರು. ಅಂದಿನಿಂದ ಇಲ್ಲಿಯವರೆಗೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಲೆ ಇದ್ದಾರೆಂದರು.

ಸಂವಿಧಾನ ಜಾರಿಯಾದ ಮೇಲೆ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಕಾರ್ಮಿಕರ ಕುಟುಂಬಕ್ಕೆ ತಲುಪುತ್ತಿವೆ. ಮಾಲೀಕರು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ರೈತರು ಹೇಗೆ ದೇಶದ ಬೆನ್ನೆಲುಬೋ ಅದೇ ರೀತಿ ಕಾರ್ಮಿಕರು ಕೂಡ ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದಾರೆ. ದೇಶ ಕಟ್ಟುವಲ್ಲಿ ಕಾರ್ಮಿಕರ ಶ್ರಮವಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಸೌಲಭ್ಯಗಳನ್ನು ಕಸಿದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಪರವಾಗಿದ್ದು ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಕಾರ್ಮಿಕ ದಿನಾಚರಣೆಯನ್ನು ಪ್ರತಿ ವರ್ಷ ಮೇ.1 ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿ ರಚಿಸಿ ಅದರ ಮೂಲಕ ನಾನಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರಿಗೆ ಮತ್ತು ಮಕ್ಕಳ ಶಿಕ್ಷಣ, ವಿವಾಹಕ್ಕೆ ಹಣದ ನೆರವು ಕೊಡುತ್ತಿದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈಗಲೂ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಯುತ ಬೇಡಿಕೆಗಳು ಇನ್ನು ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಫಲಾನಿಭವಿಗಳಿಗಳಿಗೆ ಗುರುತಿನ ಚೀಟಿ ವಿತರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮುರಳಿ, ತಾಲೂಕು ಕಾರ್ಯದರ್ಶಿ ನಾಗರಾಜ್, ಗ್ರಾಮಾಂತರ ಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಗಂಗಾಧರ್, ಶಿವಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago