Categories: ಕೋಲಾರ

ಸರ್ಕಾರಗಳು ಕಾರ್ಮಿಕರ ನಿರ್ಲಕ್ಷ್ಯ: ಸಂಘಟಿತ ಹೋರಾಟದ ಮೂಲಕವೇ ಸೌಲಭ್ಯ ಪಡೆಯಲು ಸಾಧ್ಯ: ಹೊನ್ನೇನಹಳ್ಳಿ ಯಲ್ಲಪ್ಪ

ಕೋಲಾರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ, ಭದ್ರತೆ ಕಲ್ಪಿಸಬೇಕಾದ ಸರ್ಕಾರಗಳು ಕೇವಲ ಭರವಸೆ ನೀಡುವುದರಲ್ಲಿ ಕಾಲಹರಣ ಮಾಡುತ್ತಿವೆ. ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕರು ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದು ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ತಿಳಿಸಿದರು.

ನಗರದ ಕೋರ್ಟ್ ವೃತ್ತದಲ್ಲಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧವಾರ ನಡೆದ138 ನೇ ಮೇ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೃಷಿ, ಕೈಗಾರಿಕೆ, ಉದ್ಯಮ ಹೀಗೆ ಎಲ್ಲಾ ರಂಗಗಳಲ್ಲಿಯೂ ಕಾರ್ಮಿಕರು ಒಂದಲ್ಲ ಒಂದು ರೀತಿಯಲ್ಲಿ ದುಡಿಯುತ್ತಿದ್ದಾರೆ. ದಿನದ 24 ಗಂಟೆಯೂ ಕಾರ್ಮಿಕರಿಂದ ಮಾಲೀಕರು ದುಡಿಸಿಕೊಳ್ಳುತ್ತಿದ್ದುದನ್ನು ವಿರೋಧಿಸಿ ಅಮೇರಿಕಾದ ಚಿಕಾಗೋ ನಗರದಲ್ಲಿ ಕಾರ್ಮಿಕರು ಚಳುವಳಿ ಆರಂಭಿಸಿ ದಿನಕ್ಕೆ ಎಂಟು ಗಂಟೆಯಷ್ಟೆ ದುಡಿಯುತ್ತೇವೆಂಬ ಬೇಡಿಕೆಯನ್ನು ಮುಂದಿಟ್ಟರು. ಅಂದಿನಿಂದ ಇಲ್ಲಿಯವರೆಗೂ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಲೆ ಇದ್ದಾರೆಂದರು.

ಸಂವಿಧಾನ ಜಾರಿಯಾದ ಮೇಲೆ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಕಾರ್ಮಿಕರ ಕುಟುಂಬಕ್ಕೆ ತಲುಪುತ್ತಿವೆ. ಮಾಲೀಕರು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು ರೈತರು ಹೇಗೆ ದೇಶದ ಬೆನ್ನೆಲುಬೋ ಅದೇ ರೀತಿ ಕಾರ್ಮಿಕರು ಕೂಡ ದೇಶದ ಬೆನ್ನೆಲುಬಾಗಿ ದುಡಿಯುತ್ತಿದ್ದಾರೆ. ದೇಶ ಕಟ್ಟುವಲ್ಲಿ ಕಾರ್ಮಿಕರ ಶ್ರಮವಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಸೌಲಭ್ಯಗಳನ್ನು ಕಸಿದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಪರವಾಗಿದ್ದು ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಕಾರ್ಮಿಕ ದಿನಾಚರಣೆಯನ್ನು ಪ್ರತಿ ವರ್ಷ ಮೇ.1 ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿ ರಚಿಸಿ ಅದರ ಮೂಲಕ ನಾನಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರಿಗೆ ಮತ್ತು ಮಕ್ಕಳ ಶಿಕ್ಷಣ, ವಿವಾಹಕ್ಕೆ ಹಣದ ನೆರವು ಕೊಡುತ್ತಿದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈಗಲೂ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಯುತ ಬೇಡಿಕೆಗಳು ಇನ್ನು ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಫಲಾನಿಭವಿಗಳಿಗಳಿಗೆ ಗುರುತಿನ ಚೀಟಿ ವಿತರಿಸಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಪ್ಪ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮುರಳಿ, ತಾಲೂಕು ಕಾರ್ಯದರ್ಶಿ ನಾಗರಾಜ್, ಗ್ರಾಮಾಂತರ ಕಾರ್ಯದರ್ಶಿ ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಗಂಗಾಧರ್, ಶಿವಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

5 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

5 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

5 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

5 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

8 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

12 hours ago