ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ ಪ್ರಾರಂಭವಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡಿಸಿಕೊಳ್ಳಲು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಕೇಂದ್ರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಮಾವು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಮಾವು ಗೆ ರೂ 1,750/-(ಮಾರುಕಟ್ಟೆ ಮಧ್ಯ ಪ್ರವೇಶ ದರ ಮತ್ತು ಪ್ರಚಲಿತ ಮಾರುಕಟ್ಟೆ ಧಾರಣೆಯ ಶೇಕಡ 25ರ ಮಿತಿಗೊಳಪಟ್ಟಿರತಕ್ಕದ್ದು) ಗಳಂತೆ ದರ ನಿಗದಿಪಡಿಸಿದೆ(ಪ್ರತಿ ಕೆಜಿಗೆ ರೂ. 4.37/-). ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮ ನಿಯಮಿತ ಬೆಂಗಳೂರು ಸಂಸ್ಥೆ ವತಿಯಿಂದ ಖರೀದಿ ಮಾಡಲಾಗುತ್ತದೆ.

*ನೋಂದಣಿ ಕೇಂದ್ರಗಳ ವಿಳಾಸ*
1. ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ಹೊಸಕೋಟೆ ತಾಲ್ಲೂಕು, ಸರ್ಕಾರಿ ಆಸ್ಪತ್ರೆ ಹತ್ತಿರ, ಕೋಲಾರ ಹೈವೇ, ಹೊಸಕೋಟೆ.
2. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ದೊಡ್ಡಬಳ್ಳಾಪುರ ತಾಲೂಕು, ಹೊಸ ಬಸ್ಟಾಂಡ್ ಹತ್ತಿರ, ತಾಲ್ಲೂಕು ಪಂಚಾಯಿತಿ ಮುಂಭಾಗ, ದೊಡ್ಡಬಳ್ಳಾಪುರ.

*ಖರೀದಿ ಕೇಂದ್ರಗಳ ವಿಳಾಸ*
1. ಕೃಷಿ ಉತ್ಪನ್ನ ಮಾರುಕಟ್ಟೆ, ಶ್ರೀನಿವಾಸಪುರ, ಕೋಲಾರ ಜಿಲ್ಲೆ.
2. ಕೃಷಿ ಉತ್ಪನ್ನ ಮಾರುಕಟ್ಟೆ, ಮುಳಬಾಗಿಲು ಮತ್ತು ಚಿಂತಾಮಣಿ.
3. ತಾಯಲೂರು ಉಪ ಮಾರುಕಟ್ಟೆ, ತಾಯಾಲೂರು.

ಮಾವು ಖರೀದಿಗೆ ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ಮಾವು ಬೆಳೆಗಾರರು ತಮ್ಮ ಜಮೀನಿನ ಪಹಣಿ/ RTC, ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ದಾಖಲೆಗಳನ್ನು ಹತ್ತಿರದ ನೋಂದಣಿ ಕೇಂದ್ರಕ್ಕೆ ತೆರಳಿ ನೋಂದಾಯಿಸಿಕೊಳ್ಳಬಹುದು.

ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು RTC ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿಯಲ್ಲಿ ಎಕರೆಗೆ 40 ಕ್ವಿಂಟಾಲ್ ನಂತೆ ಗರಿಷ್ಟ 05 ಎಕರೆಗೆ 200 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡಲಾಗುವುದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮುಖಾಂತರ ಹಣ ಪಾವತಿಸಲಾಗುವುದು.

ಜಿಲ್ಲೆಯಲ್ಲಿ ಮಾವು ಬೆಳೆಯನ್ನು 5081.14 ಹೆ, ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಪ್ರಮುಖವಾಗಿ ಬಾದಾಮಿ, ರಸಪುರಿ, ತೋತಾಪುರಿ, ಮಲ್ಗೋವಾ, ಮಲ್ಲಿಕಾ, ಸೇಂದೂರಾ ಮುಂತಾದ ತಳಿಗಳನ್ನು ಬೆಳೆಯಲಾಗುತ್ತಿದೆ. ವಾರ್ಷಿಕ ಉತ್ಪಾದನೆಯು 40653.4 ಮೆಟ್ರಿಕ್ ಟನ್ ಗಳೆಂದು ಅಂದಾಜಿಸಲಾಗಿತ್ತು. ಜಿಲ್ಲೆಯಲ್ಲಿ ತೋತಾಪುರಿ ತಳಿಯು ಶೇ.15 ರಿಂದ 20 ರಷ್ಟು ಇದೆ ಎಂದು ಅಂದಾಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹೊಸಕೋಟೆ – 9880210892, ದೇವನಹಳ್ಳಿ – 9480461234, ದೊಡ್ಡಬಳ್ಳಾಪುರ – 9482129648, ನೆಲಮಂಗಲ – 9880461607, ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ-9902581832, ಹೊಸಕೋಟೆ – 8453966868, ಕಾರ್ಯದರ್ಶಿಗಳು, ಹೊಸಕೋಟೆಯ ಕೃಷಿ ಉತ್ಪನ್ನ ಮಾರುಕಟ್ಟೆ (ಎ.ಪಿ.ಎಂ.ಸಿ)- 9742888865 ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

3 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

4 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

6 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

16 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

19 hours ago