Categories: ರಾಜ್ಯ

ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ: ಜೆಡಿಎಸ್ ಸದಸ್ಯರ ಪ್ರತಿಭಟನೆ: ವಶಕ್ಕೆ ಪಡೆದ ಪೊಲೀಸರು: ಇದೊಂದು ಕರಾಳ ದಿನ: ಸರ್ಕಾರ ಸರ್ವಾಧಿಕಾರಿ ರೀತಿ ವರ್ತಿಸುತ್ತಿದೆ: ಬಸವರಾಜ ಬೊಮ್ಮಾಯಿ‌ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಧರಣಿ ನಿರತ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸ್ಪೀಕರ್ ಕಚೇರಿ ಹಾಗೂ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಬಿಜೆಪಿ ಜೆಡಿಎಸ್ ಸದಸ್ಯರೊಂದಿಗೆ ಧರಣಿ ನಡೆಸಿದರು. ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆದರು.

ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜುಲೈ 17, 18ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೊಟೊಕಾಲ್ ಇಲ್ಲದವರಿಗೂ ಪಿಎ ಥರಾ ಕೆಲಸ ಮಾಡುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಯಾರು ರಾಜ್ಯದ ಗೆಸ್ಟ್ ಅಂತ ಇರುತ್ತಾರೊ ಅವರಿಗೆ ಗೌರವ ಸಲ್ಲಿಸಲು ಪ್ರೊಟೊಕಾಲ್ ಅಧಿಕಾರಿಗಳು ಇದ್ದಾರೆ. ಅವರ ಬದಲು ಹಿರಿಯ ಐಎಎಸ್ ಅಧಿಕಾರಿಗಳಿಗೆ ರಾಜಕಾರಣಿಗಳನ್ನು ಬಾಗಿಲು ಕಾಯಲು ಹಚ್ಚಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೆಲೆ ಪ್ರಜಾಪ್ರಭುತ್ವ ಕಗ್ಗೊಲೆ ಆಗಿದೆ. ಸ್ಫೀಕರ್‌ ಸ್ಥಾನ ದುರುಪಯೋಗ ಆಗಿದೆ. ಸ್ಫೀಕರ್‌ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ನಾವು ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮ ಸದಸ್ಯರಿಗೆ ಊಟಕ್ಕೆ ಬಿಡದೆ ಸದನ ನಡೆಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಿಟ್ಲರ್ ಶಾಹಿ ಆಡಳಿತ ನಡೆಸಿದ್ದಾರೆ. ಸ್ಫೀಕರ್‌ ಕಾಂಗ್ರೆಸ್ ನವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಸ್ಫೀಕರ್‌ ಕುರ್ಚಿಗೆ ಅವಮಾನವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್ ಪೇಪರ್ ಹರಿದು ಹಾಕಿದ ಉದಾಹರಣೆ ಇದೆ. ಒಬ್ಬ ಸದಸ್ಯರು ಸ್ಪೀಕರ್ ಮುಂದಿನ ಮೈಕ್ ಕಿತ್ತು ಹಾಕಿದ ಉದಾಹರಣೆ ಇದೆ. ಸಿದ್ದರಾಮಯ್ಯ ಸದನದ ಬಾಗಿಲು ಒದ್ದು ಹೊಗಿರುವುದು ನಿದರ್ಶನ ಇದೆ. ಇವರು ಪ್ರತಿಪಕ್ಷದ ಹಕ್ಕನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇದು ಕರಾಳ ದಿನ. ಇದರ ವಿರುದ್ದ ನಾವು ಸದನದ ಹೊರಗೂ ಹೋರಾಟ ಮಾಡಿ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.

ಇದೇ ವೇಳೆ ಉಪ ಸಭಾಧ್ಯಕ್ಷರಿಗೆ ಬಿಜೆಪಿ ಅವಮಾನ ಮಾಡಿದೆ ಎಂಬ ಕಾಂಗ್ರೆಸ್ ನವರ ಆರೋಪದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನವರು ಉಪ ಸಭಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ.‌ ಸ್ಪೀಕರ್ ಸದನದ ಪರಿಸ್ಥಿತಿಯನ್ನು ನಿಭಾಯಿಸದೇ ಎದ್ದು ಹೋಗಿದ್ದಾರೆ. ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರನ್ನು ಉಪಸಭಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್ ನವರೇ ಅವರಿಗೆ ಅವಮಾನ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

*ರಾಜ್ಯದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್:*

ಇದಕ್ಕೂ ಮೊದಲು ಸದನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ರಾಜಕೀಯ ಸಮಾವೇಶಗಳು ಇದೇ ಮೊದಲ ಬಾರಿಯಲ್ಲ. ಸಾಕಷ್ಟು ಬಾರಿ ಸಮಾವೇಶಗಳು ನಡೆದಿವೆ. ಈ ಸಭೆಗೆ ಬಂದವರು ಅನೇಕರು ಎಂಎಲ್ ಎ, ಎಂಪಿ ಅಲ್ಲಾ, ಪ್ರಧಾನ‌ ಕಾರ್ಯದರ್ಶಿಗಳು ಏರ್ ಪೊರ್ಟ್ ಬಳಿ ನಿಂತು ಅವರನ್ನು ಸ್ವಾಗತ ಮಾಡಿದ್ದಾರೆ‌ ಎಂದು ಆರೋಪಿಸಿದರು.

ನೀವು ಅಧಿಕಾರದಲ್ಲಿರುವವರಿಗೆ ನಿಯಮದ ಪ್ರಕಾರ ಗೌರವ ಕೊಡಿ, ಪುಡಿ ಪಾರ್ಟಿಗಳ ಮುಖಂಡರು‌ ಅವರಿಗೆ ಯಾವುದೇ ಅಧಿಕಾರ ಇಲ್ಲ. ಅವರಿಗೆ ಅವರ ರಾಜ್ಯದಲ್ಲಿಯೇ ಮರ್ಯಾದೆ ಇಲ್ಲ. ಜೊಶೆಪ್ ಕರ್ನಾಟಕ ಲೆಜಿಸ್ಲೆಟಿವ್ ಅಂತ ಹಾಕಿದ್ದಾರೆ. ಅವರು ರಾಜ್ಯದ ಶಾಸಕರೆ, ಇವರು ಕರ್ನಾಟಕದ ಮಾನವನ್ನು ರಾಜಕೀಯ ಲಾಭಕ್ಕೆ ಹರಾಜು ಹಾಕುತ್ತಿದ್ದಾರೆ.

ಅಧಿಕಾರಿಗಳು ಯಾಕೆ ಅಲ್ಲಿ ಅಟೆಂಡ್ ಆಗಿದ್ದಾರೆ ಅವರಿಗೆ ನೊಟಿಸ್ ಕೊಡಬೇಕು ಎರಡು ದಿನದ ಸಂಬಳ ಕಡಿತ ಮಾಡಬೇಕು. ಸಿಎಸ್ ಅವರು ಏನು ಮಾಡುತ್ತಿದ್ದರು. ಅವರು ಅನುಮತಿ ನೀಡಿದ್ದಾರಾ ಎಂದು ಪ್ರಶ್ನಿಸಿದರು.
ಇಲ್ಲಿ ಬರಗಾಲ ಬಿದ್ದು ಸಾಕಷ್ಟು ಕೆಲಸಗಳಿವೆ ಸರ್ಕಾರದ ಕೆಲಸ ಬಿಟ್ಟು ಅಧಿಕಾರಿಗಳು ಅಲ್ಲಿಗೆ ಹೊಗಿ ತಮ್ಮ ಜವಾಬ್ದಾರಿ ಮರೆತಿದ್ದಾರೆ. ಸರ್ಕಾರ ರಾಜ್ಯದ ಮರ್ಯಾದೆ ಹರಾಜು ಹಾಕುತ್ತಿದೆ. ಇದು ಜನರ ತೆರಿಗೆ ಹಣ ನಿಮ್ಮ ಹಣವಲ್ಲ. ರಾಜ್ಯ ಸರ್ಕಾರ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

2 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

5 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

13 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

17 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

20 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

22 hours ago