ಸರ್ಕಾರದ ನೀತಿ ನಿಯಮಗಳನ್ನು ಮೀರಿ ಶುಲ್ಕ ವಸೂಲಿ:ಖಾಸಗಿ ಶಾಲೆಗಳ ಧನದಾಹಕ್ಕೆ ಕಡಿವಾಣ ಹಾಕಿ:ಕರವೇ ಕನ್ನಡಿಗರ ಬಣ ಅಧ್ಯಕ್ಷ ಚಂದ್ರಶೇಖರ್

ನಗರ ಮತ್ತು ತಾಲ್ಲೂಕಿನಾದ್ಯಂತ ಕೆಲವು ಖಾಸಗಿ ಶಾಲೆಗಳು ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿದ್ದಾರೆ. ಆದರೂ ಅಧಿಕಾರಿಗಳ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಾಲೆಯ ಶುಲ್ಕವನ್ನು ನಿಯಂತ್ರಿಸುವ ಅಧಿಕಾರ ಇಲ್ಲವಾದಲ್ಲಿ ಲಿಖಿತ ರೂಪದಲ್ಲಿ ನೀಡಿ ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಚಂದ್ರಶೇಖರ್.

ತಾಲ್ಲೂಕಿನ ಹಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿ ಎಗ್ಗಿಲ್ಲದಂತೆ ವಸೂಲಿ ಮಾಡುತ್ತಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಡಿಡಿಪಿಐ ಶ್ರೀಕಂಠಯ್ಯ ಹಾಗೂ ಬಿಇಒ ರಂಗಪ್ಪ ಅವರೊಂದಿಗೆ ಕರವೇ ಕನ್ನಡಿಗರ ಬಣದ ವತಿಯಿಂದ ನಗರದ ಸರ್ಕಾರಿ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಖಾಸಗಿ ಶಾಲೆಗಳಲ್ಲಿ ಸರಕಾರದ ಮಾನದಂಡಗಳು ಅನುಸರಿಸಲಾಗುತ್ತಿದ್ದೇಯೆ? ಕೆಲ ಖಾಸಗಿ‌ ಶಾಲೆಗಳಲ್ಲಿ ಕ್ರೀಡಾಂಗಣ ಇಲ್ಲ‌. ಮಕ್ಕಳನ್ನು ಕ್ರೀಡಾಂಗಣಕ್ಕೆ ಬೇರೆಡೆಗೆ ಕರೆದೊಯ್ಯುವ ಅವಶ್ಯಕತೆ ಇದೆ. ಕೆಲವು ಶಾಲೆಗಳು ಎಲ್ ಕೆಜಿಗೆ ಒಟ್ಟಿಗೆ ದುಡ್ಡುಕೊಟ್ಟರೆ ಎಸ್ಸೆಸ್ಸೆಲ್ಸಿ ವರೆಗೂ ಕಲಿಯಬಹುದು ಎಂದು ಹೇಳುತ್ತವೆ. ಆದರೆ ಮಧ್ಯದಲ್ಲಿ ಮಕ್ಕಳಿಗೆ ತೊಂದರೆಯಾದರೆ ಯಾರು ಹೊಣೆ. ಸದ್ಯ ಶಾಲೆಗಳಲ್ಲಿ ಸಮಸ್ಯೆಗಳ ಬಗ್ಗೆ ನಮಗೆ ತಿಳಿಯುವ ಮಾಹಿತಿ ಇಲಾಖೆಗೆ ಸಿಗುತ್ತಿಲ್ಲ ಯಾಕೆ. ಅಧಿಕಾರಿಗಳು
ಹೆಸರು ಉಳಿಯುವಂತ ಕೆಲಸ ಮಾಡಬೇಕು. ಆದಷ್ಟು ಬೇಗ ಈ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ‌ಕ್ರಮವಹಿಸಬೇಕು‌ ಎಂದರು.

ಡಿಡಿಪಿಐ ಶ್ರೀಕಂಠಯ್ಯ ಮಾತನಾಡಿ, ಸರ್ಕಾರದ ಮಾನದಂಡಗಳನ್ನು ‌ಪಾಲಿಸದ ಶಾಲೆಗಳ ಬಗ್ಗೆ ಕ್ರಮವಹಿಸಲಾಗುತ್ತದೆ. ಮಾನದಂಡವಿಲ್ಲದೆ
ಹಿಂದೆ ಅರಂಭವಾದ ಶಾಲೆಗಳ ಬಗ್ಗೆ ತಕ್ಷಣ ಮುಚ್ಚಲು ಸಾಧ್ಯವಿಲ್ಲ. ಅದಕ್ಕಾಗಿ ಆ ಶಾಲೆಗಳಿಗೆ ಸಭೆ ಕರೆದು ಸೂಚನೆ ನೀಡಲಾಗುತ್ತದೆ.

4 ತಾಲೂಕುಗಳ ಬಿಇಒಗಳ ಸಭೆ ನಡೆಸಲಾಗುತ್ತದೆ. ಇದರ ಬಗ್ಗೆ ಕ್ರಮವಹಿಸಲು ಸೂಚಿಸಲಾಗುತ್ತದೆ ಎಂದರು.

ಬಿಇಒ ರಂಗಪ್ಪ ‌ಮಾತನಾಡಿ,
ಶಾಲೆಗಳಲ್ಲಿ ಇಷ್ಟೆ ಶುಲ್ಕ ಪಡೆಯಬೇಕು ಎಂದು ಸರ್ಕಾರದ ಯಾವುದೇ ಮಾನದಂಡವಿಲ್ಲ. ‌ಶಾಲೆಗಳು ಹೆಚ್ಚಿನ ಶುಲ್ಕ ಪಡೆಯುವ ಮಾಹಿತಿ ಬಂದರೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತದೆ.
ನಿಯಮಾನುಸಾರ ‌ಇಲ್ಲದ ಶಾಲೆಗಳ ಸಭೆ ಕರೆದು ಅವರಿಗೆ ನೋಟಿಸ್ ನೀಡಿ ಕ್ರಮವಹಿಸಲಾಗುತ್ತದೆ.
ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುತ್ತದೆ ಎಂದರು.

ಈ ವೇಳೆ ಕನ್ನಡಿಗರ ಕರವೇ ರಾಜ್ಯ ಕಾರ್ಯದರ್ಶಿ ಆರ್ ರಮೇಶ್, ರಾಜ್ಯ ಖಜಾಂಚಿ ಚೇತನ್ ಗೌಡ, ತಾಲೂಕು ಯುವ ಘಟಕ ಅಧ್ಯಕ್ಷ ರಂಜಿತ್ ಗೌಡ, ಕಾರ್ಮಿಕರ ಘಟಕದ ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago