ಸರ್ಕಾರದ ನೀತಿ ನಿಯಮಗಳನ್ನು ಮೀರಿ ಶುಲ್ಕ ವಸೂಲಿ:ಖಾಸಗಿ ಶಾಲೆಗಳ ಧನದಾಹಕ್ಕೆ ಕಡಿವಾಣ ಹಾಕಿ:ಕರವೇ ಕನ್ನಡಿಗರ ಬಣ ಅಧ್ಯಕ್ಷ ಚಂದ್ರಶೇಖರ್

ನಗರ ಮತ್ತು ತಾಲ್ಲೂಕಿನಾದ್ಯಂತ ಕೆಲವು ಖಾಸಗಿ ಶಾಲೆಗಳು ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿದ್ದಾರೆ. ಆದರೂ ಅಧಿಕಾರಿಗಳ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಾಲೆಯ ಶುಲ್ಕವನ್ನು ನಿಯಂತ್ರಿಸುವ ಅಧಿಕಾರ ಇಲ್ಲವಾದಲ್ಲಿ ಲಿಖಿತ ರೂಪದಲ್ಲಿ ನೀಡಿ ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಚಂದ್ರಶೇಖರ್.

ತಾಲ್ಲೂಕಿನ ಹಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿ ಎಗ್ಗಿಲ್ಲದಂತೆ ವಸೂಲಿ ಮಾಡುತ್ತಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಡಿಡಿಪಿಐ ಶ್ರೀಕಂಠಯ್ಯ ಹಾಗೂ ಬಿಇಒ ರಂಗಪ್ಪ ಅವರೊಂದಿಗೆ ಕರವೇ ಕನ್ನಡಿಗರ ಬಣದ ವತಿಯಿಂದ ನಗರದ ಸರ್ಕಾರಿ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಖಾಸಗಿ ಶಾಲೆಗಳಲ್ಲಿ ಸರಕಾರದ ಮಾನದಂಡಗಳು ಅನುಸರಿಸಲಾಗುತ್ತಿದ್ದೇಯೆ? ಕೆಲ ಖಾಸಗಿ‌ ಶಾಲೆಗಳಲ್ಲಿ ಕ್ರೀಡಾಂಗಣ ಇಲ್ಲ‌. ಮಕ್ಕಳನ್ನು ಕ್ರೀಡಾಂಗಣಕ್ಕೆ ಬೇರೆಡೆಗೆ ಕರೆದೊಯ್ಯುವ ಅವಶ್ಯಕತೆ ಇದೆ. ಕೆಲವು ಶಾಲೆಗಳು ಎಲ್ ಕೆಜಿಗೆ ಒಟ್ಟಿಗೆ ದುಡ್ಡುಕೊಟ್ಟರೆ ಎಸ್ಸೆಸ್ಸೆಲ್ಸಿ ವರೆಗೂ ಕಲಿಯಬಹುದು ಎಂದು ಹೇಳುತ್ತವೆ. ಆದರೆ ಮಧ್ಯದಲ್ಲಿ ಮಕ್ಕಳಿಗೆ ತೊಂದರೆಯಾದರೆ ಯಾರು ಹೊಣೆ. ಸದ್ಯ ಶಾಲೆಗಳಲ್ಲಿ ಸಮಸ್ಯೆಗಳ ಬಗ್ಗೆ ನಮಗೆ ತಿಳಿಯುವ ಮಾಹಿತಿ ಇಲಾಖೆಗೆ ಸಿಗುತ್ತಿಲ್ಲ ಯಾಕೆ. ಅಧಿಕಾರಿಗಳು
ಹೆಸರು ಉಳಿಯುವಂತ ಕೆಲಸ ಮಾಡಬೇಕು. ಆದಷ್ಟು ಬೇಗ ಈ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ‌ಕ್ರಮವಹಿಸಬೇಕು‌ ಎಂದರು.

ಡಿಡಿಪಿಐ ಶ್ರೀಕಂಠಯ್ಯ ಮಾತನಾಡಿ, ಸರ್ಕಾರದ ಮಾನದಂಡಗಳನ್ನು ‌ಪಾಲಿಸದ ಶಾಲೆಗಳ ಬಗ್ಗೆ ಕ್ರಮವಹಿಸಲಾಗುತ್ತದೆ. ಮಾನದಂಡವಿಲ್ಲದೆ
ಹಿಂದೆ ಅರಂಭವಾದ ಶಾಲೆಗಳ ಬಗ್ಗೆ ತಕ್ಷಣ ಮುಚ್ಚಲು ಸಾಧ್ಯವಿಲ್ಲ. ಅದಕ್ಕಾಗಿ ಆ ಶಾಲೆಗಳಿಗೆ ಸಭೆ ಕರೆದು ಸೂಚನೆ ನೀಡಲಾಗುತ್ತದೆ.

4 ತಾಲೂಕುಗಳ ಬಿಇಒಗಳ ಸಭೆ ನಡೆಸಲಾಗುತ್ತದೆ. ಇದರ ಬಗ್ಗೆ ಕ್ರಮವಹಿಸಲು ಸೂಚಿಸಲಾಗುತ್ತದೆ ಎಂದರು.

ಬಿಇಒ ರಂಗಪ್ಪ ‌ಮಾತನಾಡಿ,
ಶಾಲೆಗಳಲ್ಲಿ ಇಷ್ಟೆ ಶುಲ್ಕ ಪಡೆಯಬೇಕು ಎಂದು ಸರ್ಕಾರದ ಯಾವುದೇ ಮಾನದಂಡವಿಲ್ಲ. ‌ಶಾಲೆಗಳು ಹೆಚ್ಚಿನ ಶುಲ್ಕ ಪಡೆಯುವ ಮಾಹಿತಿ ಬಂದರೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತದೆ.
ನಿಯಮಾನುಸಾರ ‌ಇಲ್ಲದ ಶಾಲೆಗಳ ಸಭೆ ಕರೆದು ಅವರಿಗೆ ನೋಟಿಸ್ ನೀಡಿ ಕ್ರಮವಹಿಸಲಾಗುತ್ತದೆ.
ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುತ್ತದೆ ಎಂದರು.

ಈ ವೇಳೆ ಕನ್ನಡಿಗರ ಕರವೇ ರಾಜ್ಯ ಕಾರ್ಯದರ್ಶಿ ಆರ್ ರಮೇಶ್, ರಾಜ್ಯ ಖಜಾಂಚಿ ಚೇತನ್ ಗೌಡ, ತಾಲೂಕು ಯುವ ಘಟಕ ಅಧ್ಯಕ್ಷ ರಂಜಿತ್ ಗೌಡ, ಕಾರ್ಮಿಕರ ಘಟಕದ ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

24 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

2 days ago