ಸರ್ಕಾರದ ನೀತಿ ನಿಯಮಗಳನ್ನು ಮೀರಿ ಶುಲ್ಕ ವಸೂಲಿ:ಖಾಸಗಿ ಶಾಲೆಗಳ ಧನದಾಹಕ್ಕೆ ಕಡಿವಾಣ ಹಾಕಿ:ಕರವೇ ಕನ್ನಡಿಗರ ಬಣ ಅಧ್ಯಕ್ಷ ಚಂದ್ರಶೇಖರ್

ನಗರ ಮತ್ತು ತಾಲ್ಲೂಕಿನಾದ್ಯಂತ ಕೆಲವು ಖಾಸಗಿ ಶಾಲೆಗಳು ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿದ್ದಾರೆ. ಆದರೂ ಅಧಿಕಾರಿಗಳ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಾಲೆಯ ಶುಲ್ಕವನ್ನು ನಿಯಂತ್ರಿಸುವ ಅಧಿಕಾರ ಇಲ್ಲವಾದಲ್ಲಿ ಲಿಖಿತ ರೂಪದಲ್ಲಿ ನೀಡಿ ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಚಂದ್ರಶೇಖರ್.

ತಾಲ್ಲೂಕಿನ ಹಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿ ಎಗ್ಗಿಲ್ಲದಂತೆ ವಸೂಲಿ ಮಾಡುತ್ತಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಡಿಡಿಪಿಐ ಶ್ರೀಕಂಠಯ್ಯ ಹಾಗೂ ಬಿಇಒ ರಂಗಪ್ಪ ಅವರೊಂದಿಗೆ ಕರವೇ ಕನ್ನಡಿಗರ ಬಣದ ವತಿಯಿಂದ ನಗರದ ಸರ್ಕಾರಿ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಖಾಸಗಿ ಶಾಲೆಗಳಲ್ಲಿ ಸರಕಾರದ ಮಾನದಂಡಗಳು ಅನುಸರಿಸಲಾಗುತ್ತಿದ್ದೇಯೆ? ಕೆಲ ಖಾಸಗಿ‌ ಶಾಲೆಗಳಲ್ಲಿ ಕ್ರೀಡಾಂಗಣ ಇಲ್ಲ‌. ಮಕ್ಕಳನ್ನು ಕ್ರೀಡಾಂಗಣಕ್ಕೆ ಬೇರೆಡೆಗೆ ಕರೆದೊಯ್ಯುವ ಅವಶ್ಯಕತೆ ಇದೆ. ಕೆಲವು ಶಾಲೆಗಳು ಎಲ್ ಕೆಜಿಗೆ ಒಟ್ಟಿಗೆ ದುಡ್ಡುಕೊಟ್ಟರೆ ಎಸ್ಸೆಸ್ಸೆಲ್ಸಿ ವರೆಗೂ ಕಲಿಯಬಹುದು ಎಂದು ಹೇಳುತ್ತವೆ. ಆದರೆ ಮಧ್ಯದಲ್ಲಿ ಮಕ್ಕಳಿಗೆ ತೊಂದರೆಯಾದರೆ ಯಾರು ಹೊಣೆ. ಸದ್ಯ ಶಾಲೆಗಳಲ್ಲಿ ಸಮಸ್ಯೆಗಳ ಬಗ್ಗೆ ನಮಗೆ ತಿಳಿಯುವ ಮಾಹಿತಿ ಇಲಾಖೆಗೆ ಸಿಗುತ್ತಿಲ್ಲ ಯಾಕೆ. ಅಧಿಕಾರಿಗಳು
ಹೆಸರು ಉಳಿಯುವಂತ ಕೆಲಸ ಮಾಡಬೇಕು. ಆದಷ್ಟು ಬೇಗ ಈ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ‌ಕ್ರಮವಹಿಸಬೇಕು‌ ಎಂದರು.

ಡಿಡಿಪಿಐ ಶ್ರೀಕಂಠಯ್ಯ ಮಾತನಾಡಿ, ಸರ್ಕಾರದ ಮಾನದಂಡಗಳನ್ನು ‌ಪಾಲಿಸದ ಶಾಲೆಗಳ ಬಗ್ಗೆ ಕ್ರಮವಹಿಸಲಾಗುತ್ತದೆ. ಮಾನದಂಡವಿಲ್ಲದೆ
ಹಿಂದೆ ಅರಂಭವಾದ ಶಾಲೆಗಳ ಬಗ್ಗೆ ತಕ್ಷಣ ಮುಚ್ಚಲು ಸಾಧ್ಯವಿಲ್ಲ. ಅದಕ್ಕಾಗಿ ಆ ಶಾಲೆಗಳಿಗೆ ಸಭೆ ಕರೆದು ಸೂಚನೆ ನೀಡಲಾಗುತ್ತದೆ.

4 ತಾಲೂಕುಗಳ ಬಿಇಒಗಳ ಸಭೆ ನಡೆಸಲಾಗುತ್ತದೆ. ಇದರ ಬಗ್ಗೆ ಕ್ರಮವಹಿಸಲು ಸೂಚಿಸಲಾಗುತ್ತದೆ ಎಂದರು.

ಬಿಇಒ ರಂಗಪ್ಪ ‌ಮಾತನಾಡಿ,
ಶಾಲೆಗಳಲ್ಲಿ ಇಷ್ಟೆ ಶುಲ್ಕ ಪಡೆಯಬೇಕು ಎಂದು ಸರ್ಕಾರದ ಯಾವುದೇ ಮಾನದಂಡವಿಲ್ಲ. ‌ಶಾಲೆಗಳು ಹೆಚ್ಚಿನ ಶುಲ್ಕ ಪಡೆಯುವ ಮಾಹಿತಿ ಬಂದರೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತದೆ.
ನಿಯಮಾನುಸಾರ ‌ಇಲ್ಲದ ಶಾಲೆಗಳ ಸಭೆ ಕರೆದು ಅವರಿಗೆ ನೋಟಿಸ್ ನೀಡಿ ಕ್ರಮವಹಿಸಲಾಗುತ್ತದೆ.
ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮವಹಿಸಲಾಗುತ್ತದೆ ಎಂದರು.

ಈ ವೇಳೆ ಕನ್ನಡಿಗರ ಕರವೇ ರಾಜ್ಯ ಕಾರ್ಯದರ್ಶಿ ಆರ್ ರಮೇಶ್, ರಾಜ್ಯ ಖಜಾಂಚಿ ಚೇತನ್ ಗೌಡ, ತಾಲೂಕು ಯುವ ಘಟಕ ಅಧ್ಯಕ್ಷ ರಂಜಿತ್ ಗೌಡ, ಕಾರ್ಮಿಕರ ಘಟಕದ ಮುಖಂಡರು ಹಾಜರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

13 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

14 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago