ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಹಾಗೂ ಜನರ ಕುಂದು ಕೊರತೆ ಆಲಿಸಲು ಪ್ರತಿ ಭಾನುವಾರ ಜನಸ್ಪಂದನಾ ಸಭೆ- ಮಂಜುನಾಥ.ಎಂ ಅದ್ದೆ

ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮತದಾರರಿಗೆ ತಲುಪಿಸುವ ಹಾಗೂ ಜನರ ಕುಂದು ಕೊರತೆಗಳನ್ನು ಕೇಳಿ ಪರಿಹರಿಸಲು ಪ್ರತಿ ಭಾನುವಾರ ಒಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸ್ಪಂದನ ಸಭೆ ನಡೆಸಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರರು ಮುಖಂಡ ಮಂಜುನಾಥ ಎಂ.ಅದ್ದೆ ಹೇಳಿದರು.

ಅವರು ತಾಲ್ಲೂಕಿಗೆ ಸಮೀಪದ ಯಲಹಂಕ ವಿಧಾನ ಸಭಾ ಕ್ಷೇತ್ರದ ಹನಿಯೂರು ಗ್ರಾಮದಲ್ಲಿ ಭಾನುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಈಗಾಗಲೇ ಹೇಳಿರುವಂತೆ ನಮ್ಮ ಪಕ್ಷ ದೇಶದಲ್ಲಿ ಪ್ರೀತಿಯ ಅಂಗಡಿ ತೆರೆದಿದೆ. ನಮಗೆ ಮತಹಾಕುವವರು ಮಾತ್ರ ನಮ್ಮವರಷ್ಟೇ ಅಲ್ಲ, ಇಡೀ ದೇಶದ ಪ್ರತಿ ಪ್ರಜೆಯು ಶಾಂತಿ ನೆಮ್ಮದಿಯಿಂದ ಬದುಕುವಂತಾಗಬೇಕು. ಇದೇ ರೀತಿಯ ವಾತಾವರಣ ನಮ್ಮ ಕ್ಷೇತ್ರದಲ್ಲೂ ಸಹ ಇರುವಂತೆ ನೋಡಿಕೊಳ್ಳುವ ಜವಾಬ್ಧಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದರು.

ಸಣ್ಣ ಪುಟ್ಟ ಭೂ ವಿವಾದಗಳು, ಭೂ ದಾಖಲೆಗಳ ತಿದ್ದುಪಡಿಗಳನ್ನು ಗ್ರಾಮ ಹಂತದಲ್ಲೇ ಸರಿಪಡುವ ನಿಟ್ಟಿನಲ್ಲಿ ಕಂದಾಯ ಅದಾಲತ್ ನಡೆಸುವ ಕುರಿತಂತೆ ಈಗಾಗಲೇ ಕಂದಾಯ ಸಚಿವರಾಗಿರುವ ಕೃಷ್ಣಬೈರೇಗೌಡರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.

ಯಲಹಂಕ ಕ್ಷೇತ್ರದ ಕಾಂಗ್ರೆಸ್ ಮುಖಂಡ ಕೇಶವ ರಾಜಣ್ಣ ಮಾತನಾಡಿ, ನಾನು ಸೋತ್ತಿದ್ದರು ಜನರೊಂದಿಗೆ ಇದ್ದು ಪಕ್ಷ ಸಂಘಟನೆ ಹಾಗೂ ಜನರ ಕೆಲಸ ಮಾಡುತ್ತೇನೆ. ಮತದಾರರನ್ನು ಬ್ಲಾಕ್ ಮೇಲ್ ಮಾಡಿ ರಾಜಕಾರಣ ಮಾಡುವ ಪ್ರವೃತ್ತಿ ನಮ್ಮದಲ್ಲ. ಹಾಲು ಮಾರಾಟ ಮಾಡಿ ಶ್ರಮದ ದುಡಿಮೆಯಿಂದ ಶ್ರೀಮಂತನಾಗಿದ್ದೇನೆ ಹೊರತು ಬೇರೆಯವರ ಆಸ್ತಿ ಕಬಳಿಸಿ ದೊಡ್ಡವನಾಗಿಲ್ಲ. ಯಲಹಂಕ ಕ್ಷೇತ್ರದಲ್ಲಿ ಬಸವಲಿಂಗಪ್ಪ, ಪ್ರಸನ್ನಕುಮಾರ್ ನಂತರ ಯಾರು ಸಹ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿಲ್ಲ. ಮತ್ತೆ ಇಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಳೇಯ ವೈಭವನದ ದಿನಗಳು ಮರುಕಳಿಸಲಿವೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜಗೌಡ ಮಾತನಾಡಿ, ಯಲಹಂಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೇಶವರಾಜಣ್ಣ ಅವರು ಸೋತಿದ್ದರು ಪಕ್ಷ ಸಂಘಟನೆ, ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ನಿರಂತರವಾಗಿ ಮುಂದುವರೆಸುವ ಸಲುವಾಗಿಯೇ ಜನಸ್ಪಂದನ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ಭಾಗದ ಜನರ ವೈಯಕ್ತಿಕ ಕೆಲಸಗಳು ಆಗಬೇಕಿದ್ದರೆ ಮೊದಲು ಬಿಜೆಪಿ ಸೇರ್ಪಡೆಯಾಗಬೇಕಿತ್ತು. ಇಲ್ಲವಾದರೆ ಅದು ಕಾನೂನು ಬದ್ದವಾಗಿದ್ದರೂ ಕೆಲಸ ಆಗದಂತೆ ತಡೆದು ಕಿರುಕುಳ ನೀಡಲಾಗುತಿತ್ತು ಎಂದು ದೂರಿದರು.

ಮನೆಯ ಯಜಮಾನಿ ಖಾತೆಗೆ 2000 ರೂ. ಬರುವ ಗೃಹ ಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿ ಮಾಡಿಕೊಳ್ಳಲು ಮೊಬೈಲ್ ಆಪ್ ಬರಲಿದೆ. ಪಕ್ಷದ ಪ್ರತಿಯೊಬ್ಬರು ಮನೆಗಳಿಗೆ ಭೇಟಿ ನೀಡಿ ಮೊಬೈಲ್ಗಳಲ್ಲೇ ಹೆಸರು ನೋಂದಣಿ ಮಾಡುವ ಕೆಲಸವನ್ನು ಮಾಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ್, ಚಂದ್ರಶೇಖರ್, ಮಣಿ, ಚಲುವಮೂರ್ತಿ, ಬಸವರಾಜು, ಲಿಂಗರಾಜು, ಕಾಕೋಳು ಬಾಬು, ಚಂದ್ರು ಕಾರ್ಲಾಪುರ, ಭ್ಯಾತ ಗೋಪಾಲ್, ಲಕ್ಷ್ಮೀಕಾಂತ್, ಎಸ್ಸಿ ಘಟಕದ ವೆಂಕಟೇಶ್, ಅಂಜನಮುರ್ತಿ ಇದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

2 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

3 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

16 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

16 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

16 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

17 hours ago