ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ತ್ವರಿತ ಗತಿಯಲ್ಲಿ ಕಾರ್ಯನಿರ್ವಹಿಸಿ ಯೋಜನೆಗಳು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನ ಸಭೆ ಹಾಗೂ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಹಾಗೂ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳನ್ನು ಶೀಘ್ರ ಪ್ರಾರಂಭ ಮಾಡಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಹೇಳಿದರು.
ಅನ್ನ ಭಾಗ್ಯ ಯೋಜನೆಯಡಿ 2,31,009 ಫಲಾನುಭವಿಗಳಿದ್ದು ಅದರಲ್ಲಿ 1,70,329 ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ 9,84,50,910/- ಕೋಟಿ ರೂಗಳು ಜುಲೈ ಮಾಹೆಯಲ್ಲಿ ಜಮೆಯಾಗಿದೆ. ಉಳಿದಂತೆ ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆಯಾಗಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಅಡಿ 4,91,028 ಕುಟುಂಬಗಳು 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿದ್ದಾರೆ ಅವರಲ್ಲಿ 3,41,262 ಕುಟುಂಬಗಳು ಗೃಹಜ್ಯೋತಿಗೆ ನೋಂದಾಯಿಸಿಕೊಂಡಿದ್ದಾರೆ. ಉಳಿದಂತೆ ಇನ್ನೂ ನೋಂದಾಯಿಸಿಕೊಳ್ಳದ ಕುಟುಂಬಗಳಿಗೆ ಮಾಹಿತಿ ನೀಡಿ ಶೀಘ್ರ ನೋಂದಾಯಿಸುವಂತೆ ಕ್ರಮ ಕೈಗೊಳ್ಳಿ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಜುಲೈ 20 ರಿಂದ ಜುಲೈ 24ರ ವರೆಗೆ 46903 ಫಲಾನುಭವಿಗಳು ನೋಂದಣಿ ಆಗಿರುತ್ತಾರೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ,ಮಾಹಿತಿ ನೀಡಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ ಎಂದರಲ್ಲದೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಹೇಳಿದರು.
ಪೋಡಿ, 11-ಇ ಸ್ಕೆಚ್, ಹದ್ದುಬಸ್ತು, ಮೋಜಣಿದಾರರ ಅಳತೆ ಪ್ರಕರಣಗಳ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸಿ ಸರ್ಕಾರಿ ಭೂಮಾಪಕರು ಹಾಗೂ ಖಾಸಗಿ ಭೂಮಾಪಕರ ಒಳಗೊಂಡಂತೆ ಶೀಘ್ರ ಕ್ರಮವಹಿಸಿ ನಿರ್ದಿಷ್ಟ ಕಾಲಮಿತಿಯೊಳಗೆ ಸರ್ವೆ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದರು.
ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತಂತೆ ಮಾಹಿತಿ ಪಡೆದ ಅವರು ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ಒಂದು ಘನತ್ಯಾಜ್ಯ ವಿಲೇವಾರಿ ಘಟಕವಿರಬೇಕು ಪ್ರತಿಯೊಂದು ಗ್ರಾಮದಲ್ಲೂ ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳು ಹಾಗೂ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರಲ್ಲದೆ ಈ ಇಲಾಖೆ ಅಡಿ ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದು ಹೇಳಿದರು.
ಜಿಲ್ಲೆಯ ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ ಸೂಕ್ತ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ಕೊಡಬೇಕು. ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಶಾಲೆ,ಕಾಲೇಜು ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ಹಾಗೂ ಹೊಸದಾಗಿ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ, ತೋಟಗಾರಿಕೆ ಇಲಾಖೆಯ ಬೆಳೆಗಳಿಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದರಲ್ಲದೆ ರೈತರಿಗೆ ಸೂಕ್ತ ಮಾರ್ಗದರ್ಶನ, ಸಲಹೆ ನೀಡಿ ಎಂದರು.
ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದರು.ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿ ಬಾಕಿ ಇರುವ ರಸ್ತೆ , ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು. ನರೇಗಾ ಯೋಜನೆಯಡಿ ಇಲಾಖೆಗಳಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ. ಶೇಕಡಾವಾರು ಪ್ರಗತಿ ಕಡಿಮೆ ಸಾಧಿಸಿರುವ ಇಲಾಖೆಗಳಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿ ವರದಿ ನೀಡಿ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ ಎಂ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…