ಸರ್ಕಾರದ ಯೋಜನೆಗಳು ತ್ವರಿತವಾಗಿ ಜನರಿಗೆ ತಲುಪಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ ಪ್ರತಿಯೊಬ್ಬ ಫಲಾನುಭವಿಗೂ ತಲುಪುವಂತೆ ತ್ವರಿತ ಗತಿಯಲ್ಲಿ ಕಾರ್ಯನಿರ್ವಹಿಸಿ ಯೋಜನೆಗಳು ಯಶಸ್ವಿಯಾಗಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನ ಸಭೆ ಹಾಗೂ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಹಾಗೂ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಅನುದಾನ ಬಿಡುಗಡೆಯಾಗಿರುವ ಕಾಮಗಾರಿಗಳನ್ನು ಶೀಘ್ರ ಪ್ರಾರಂಭ ಮಾಡಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಎಂದು ಹೇಳಿದರು.

ಅನ್ನ ಭಾಗ್ಯ ಯೋಜನೆಯಡಿ 2,31,009 ಫಲಾನುಭವಿಗಳಿದ್ದು ಅದರಲ್ಲಿ 1,70,329 ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ನೇರವಾಗಿ 9,84,50,910/- ಕೋಟಿ ರೂಗಳು ಜುಲೈ ಮಾಹೆಯಲ್ಲಿ ಜಮೆಯಾಗಿದೆ. ಉಳಿದಂತೆ ವಿವಿಧ ಕಾರಣಗಳಿಂದ ಹಣ ಜಮೆ ಆಗಿರದ ಫಲಾನುಭವಿಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯಲ್ಲಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ. ಸಮಸ್ಯೆ ಬಗೆಹರಿಸಿಕೊಂಡು ಮುಂದಿನ ಮಾಹೆಯೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿ. ಬಿ. ಟಿ ಮೂಲಕ ಜಮೆಯಾಗಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಅಡಿ 4,91,028 ಕುಟುಂಬಗಳು 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವವರಿದ್ದಾರೆ ಅವರಲ್ಲಿ 3,41,262 ಕುಟುಂಬಗಳು ಗೃಹಜ್ಯೋತಿಗೆ ನೋಂದಾಯಿಸಿಕೊಂಡಿದ್ದಾರೆ. ಉಳಿದಂತೆ ಇನ್ನೂ ನೋಂದಾಯಿಸಿಕೊಳ್ಳದ ಕುಟುಂಬಗಳಿಗೆ ಮಾಹಿತಿ ನೀಡಿ ಶೀಘ್ರ ನೋಂದಾಯಿಸುವಂತೆ ಕ್ರಮ ಕೈಗೊಳ್ಳಿ ಎಂದರು.

ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ಜುಲೈ 20 ರಿಂದ ಜುಲೈ 24ರ ವರೆಗೆ 46903 ಫಲಾನುಭವಿಗಳು ನೋಂದಣಿ ಆಗಿರುತ್ತಾರೆ. ಬಾಕಿ ಇರುವ ಫಲಾನುಭವಿಗಳಿಗೆ ಗ್ರಾಮಮಟ್ಟದಲ್ಲಿ ಪ್ರಚಾರ ಮಾಡಿ, ಜಾಗೃತಿ ಮೂಡಿಸಿ,ಮಾಹಿತಿ ನೀಡಿ ನೋಂದಾಯಿಸಿಕೊಳ್ಳಲು ಕ್ರಮವಹಿಸಿ ಎಂದರಲ್ಲದೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸುವ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ ಎಂದು ಹೇಳಿದರು.

ಪೋಡಿ, 11-ಇ ಸ್ಕೆಚ್, ಹದ್ದುಬಸ್ತು, ಮೋಜಣಿದಾರರ ಅಳತೆ ಪ್ರಕರಣಗಳ ವಿಲೇವಾರಿ ಪ್ರಗತಿ ಪರಿಶೀಲನೆ ನಡೆಸಿ ಸರ್ಕಾರಿ ಭೂಮಾಪಕರು ಹಾಗೂ ಖಾಸಗಿ ಭೂಮಾಪಕರ ಒಳಗೊಂಡಂತೆ ಶೀಘ್ರ ಕ್ರಮವಹಿಸಿ ನಿರ್ದಿಷ್ಟ ಕಾಲಮಿತಿಯೊಳಗೆ ಸರ್ವೆ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದರು.

ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿ ಕುರಿತಂತೆ ಮಾಹಿತಿ ಪಡೆದ ಅವರು ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ಒಂದು ಘನತ್ಯಾಜ್ಯ ವಿಲೇವಾರಿ ಘಟಕವಿರಬೇಕು ಪ್ರತಿಯೊಂದು ಗ್ರಾಮದಲ್ಲೂ ಸೂಕ್ತ ರೀತಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳು ಹಾಗೂ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರಲ್ಲದೆ ಈ ಇಲಾಖೆ ಅಡಿ ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ ಸೂಕ್ತ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ರೋಗಿಗಳಿಗೆ ಸೂಕ್ತ ಚಿಕಿತ್ಸೆಯನ್ನು ಕೊಡಬೇಕು. ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲೆ,ಕಾಲೇಜು ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಮರು ನಿರ್ಮಾಣ ಮಾಡಲು ಹಾಗೂ ಹೊಸದಾಗಿ ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ, ತೋಟಗಾರಿಕೆ ಇಲಾಖೆಯ ಬೆಳೆಗಳಿಗೆ ಸಂಬಂಧಿಸಿದಂತೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದರಲ್ಲದೆ ರೈತರಿಗೆ ಸೂಕ್ತ ಮಾರ್ಗದರ್ಶನ, ಸಲಹೆ ನೀಡಿ ಎಂದರು.

ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಎಂದರು.ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿ ಬಾಕಿ ಇರುವ ರಸ್ತೆ , ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದರು. ನರೇಗಾ ಯೋಜನೆಯಡಿ ಇಲಾಖೆಗಳಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ. ಶೇಕಡಾವಾರು ಪ್ರಗತಿ ಕಡಿಮೆ ಸಾಧಿಸಿರುವ ಇಲಾಖೆಗಳಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿ ವರದಿ ನೀಡಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ ಎಂ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

3 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

12 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

18 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

20 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago