ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು. ಸರ್ಕಾರಿ ಯೋಜನೆಗಳು ತಲುಪಲು ಕೆಲವು ಸಮಸ್ಯೆಗಳು ಸಾರ್ವಜನಿಕರಿಗೆ ಎದುರಾಗಿದ್ದು ಅವುಗಳನ್ನು ಮುಂದಿನ 15 ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಅಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯಾವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ತೂಬಗೆರೆ ಹೋಬಳಿಯ ಮೆಳೇಕೋಟೆ ಗ್ರಾಮದಲ್ಲಿ ಭಾನುವಾರ ಅಯೋಜಿಸಿದ್ದ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ನೀಡಿದ್ದ ಎಲ್ಲಾ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಮಹಾತ್ಮ ಗಾಂಧಿಯವರ ಕನಸು ರಾಮರಾಜ್ಯ ವಾಗಬೇಕೆಂಬುದನ್ನು ನಮ್ಮ ಸರ್ಕಾರ ಈಡೇರಿಸಿದೆ. ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಬೇಸಿಗೆಯನ್ನು ಎದುರಿಸ ಬೇಕಾಗಿದ್ದು ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಯೊಬ್ಬ ನಾಗರಿಕರಿಕನಿಗೂ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ನಾವು ಕೆಲಸವನ್ನು ಮಾಡಬೇಕು ಎಂದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಮೆಳೇಕೋಟೆ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ, ಉಪಾಧ್ಯಕ್ಷೆ ಭಾಗ್ಯಮ್ಮ, ಹಾಡೋನಹಳ್ಳಿ ಗ್ರಾ.ಪಂ. ಎಚ್.ಎ.ನಾಗರಾಜ್, ತೂಬಗೆರೆ ಗ್ರಾ.ಪಂ ಅಧ್ಯಕ್ಷೆ ನಂಜಮ್ಮ, ಎಸ್.ಎಸ್.ಘಾಟಿ ಗ್ರಾ.ಪಂ ಅಧ್ಯಕ್ಷೆ ಉಮಾಬಾಯಿ, ಹೆಗ್ಗಡಿಹಳ್ಳಿ ಗ್ರಾ.ಪಂ ಅಧ್ಯಕ್ಷೆ ಆಂಜಿನಮ್ಮ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಮೆಳೇಕೋಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಚಿದಾನಂದ್, ಮುಖಂಡರಾದ ಜಗನ್ನಾಥ, ಶಾಂತಕುಮಾರ್, ಎಸ್.ಆರ್.ಮುನಿರಾಜು, ಚಿನ್ನಪ್ಪ, ಚನ್ನಹಳ್ಳಿ ರಾಜಣ್ಣ, ಅರವಿಂದ್, ಮುನಿಕೃಷ್ಣಪ್ಪ, ಕಾಂತರಾಜು, ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಜಿಲ್ಲಾ ಅಧ್ಯಕ್ಷ ಆರ್.ವಿ. ಮಹೇಶ್, ರಾಮಕೃಷ್ಣ, ಮಂಜುನಾಥ್, ಆಂಜಿನಪ್ಪ ಇತರರು ಉಪಸ್ಥಿತರಿದ್ದರು.
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…