ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು. ಸರ್ಕಾರಿ ಯೋಜನೆಗಳು ತಲುಪಲು ಕೆಲವು ಸಮಸ್ಯೆಗಳು ಸಾರ್ವಜನಿಕರಿಗೆ ಎದುರಾಗಿದ್ದು ಅವುಗಳನ್ನು ಮುಂದಿನ 15 ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಅಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯಾವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ತೂಬಗೆರೆ ಹೋಬಳಿಯ ಮೆಳೇಕೋಟೆ ಗ್ರಾಮದಲ್ಲಿ ಭಾನುವಾರ ಅಯೋಜಿಸಿದ್ದ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ನೀಡಿದ್ದ ಎಲ್ಲಾ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಮಹಾತ್ಮ ಗಾಂಧಿಯವರ ಕನಸು ರಾಮರಾಜ್ಯ ವಾಗಬೇಕೆಂಬುದನ್ನು ನಮ್ಮ ಸರ್ಕಾರ ಈಡೇರಿಸಿದೆ. ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಬೇಸಿಗೆಯನ್ನು ಎದುರಿಸ ಬೇಕಾಗಿದ್ದು ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಯೊಬ್ಬ ನಾಗರಿಕರಿಕನಿಗೂ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ನಾವು ಕೆಲಸವನ್ನು ಮಾಡಬೇಕು ಎಂದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಮೆಳೇಕೋಟೆ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ, ಉಪಾಧ್ಯಕ್ಷೆ ಭಾಗ್ಯಮ್ಮ, ಹಾಡೋನಹಳ್ಳಿ ಗ್ರಾ.ಪಂ. ಎಚ್.ಎ.ನಾಗರಾಜ್, ತೂಬಗೆರೆ ಗ್ರಾ.ಪಂ ಅಧ್ಯಕ್ಷೆ ನಂಜಮ್ಮ, ಎಸ್.ಎಸ್.ಘಾಟಿ ಗ್ರಾ.ಪಂ ಅಧ್ಯಕ್ಷೆ ಉಮಾಬಾಯಿ, ಹೆಗ್ಗಡಿಹಳ್ಳಿ ಗ್ರಾ.ಪಂ ಅಧ್ಯಕ್ಷೆ ಆಂಜಿನಮ್ಮ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಮೆಳೇಕೋಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಚಿದಾನಂದ್, ಮುಖಂಡರಾದ ಜಗನ್ನಾಥ, ಶಾಂತಕುಮಾರ್, ಎಸ್.ಆರ್.ಮುನಿರಾಜು, ಚಿನ್ನಪ್ಪ, ಚನ್ನಹಳ್ಳಿ ರಾಜಣ್ಣ, ಅರವಿಂದ್, ಮುನಿಕೃಷ್ಣಪ್ಪ, ಕಾಂತರಾಜು, ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಜಿಲ್ಲಾ ಅಧ್ಯಕ್ಷ ಆರ್.ವಿ. ಮಹೇಶ್, ರಾಮಕೃಷ್ಣ, ಮಂಜುನಾಥ್, ಆಂಜಿನಪ್ಪ ಇತರರು ಉಪಸ್ಥಿತರಿದ್ದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…