ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು. ಸರ್ಕಾರಿ ಯೋಜನೆಗಳು ತಲುಪಲು ಕೆಲವು ಸಮಸ್ಯೆಗಳು ಸಾರ್ವಜನಿಕರಿಗೆ ಎದುರಾಗಿದ್ದು ಅವುಗಳನ್ನು ಮುಂದಿನ 15 ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಅಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯಾವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ತೂಬಗೆರೆ ಹೋಬಳಿಯ ಮೆಳೇಕೋಟೆ ಗ್ರಾಮದಲ್ಲಿ ಭಾನುವಾರ ಅಯೋಜಿಸಿದ್ದ ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ನೀಡಿದ್ದ ಎಲ್ಲಾ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಮಹಾತ್ಮ ಗಾಂಧಿಯವರ ಕನಸು ರಾಮರಾಜ್ಯ ವಾಗಬೇಕೆಂಬುದನ್ನು ನಮ್ಮ ಸರ್ಕಾರ ಈಡೇರಿಸಿದೆ. ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಬೇಸಿಗೆಯನ್ನು ಎದುರಿಸ ಬೇಕಾಗಿದ್ದು ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿಯೊಬ್ಬ ನಾಗರಿಕರಿಕನಿಗೂ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ನಾವು ಕೆಲಸವನ್ನು ಮಾಡಬೇಕು ಎಂದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಮೆಳೇಕೋಟೆ ಗ್ರಾ.ಪಂ.ಅಧ್ಯಕ್ಷ ಶ್ರೀನಿವಾಸ, ಉಪಾಧ್ಯಕ್ಷೆ ಭಾಗ್ಯಮ್ಮ, ಹಾಡೋನಹಳ್ಳಿ ಗ್ರಾ.ಪಂ. ಎಚ್.ಎ.ನಾಗರಾಜ್, ತೂಬಗೆರೆ ಗ್ರಾ.ಪಂ ಅಧ್ಯಕ್ಷೆ ನಂಜಮ್ಮ, ಎಸ್.ಎಸ್.ಘಾಟಿ ಗ್ರಾ.ಪಂ ಅಧ್ಯಕ್ಷೆ ಉಮಾಬಾಯಿ, ಹೆಗ್ಗಡಿಹಳ್ಳಿ ಗ್ರಾ.ಪಂ ಅಧ್ಯಕ್ಷೆ ಆಂಜಿನಮ್ಮ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಮೆಳೇಕೋಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ಚಿದಾನಂದ್, ಮುಖಂಡರಾದ ಜಗನ್ನಾಥ, ಶಾಂತಕುಮಾರ್, ಎಸ್.ಆರ್.ಮುನಿರಾಜು, ಚಿನ್ನಪ್ಪ, ಚನ್ನಹಳ್ಳಿ ರಾಜಣ್ಣ, ಅರವಿಂದ್, ಮುನಿಕೃಷ್ಣಪ್ಪ, ಕಾಂತರಾಜು, ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಜಿಲ್ಲಾ ಅಧ್ಯಕ್ಷ ಆರ್.ವಿ. ಮಹೇಶ್, ರಾಮಕೃಷ್ಣ, ಮಂಜುನಾಥ್, ಆಂಜಿನಪ್ಪ ಇತರರು ಉಪಸ್ಥಿತರಿದ್ದರು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…