Categories: ಕೋಲಾರ

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನಕ್ಕೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಆಸ್ಪತ್ರೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ಮಾಡಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಹೊರವಲಯದಲ್ಲಿರುವ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಅಗತ್ಯವಾದ ಕುಂದುಕೊರತೆಗಳ ಬಗ್ಗೆ ಹಾಗೂ ಪರಿಹಾರಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ನಿರ್ಲಕ್ಷ್ಯ ಖಾಸಗಿ ಆಸ್ಪತ್ರೆಗಳ ಬಗ್ಗೆ ವ್ಯಾಮೋಹ ಹೆಚ್ಚಾಗಿದೆ ಅದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಉಚಿತ ಔಷಧಿ ಪೂರೈಕೆ, ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್ ಕೊರತೆಯಾಗ ಬಾರದು ಅವಶ್ಯಕತೆ ಇದ್ದರೆ ಮೊದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕು ಉಚಿತ ಆರೋಗ್ಯ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು, ಯಾವುದೇ ಕಾರಣಕ್ಕೂ ಬಡವರು ಆರೋಗ್ಯ ವಂಚಿತರಾಗಬಾರದು ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ ಜಗದೀಶ್ ಮಾತನಾಡಿ ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿ ಅಂಬುಲೈನ್ಸ್ ಗಳನ್ನು ದೂರವಿಟ್ಟು ನಾಲ್ಕು ಸರ್ಕಾರಿ ಅಂಬುಲೈನ್ಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಚಿರಶಾಂತಿ ವಾಹನವನ್ನು ಕೊಟ್ಟರೆ ಅನುಕೂಲವಾಗುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದರು ಹೊಸ ವಾಹನವನ್ನು ಕೊಡಿಸಲು ಶಾಸಕ ಕೊತ್ತೂರು ಮಂಜುನಾಥ್ ಸಮ್ಮತಿ ಸೂಚಿಸಿದರು ಮೆಡಿಕಲ್ ಕಾಲೇಜಿಗಾಗಿ ಸಾಕಷ್ಟು ಪ್ರಯತ್ನ ಪಟ್ಟು ಜಾರಿ ಮಾಡಿಸಲಾಗಿದೆ ನಮ್ಮ ಗಮನಕ್ಕೆ ಬರದೆ ಸ್ಥಳ ಪರಿಶೀಲಿಸಲು ಅಧಿಕಾರಿಗಳು ಬಂದಿದ್ದಾರೆ ಕಿಡಿಕಾರಿದರು

ತಾಲೂಕಿನಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿ ಕುರಿತು ಚರ್ಚಿಸಿ, ನಿಮ್ಮ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಲಿದೆ ಯಾವುದೇ ಸಮಸ್ಯೆ ಇದ್ದರೂ ಸರಕಾರ ಪರಿಹಾರ ಒದಗಿಸಲಿದೆ ಶಿಕ್ಷಣ ಆರೋಗ್ಯ ಸರಿಯಾದರೆ ಎಲ್ಲವೂ ಸರಿಹೋಗುತ್ತದೆ ಇವುಗಳ ಕಡೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ತಹಶಿಲ್ದಾರ್ ನಯನ, ಜಿಲ್ಲಾ ಆರೋಗ್ಯಧಿಕಾರಿ ಶ್ರೀನಿವಾಸ್, ಸೇರಿದಂತೆ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

14 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago